ಜನಾರ್ದನ ಪೂಜಾರಿ ವಿರುದ್ಧ ಕ್ರಮಕ್ಕೆ ಜೆಡಿಎಸ್ ಒತ್ತಾಯ
ಮಂಗಳೂರು ಮಾರ್ಚ್ 16: ಕೇಂದ್ರ ದಲ್ಲಿನ ಮೋದಿ ಆಡಳಿತ ವನ್ನು ಹೊಗಳಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ದನ ಪೂಜಾರಿಅವರ ವಿರುದ್ಧ ಒಂದೆಡೆ ಕಾಂಗ್ರೆಸ್ ಮುಖಂಡರೇ ಕಿಡಿಕಾರ ತೊಡಗಿದ್ದಾರೆ .
ಇನ್ನೊಂದೆಡೆ ಜೆಡಿಎಸ್ ನಾಯಕರು ಜನಾರ್ದನ ಪೂಜಾರಿ ವಿರುದ್ಧ ಆಕ್ರೋಶ ವ್ಯಕ್ತ ಪಡೆಸುತ್ತಿದ್ದಾರೆ. ಮಂಗಳೂರಿನ ಲ್ಲಿ ಇತ್ತೀಚೆಗೆ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಜನಾರ್ದನ ಪೂಜಾರಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ. ಅದನ್ನು ಮುಂದುವರೆಸಬೇಕು ಎಂದು ಹೇಳಿದ್ದರು ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದು ಹೇಳಿದೆ ನೀಡಿ ಅಚ್ಚರಿ ಮೂಡಿಸಿದ್ದರು.
ಅದಲ್ಲದೇ ತಮ್ಮ ಮಾದ್ಯಮ ಗೋಷ್ಠಿಯಲ್ಲಿ ಕೆಲ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಪೂಜಾರಿ ವಿರುದ್ಧ ಜೆಡಿಎಸ್ ಆಕ್ಷೇಪ ವ್ಯಕ್ತಪಡೆಸಿದೆ. ಜನಾರ್ಧನ ಪೂಜಾರಿ ಅವರ ಹೇಳಿಕೆಯಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಹೀಗಾಗಿ ಅವರ ವಿರುದ್ಧ ಕಾಂಗ್ರೆಸ್ ಈ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ ಆಗ್ರಹಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು , ಮೋದಿ ಪುನರಾಯ್ಕೆಯಾಗಬೇಕು ಎನ್ನುವ ಪೂಜಾರಿ, ಮತ್ತೂಂದೆಡೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿ ಅನ್ನುತ್ತಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದ ನಾಯಕರನ್ನು ಟೀಕಿಸುತ್ತಾರೆ. ಕೆಲವರಿಗೆ ಟಿಕೆಟ್ ಕೊಡಬೇಡಿ ಅನ್ನುತ್ತಾರೆ. ಚುನಾವಣೆ ಹೊಸ್ತಿಲಿನಲ್ಲಿ ಇಂತಹ ಹೇಳಿಕೆ ನೀಡಲು ಇವರು ಯಾರು? ಎಂದು ಮಹಮ್ಮದ್ ಕುಂಞಿ ಪ್ರಶ್ನಿಸಿದ್ದಾರೆ.
ಪೂಜಾರಿ ಅವರ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ ಆಗಿರ ಬಹುದು. ಅವರನ್ನು ಸಮಾಜ ಹಾಗೂ ಅಲ್ಪಸಂಖ್ಯಾಕ ಸಮುದಾಯ ತಿರಸ್ಕರಿಸಿದೆ. ಹಾಗಾಗಿ ಅವರ ವ್ಯಕ್ತಿಯ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರು ಮೌನವಾಗಿರಬಾರದು. ಜೆಡಿಎಸ್ ಕಾಂಗ್ರೆಸ್ನ ಮೈತ್ರಿ ಪಕ್ಷವಾಗಿರುವ ಕಾರಣ ಅದರ ರಾಜ್ಯ ನಾಯಕರಿಗೆ ಈ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಅವರು ಹೇಳಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications