ಜಿಯೋ ಬಳಕೆದಾರರಿಗೆ ಗುಡ್ನ್ಯೂಸ್: ಮಂಗಳೂರಿನಲ್ಲಿ ಜಿಯೋ 5G ಸೇವೆ ಆರಂಭ
ಮಂಗಳೂರು, ಜನವರಿ 13: ಮಂಗಳೂರಿನಲ್ಲಿ ಜಿಯೋ 5ಜಿ ಸೇವೆಗಳನ್ನು ಆರಂಭಿಸಿದೆ. ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಲು ಅವಕಾಶವನ್ನು ಮಂಗಳೂರಿನಲ್ಲಿರುವ ಜಿಯೋ ಬಳಕೆದಾರರಿಗೆ ನೀಡಿದೆ. ಮಂಗಳೂರಿನಲ್ಲಿ 5ಜಿ ಸೇವೆ ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ.
ಕರ್ನಾಟಕದ (ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ), ಕೇರಳದ (ಚೆರ್ತಾಲ), ತೆಲಂಗಾಣದ (ವಾರಂಗಲ್, ಕರೀಂನಗರ), ಅಸ್ಸಾಂನ (ಗುವಾಹಟಿ) ಮತ್ತು ಮಹಾರಾಷ್ಟ್ರದ (ಸೋಲಾಪುರ)ದ ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ವಕ್ತಾರರು,"ಮಂಗಳೂರು ನಗರದಲ್ಲಿ 5ಜಿ ಅನ್ನು ಹೊರತರಲು ನಾವು ಹೆಮ್ಮೆಪಡುತ್ತೇವೆ ಮತ್ತು ನಾವು ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದ ನಂತರ ನಮ್ಮ ಅತಿದೊಡ್ಡ ಅನಾವರಣದಲ್ಲಿ ಇದೂ ಒಂದಾಗಿದೆ. ಜಿಯೋ ಟ್ರೂ 5ಜಿ ತಂತ್ರಜ್ಞಾನ ರೂಪಾಂತರದ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ" ಎಂದು ಹೇಳಿದ್ದಾರೆ.

"ಮಂಗಳೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರಷ್ಟೇ ಅಲ್ಲ, ಜೊತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತವೆ" ಎಂದು ಹೇಳಿದ್ದಾರೆ.
"ಜಿಯೋ ಇಂಜಿನಿಯರ್ಗಳು ಟ್ರೂ-5ಜಿ ಪ್ರಯೋಜನಗಳನ್ನು ಪ್ರತಿಯೊಬ್ಬ ಭಾರತೀಯರಿಗೂ ತಲುಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರಿಂದ ನಮ್ಮ ಮಹಾನ್ ದೇಶದ ಪ್ರತಿ ನಾಗರಿಕರು ಈ ತಂತ್ರಜ್ಞಾನದ ಪರಿವರ್ತನಾ ಶಕ್ತಿ ಮತ್ತು ಅದ್ಭುತ ಪ್ರಯೋಜನಗಳನ್ನು ಅನುಭವಿಸಬಹುದು.ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ," ಎಂದು ಜಿಯೋ ವಕ್ತಾರರು ಹೇಳಿದ್ದಾರೆ.
ಜನವರಿ 10ರಿಂದ ಕರ್ನಾಟಕ (ಹುಬ್ಬಳ್ಳಿ-ಧಾರವಾಡ, ಬೆಳಗಾವಿ), ಕೇರಳ (ಚೇರ್ತಲ), ತೆಲಂಗಾಣ (ವಾರಂಗಲ್, ಕರೀಂನಗರ), ಅಸ್ಸಾಂ (ಗುವಾಹತಿ) ಮತ್ತು ಮಹಾರಾಷ್ಟ್ರ (ಸೋಲಾಪುರ) 5 ರಾಜ್ಯಗಳ ಮಂಗಳೂರು ಮತ್ತು 7 ಇತರ ನಗರಗಳಲ್ಲಿ ಜಿಯೋ ಬಳಕೆದಾರರನ್ನು ಆಹ್ವಾನಿಸಲಾಗುತ್ತದೆ. ಜಿಯೋ ವೆಲ್ಕಮ್ ಆಫರ್ ಮೂಲಕ ಗ್ರಾಹಕರು 1 ಜಿಬಿಪಿಎಸ್+ ವೇಗದಲ್ಲಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅನಿಯಮಿತ ಡೇಟಾ ಅನುಭವಿಸಬಹುದಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications