ಬೆಲೆ ಏರಿಕೆ ನಿರೀಕ್ಷೆಯಲ್ಲಿ ಕರಾವಳಿ ಮಲ್ಲಿಗೆ ಬೆಳೆಗಾರರು
ಮಂಗಳೂರು, ಆಗಸ್ಟ್ 10 : ಮಲ್ಲಿಗೆ ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಕರಾವಳಿಯಲ್ಲಿ ಪ್ರತಿ ಮಳೆಗಾಲದಲ್ಲಿ ಉಡುಪಿ ಮಲ್ಲಿಗೆ ಇಳುವರಿ ಹೆಚ್ಚಾಗಿ ಮಾರುಕಟ್ಟೆಗಳಲ್ಲಿ ಬೇಡಿಕೆ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಆಟಿ ತಿಂಗಳಿನಲ್ಲಿ ಮಲ್ಲಿಗೆ ಇಳುವರಿ ಹೆಚ್ಚಿದ್ದರೂ ಮಾರುಕಟ್ಟೆಗಳಲ್ಲಿ ಬೇಡಿಕೆ ಹೆಚ್ಚಾಗಿತ್ತು.
ಆದರೆ, ಸದ್ಯಕ್ಕೆ ಮಲ್ಲಿಗೆ ಮಾರುಕಟ್ಟೆ ಕುಸಿದಿದ್ದು, ಮಲ್ಲಿಗೆ ಅಟ್ಟೆಯೊಂದಕ್ಕೆ 130ರಿಂದ 150 ರು. ವರೆಗೆ ಕನಿಷ್ಠ ದರ ನಿಗದಿಯಾಗಿದೆ.[ನಾಗರ ಪಂಚಮಿ, ಮಾರುಕಟ್ಟೆಯಲ್ಲಿ ಕೇದಗೆ ಘಮ]

ಶಂಕರಪುರದಲ್ಲಿ ಬೆಳೆಯುವ ಮಲ್ಲಿಗೆ ಹೂವಿಗೆ ಏಪ್ರಿಲ್, ಮೇ ತಿಂಗಳಿನಲ್ಲಿ ಭರ್ಜರಿ ಬೇಡಿಕೆ ಇರುತ್ತದೆ. ಈ ಸೀಸನ್ ನಲ್ಲಿ ಮದುವೆಗಳು ಹೆಚ್ಚು ನಡೆಯುತ್ತವೆ. ಆಗ ರಾಜ್ಯ, ಹೊರರಾಜ್ಯವಲ್ಲದೆ ವಿದೇಶಕ್ಕೂ ಮಲ್ಲಿಗೆ ರಫ್ತಾಗುತ್ತದೆ. ಒಳ್ಳೆ ಬೆಲೆಯೂ ಸಿಗುತ್ತದೆ.
ಈ ಬಾರಿ ಮಳೆಗಾಲ ಆರಂಭಗೊಳ್ಳುತ್ತಿದ್ದಂತೆ ಸಾಕಷ್ಟು ಮಳೆಯಾಗಿದ್ದು, ಮಲ್ಲಿಗೆ ಇಳುವರಿ ಹೆಚ್ಚಾಗಿತ್ತು. ಪ್ರಾರಂಭದಲ್ಲಿ ಮಲ್ಲಿಗೆ ಬೆಳೆಗಾರರು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಬೇಕಾದ ಪ್ರಮೇಯ ಎದುರಾಗಿತ್ತು. ಆಟಿ ತಿಂಗಳಲ್ಲಿ ಸಾಧಾರಣವಾಗಿ ಪೂರಕ ಮಳೆಯಾಗಿ ಇಳುವರಿ ಹೆಚ್ಚಿದ್ದು, ಮಾರುಕಟ್ಟೆ ಧಾರಣೆಯಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ.[ನೀನಿರಲೇ ಇಲ್ಲ ಮಲ್ಲಿಗೆಯು ಘಮಿಸಿದಾಗ]
ಮಳೆಗಾಲದಲ್ಲಿ ಶಂಕರಪುರ ಭಾಗದ ಎಲ್ಲ ಮನೆಗಳಲ್ಲಿಯೂ ಹೇರಳವಾಗಿ ಮಲ್ಲಿಗೆ ಬೆಳೆಯುವುದರಿಂದಾಗಿ ಮಾರುಕಟ್ಟೆ ಬೆಲೆ ಇಳಿಮುಖವಾಗಿದೆ. ಹೊರ ರಾಜ್ಯಗಳಿಂದ ಬೇಡಿಕೆ ಬಂದರೆ ಮಾತ್ರ ಮಾರುಕಟ್ಟೆಗಳಲ್ಲಿ ಉತ್ತಮ ದರ ದೊರೆಯುತ್ತದೆ.
ಇತ್ತೀಚಿನ ವರ್ಷಗಳಲ್ಲಿ ಈ ಭಾಗದಲ್ಲಿ ಮಲ್ಲಿಗೆ ಬೆಳೆಗಾರರ ಸಂಖ್ಯೆ ಅಧಿಕವಾಗಿದೆ. ಆದರೆ ಲಾಭದ ದೃಷ್ಟಿಯಲ್ಲಿ ನೋಡುವುದಾದರೆ ಕೃಷಿಕರಿಗೆ ನಿರೀಕ್ಷಿತ ಮಟ್ಟದಲ್ಲಿ ಫಲ ದೊರೆತಿಲ್ಲ. ಸೋಣ ಆರಂಭವಾಗುವುದರಿಂದ ಇನ್ನಷ್ಟೇ ಮಾರುಕಟ್ಟೆ ಚೇತರಿಸಿಕೊಳ್ಳಬೇಕಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications