ಬೆಲೆ ಏರಿಕೆ ನಿರೀಕ್ಷೆಯಲ್ಲಿ ಕರಾವಳಿ ಮಲ್ಲಿಗೆ ಬೆಳೆಗಾರರು
ಮಂಗಳೂರು, ಆಗಸ್ಟ್ 10 : ಮಲ್ಲಿಗೆ ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಕರಾವಳಿಯಲ್ಲಿ ಪ್ರತಿ ಮಳೆಗಾಲದಲ್ಲಿ ಉಡುಪಿ ಮಲ್ಲಿಗೆ ಇಳುವರಿ ಹೆಚ್ಚಾಗಿ ಮಾರುಕಟ್ಟೆಗಳಲ್ಲಿ ಬೇಡಿಕೆ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಆಟಿ ತಿಂಗಳಿನಲ್ಲಿ ಮಲ್ಲಿಗೆ ಇಳುವರಿ ಹೆಚ್ಚಿದ್ದರೂ ಮಾರುಕಟ್ಟೆಗಳಲ್ಲಿ ಬೇಡಿಕೆ ಹೆಚ್ಚಾಗಿತ್ತು.
ಆದರೆ, ಸದ್ಯಕ್ಕೆ ಮಲ್ಲಿಗೆ ಮಾರುಕಟ್ಟೆ ಕುಸಿದಿದ್ದು, ಮಲ್ಲಿಗೆ ಅಟ್ಟೆಯೊಂದಕ್ಕೆ 130ರಿಂದ 150 ರು. ವರೆಗೆ ಕನಿಷ್ಠ ದರ ನಿಗದಿಯಾಗಿದೆ.[ನಾಗರ ಪಂಚಮಿ, ಮಾರುಕಟ್ಟೆಯಲ್ಲಿ ಕೇದಗೆ ಘಮ]

ಶಂಕರಪುರದಲ್ಲಿ ಬೆಳೆಯುವ ಮಲ್ಲಿಗೆ ಹೂವಿಗೆ ಏಪ್ರಿಲ್, ಮೇ ತಿಂಗಳಿನಲ್ಲಿ ಭರ್ಜರಿ ಬೇಡಿಕೆ ಇರುತ್ತದೆ. ಈ ಸೀಸನ್ ನಲ್ಲಿ ಮದುವೆಗಳು ಹೆಚ್ಚು ನಡೆಯುತ್ತವೆ. ಆಗ ರಾಜ್ಯ, ಹೊರರಾಜ್ಯವಲ್ಲದೆ ವಿದೇಶಕ್ಕೂ ಮಲ್ಲಿಗೆ ರಫ್ತಾಗುತ್ತದೆ. ಒಳ್ಳೆ ಬೆಲೆಯೂ ಸಿಗುತ್ತದೆ.
ಈ ಬಾರಿ ಮಳೆಗಾಲ ಆರಂಭಗೊಳ್ಳುತ್ತಿದ್ದಂತೆ ಸಾಕಷ್ಟು ಮಳೆಯಾಗಿದ್ದು, ಮಲ್ಲಿಗೆ ಇಳುವರಿ ಹೆಚ್ಚಾಗಿತ್ತು. ಪ್ರಾರಂಭದಲ್ಲಿ ಮಲ್ಲಿಗೆ ಬೆಳೆಗಾರರು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಬೇಕಾದ ಪ್ರಮೇಯ ಎದುರಾಗಿತ್ತು. ಆಟಿ ತಿಂಗಳಲ್ಲಿ ಸಾಧಾರಣವಾಗಿ ಪೂರಕ ಮಳೆಯಾಗಿ ಇಳುವರಿ ಹೆಚ್ಚಿದ್ದು, ಮಾರುಕಟ್ಟೆ ಧಾರಣೆಯಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ.[ನೀನಿರಲೇ ಇಲ್ಲ ಮಲ್ಲಿಗೆಯು ಘಮಿಸಿದಾಗ]
ಮಳೆಗಾಲದಲ್ಲಿ ಶಂಕರಪುರ ಭಾಗದ ಎಲ್ಲ ಮನೆಗಳಲ್ಲಿಯೂ ಹೇರಳವಾಗಿ ಮಲ್ಲಿಗೆ ಬೆಳೆಯುವುದರಿಂದಾಗಿ ಮಾರುಕಟ್ಟೆ ಬೆಲೆ ಇಳಿಮುಖವಾಗಿದೆ. ಹೊರ ರಾಜ್ಯಗಳಿಂದ ಬೇಡಿಕೆ ಬಂದರೆ ಮಾತ್ರ ಮಾರುಕಟ್ಟೆಗಳಲ್ಲಿ ಉತ್ತಮ ದರ ದೊರೆಯುತ್ತದೆ.
ಇತ್ತೀಚಿನ ವರ್ಷಗಳಲ್ಲಿ ಈ ಭಾಗದಲ್ಲಿ ಮಲ್ಲಿಗೆ ಬೆಳೆಗಾರರ ಸಂಖ್ಯೆ ಅಧಿಕವಾಗಿದೆ. ಆದರೆ ಲಾಭದ ದೃಷ್ಟಿಯಲ್ಲಿ ನೋಡುವುದಾದರೆ ಕೃಷಿಕರಿಗೆ ನಿರೀಕ್ಷಿತ ಮಟ್ಟದಲ್ಲಿ ಫಲ ದೊರೆತಿಲ್ಲ. ಸೋಣ ಆರಂಭವಾಗುವುದರಿಂದ ಇನ್ನಷ್ಟೇ ಮಾರುಕಟ್ಟೆ ಚೇತರಿಸಿಕೊಳ್ಳಬೇಕಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications