ಮಂಗಳೂರಿನಲ್ಲೂ ಪ್ರಾಮಾಣಿಕರಿದ್ದಾರೆ: ಉದಾಹರಣೆಗೆ...
ಮಂಗಳೂರು, ನವೆಂಬರ್,15: ಚಿನ್ನ ಸಿಕ್ಕರೆ ಸಾಕು ಎನ್ನುವ ಜನ ಈಗಿದ್ದಾರೆ. ಆದರೆ ಇಲ್ಲೊಬ್ಬರು ತನಗೆ ಸಿಕ್ಕ ಲಕ್ಷಾಂತರ ರು ಮೌಲ್ಯದ ವಡವೆಯನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಇವರು ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ಗ್ರಾಮದ ನಿವಾಸಿ ಹಮೀದ್ ಇವರು ತಮಗೆ ಸಿಕ್ಕ ವಡವೆಯನ್ನು ಮರಳಿಸಿ ಪ್ರಾಮಾಣಿಕತೆಗೆ ಸಾಕ್ಷಿಯಾಗಿದ್ದಾರೆ.
ಭಾನುವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಮೀದ್ ಅವರಿಗೆ ಪ್ಲಾಸ್ಟಿಕ್ ಕವರೊಂದು ಸಿಕ್ಕಿದೆ. ಕವರ್ನ್ನು ಬಿಡಿಸಿ ನೋಡಿದಾಗ ಅವರಿಗೆ ಶಾಕ್ ಕಾದಿತ್ತು. ಯಾಕೆಂದರೆ ಅದರಲ್ಲಿ ಕಂಡಿದ್ದು ಬರೋಬ್ಬರಿ 320 ಗ್ರಾಂ ತೂಕದ ಚಿನ್ನಾಭರಣಗಳು.[ಈ ಆಟೋ ಚಾಲಕನ ಪ್ರಾಮಾಣಿಕತೆಗೆ ಬೆಲೆಕಟ್ಟಲು ಸಾಧ್ಯವೆ?]

ಆಭರಣವನ್ನು ವಾರಸುದಾರರಿಗೆ ಹಿಂದಿರುಗಿಸಬೇಕೆಂದು ನಿರ್ಧರಿಸಿ ಕೂಡಲೇ ಬಾಳ್ತಿಲ ಗ್ರಾಮ ಪಂಚಾಯತ್ ಸದಸ್ಯ ಶಿವಕುಮಾರ್ರ ಬಳಿ ಬಂದು ನಡೆದ ವಿಚಾರವನ್ನು ತಿಳಿಸಿ, ವಾರಸುದಾರರಿಗೆ ಒಪ್ಪಿಸುವಂತೆ ಮನವಿ ಮಾಡಿಕೊಂಡರು. ಶಿವಕುಮಾರ್ ಅವರು ಕೂಡಲೇ ಹಮೀದ್ ಅವರೊಂದಿಗೆ ಬಂಟ್ವಾಳ ನಗರ ಠಾಣೆಗೆ ಆಗಮಿಸಿ ಚಿನ್ನಾಭರಣಗಳನ್ನು ಪೊಲೀಸರಿಗೊಪ್ಪಿಸುವಂತೆ ಕೋರಿದ್ದರು.[ಕಳ್ಳನ ಹೆಂಡತಿಯ ಪ್ರಾಮಾಣಿಕತೆ. ಅಪರಾಧ ವರದಿಯಲ್ಲಿ ಒಂದು ನೀತಿ ಕತೆ]
ಇತ್ತ ಸೋಮವಾರ ಪಾಣೆ ಮಂಗಳೂರಿನ ನರಸಿಂಹ ಪ್ರಭು ಎಂಬುವರು ಚಿನ್ನಾಭರಣ ಕಳೆದುಕೊಂಡ ಕುರಿತು ದೂರು ನೀಡಲೆಂದು ಬಂಟ್ವಾಳ ನಗರ ಠಾಣೆಗೆ ಆಗಮಿಸಿದ್ದರು. ಹಮೀದ್ ಮತ್ತು ಶಿವಕುಮಾರ್ ಅವರು ತಂದೊಪ್ಪಿಸಿರುವ ಆಭರಣಗಳು ಅವರದ್ದೇ ಎಂದು ಖಚಿತಪಡಿಸಿಕೊಂಡರು. ಕೂಡಲೇ ಹಮೀದ್ ಮತ್ತು ಶಿವಕುಮಾರ್ ಅವರನ್ನು ಕರೆಸಿ ಅವರ ಸಮಕ್ಷಮದಲ್ಲಿ ಚಿನ್ನಾಭರಣಗಳನ್ನು ನರಸಿಂಹ ಪ್ರಭು ಅವರಿಗೆ ಹಸ್ತಾಂತರಿಸಲಾಯಿತು. ಧರ್ಮದ ಹೆಸರಿನಲ್ಲಿ ಕಿತ್ತಾಟ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಮರಳಿಸಿದ ಹಮೀದ್ ಅವರ ಪ್ರಾಮಾಣಿಕತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನೂ ಇವರ ಪ್ರಾಮಾಣಿಕತೆಯನ್ನು ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಸಿ.ಬಿ.ವೇದಮೂರ್ತಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ .ಆರ್, ಬಂಟ್ವಾಳ ನಗರ ಠಾಣೆಯ ಎಸ್ಸೈ ನಂದಕುಮಾರ್ ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications