ನಿಗೂಢವಾಗಿ ನಾಪತ್ತೆಯಾಗಿದ್ದ ಜ್ಯುವೆಲರ್ಸ್ ಮಾಲೀಕನ ಶವ ಸಮುದ್ರ ಕಿನಾರೆಯಲ್ಲಿ ಪತ್ತೆ
ಮಂಗಳೂರು,ಆಗಸ್ಟ್ 28: ನಿಗೂಢವಾಗಿ ನಾಪತ್ತೆಯಾಗಿದ್ದ ಜ್ಯುವೆಲರ್ಸ್ ಮಳಿಗೆ ಮಾಲೀಕನ ಶವ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಮಂಗಳೂರು ಹೊರವಲಯದ ಬೊಳಿಯಾರ್ ನ ಪ್ರಭಾ ಜ್ಯುವೆಲರ್ಸ್ ಮಾಲೀಕ ಪ್ರಭಾಕರ ಆಚಾರ್ಯ ಅವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಸುರತ್ಕಲ್ ಸಮೀಪದ ಮುಕ್ಕ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಕಳೆದ ರವಿವಾರ ಮಧ್ಯಾಹ್ನ ಔಷಧ ತರಲೆಂದು ಮನೆಯಿಂದ ಹೊರಟಿದ್ದ ಪ್ರಭಾಕರ ಆಚಾರ್ಯ ಅವರು ಬಳಿಕ ನಾಪತ್ತೆಯಾಗಿದ್ದರು. ಅವರ ಕಾರು ಮುಡಿಪು ಎಂಬಲ್ಲಿ ಪತ್ತೆಯಾಗಿತ್ತು. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಪ್ರಭಾಕರ ಆಚಾರ್ಯ ಅವರು ನಾಪತ್ತೆಯಾಗಿರುವುದಕ್ಕೆ ಸಂಬಂಧಿಸಿದಂತೆ ಅವರ ಮಗ ಕೊಣಾಜೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

57 ವರ್ಷದ ಪ್ರಭಾಕರ ಆಚಾರ್ಯ ಅವರು ಬೋಳಿಯಾರ್ ನಲ್ಲಿ ಪ್ರಭಾ ಜುವೆಲರ್ಸ್ ಹಾಗೂ ಪ್ರಭಾ ಫೈನಾನ್ಸ್ ಗಳನ್ನು ನಡೆಸುತ್ತಿದ್ದರು.
ಪ್ರಭಾಕರ ಆಚಾರ್ಯ ಅವರ ಕಾರು ಮುಡಿಪು ಬಳಿ ಪತ್ತೆಯಾಗಿತ್ತು. ಅದರೆ ಅವರ ಶವ ಸುರತ್ಕಲ್ ನಲ್ಲಿ ಇಂದು ಪತ್ತೆಯಾಗಿದೆ. ಪ್ರಭಾಕರ್ ಆಚಾರ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಈ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಈ ನಿಟ್ಟಿನಲ್ಲೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications