ಮಂಗಳೂರಿನಿಂದ ದೆಹಲಿಗೆ ನೇರ ಜೆಟ್ ವಿಮಾನ ಸಂಪರ್ಕ
9W763 ನಂಬರ್ ನ ಜೆಟ್ ಏರ್ ವೇಸ್ ವಿಮಾನ ಬೆಳಗ್ಗೆ 8ಗಂಟೆಗೆ ಮಂಗಳೂರಿನಿಂದ ಹೊರಡಲಿದ್ದು, 10.50ಕ್ಕೆ ದೆಹಲಿ ತಲುಪಲಿದೆ. 9W764 ನಂಬರ್ ವಿಮಾನ ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಹೊರಡಲಿದ್ದು, 5.50ಕ್ಕೆ ಮಂಗಳೂರಿಗೆ ಆಗಮಿಸಲಿದೆ.
ಮಂಗಳೂರು, ಜನವರಿ 17: : ಕರಾವಳಿ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ ಹತ್ತಿರವಾಗಿವೆ. ಜೆಟ್ ಏರ್ ವೇಸ್ ಮಂಗಳೂರು-ದೆಹಲಿ ನಡುವೆ ನೇರ ವಿಮಾನ ಸೇವೆ ಆರಂಭಗೊಂಡಿದೆ.
ಜನವರಿ.16ರ ಸೋಮವಾರದಿಂದ ಮಂಗಳೂರು-ದೆಹಲಿ, ದೆಹಲಿ-ಮಂಗಳೂರು ನಡುವೆ ವಿಮಾನ ಸೇವೆ ಆರಂಭವಾಗಿದೆ. 159 ಪ್ರಯಾಣಿಕರು ಸೋಮವಾರ ಮಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. 135 ಪ್ರಯಾಣಿಕರು ದೆಹಲಿಯಿಂದ ಮಂಗಳೂರಿಗೆ ಆಗಮಿಸಿದರು.

9W763 ನಂಬರ್ ನ ಜೆಟ್ ಏರ್ ವೇಸ್ ವಿಮಾನ ಬೆಳಗ್ಗೆ 8ಗಂಟೆಗೆ ಮಂಗಳೂರಿನಿಂದ ಹೊರಡಲಿದ್ದು, 10.50ಕ್ಕೆ ದೆಹಲಿ ತಲುಪಲಿದೆ. 9W764 ನಂಬರ್ ವಿಮಾನ ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಹೊರಡಲಿದ್ದು, 5.50ಕ್ಕೆ ಮಂಗಳೂರಿಗೆ ಆಗಮಿಸಲಿದೆ.
ಈ ವಿಮಾನ ಸೇವೆಯಿಂದಾಗಿ ಮಂಗಳೂರು ಮತ್ತು ರಾಷ್ಟ್ರರಾಜಧಾನಿ ಮತ್ತಷ್ಟು ಹತ್ತಿರವಾಗಿದೆ. ಇಷ್ಟು ದಿನ ಮಂಗಳೂರಿನಿಂದ ದೆಹಲಿಗೆ ನೇರ ವಿಮಾನ ಸೇವೆ ಇರಲಿಲ್ಲ. ಇದರಿಂದಾಗಿ ಪ್ರಯಾಣಿಕರು ಬೆಂಗಳೂರು ಅಥವ ಮುಂಬೈಗೆ ತೆರಳಿ ಅಲ್ಲಿಂದ ದೆಹಲಿ ತಲುಪಬೇಕಿತ್ತು.
ಮಂಗಳೂರಿನಿಂದ 2 ಗಂಟೆ 50 ನಿಮಿಷದಲ್ಲಿ ನೇರವಾಗಿ ದೆಹಲಿಗೆ ತೆರಳಬಹುದಾಗಿದೆ. ಈ ವಿಮಾನ ಸೇವೆಯಿಂದಾಗಿ ಜೈಪುರ, ಲಕ್ನೋ, ವಾರಣಾಸಿ, ಪಾಟ್ನಾ, ಗೌಹಾತಿ ಮುಂತಾದ ನಗರಗಳಿಗೆ ತೆರಳುವ ಪ್ರಯಾಣಿಕರಿಗೂ ಅನುಕೂಲವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications