ಮಂಗಳೂರಲ್ಲಿ 'ಮಾದಕ' ಪ್ರೇಮ: ಪ್ರಿಯನಿಗಾಗಿ ಜೈಲಿಗೆ ಗಾಂಜಾ ತಂದ ಯುವತಿ
ಮಂಗಳೂರು, ಅಕ್ಟೋಬರ್ 13: ಮಂಗಳೂರು ಜೈಲ್ ನ ವಿಚಾರಣಾಧೀನ ಕೈದಿಗೆ ಗಾಂಜಾ ಸರಬರಾಜು ಮಾಡಿ ಮಂಗಳೂರು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಯುವತಿಯ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ.
ಇದೊಂದು ಲವ್ಜಿಹಾದ್ ಪ್ರಕರಣ ಎಂದು ಅರೋಪಿಸಲಾಗುತ್ತಿದೆ. ನಿನ್ನೆ ಮಂಗಳೂರು ಜೈಲಿಗೆ ವಿಚಾರಣಾಧೀನ ಕೈದಿಯನ್ನು ಭೇಟಿ ಯಾಗಲು ಬಂದಿದ್ದ ಯುವತಿಯನ್ನು ಸಿಸಿಬಿ ಪೊಲೀಸರು ಗಾಂಜಾ ಪ್ಯಾಕೆಟ್ ಸಮೇತ ಬಂಧಿಸಿದ್ದರು. ಜೈಲಿನಲ್ಲಿರುವ ತನ್ನ ಪ್ರಿಯಕರನಿಗೆ ಗಾಂಜಾ ನೀಡಲು ಬಂದಿದ್ದಾಗ ಯುವತಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ.
ಜೈಲಿನಲ್ಲಿ ಗಾಂಜಾ ದೊಡನೆ ಯುವತಿ ಸಿಕ್ಕಿಬಿದ್ದ ಪ್ರಕರಣ ರಾಜ್ಯದಾದ್ಯಂತ ಭಾರಿ ಸುದ್ದಿ ಆಗಿತ್ತು. ಆದರೆ ಇದೀಗ ಅದರ ಒಳಕತೆ ಬಹಿರಂಗವಾಗಿದ್ದು, ಈ ಪ್ರಕರಣ ಮುಂದೆ ಲವ್ ಜಿಹಾದ್ ರೂಪವನ್ನೂ ಪಡೆದುಕೊಳ್ಳುವ ಆತಂಕವಿದೆ.
ಜೈಲಿಗೆ ಗಾಂಜಾ ಹಿಡಿದುಕೊಂಡು ಬಂದ ಯುವತಿ ಮೂಲತಃ ಸುಳ್ಯದವಳು. ಮಂಗಳೂರಿನ ವಿಶ್ವವಿದ್ಯಾಲಯದ ಪತ್ರಿಕೊದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆಗೆ ಜೈಲಿನಲ್ಲಿರುವ ಕೊಲೆ ಆರೋಪಿ ಮುಸ್ತಾಫ ಎಂಬಾತನೊಂದಿಗೆ ಸ್ನೇಹ ಬೆಳೆದಿತ್ತು.

ಸುದ್ದಿವಾಹಿನಿಯಲ್ಲಿ ಇಂಟರ್ನ್ ಆಗಿದ್ದ ಯುವತಿ
ಯುವತಿಯು ಮಂಗಳೂರಿನ ಸ್ಥಳೀಯ ಸುದ್ದಿವಾಹಿನಿ ಯಲ್ಲಿ ಇಂಟರ್ನ್ ಶಿಪ್ ಮಾಡುತ್ತಿದ್ದ ಸಂದರ್ಭ ಯುವತಿ ವಾಮಂಜೂರಿನ ಸಂಬಂಧಿಯೊಬ್ಬರ ಮನೆಯಲ್ಲಿ ವಾಸವಾಗಿದ್ದಳು. ಈ ಸಂದರ್ಭದಲ್ಲಿಯೇ ಮಂಗಳೂರು ಹೊರವಲಯದ ವಾಮಾಂಜೂರು ನಿವಾಸಿಯಾಗಿರುವ ಮುಸ್ತಫಾ ನೊಂದಿಗೆ ಈಕೆಗೆ ಸ್ನೇಹ ಬೇಳೆದಿತ್ತು. ನಂತರ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಹಲವಾರು ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿರುವ ಮುಸ್ತಫಾ ಗಾಂಜಾ ವ್ಯಸನಿ ಆಗಿದ್ದ. ಮುಸ್ತಾಫ ಜೈಲಿನಲ್ಲಿ ಇದ್ದುಕೊಂಡು ಯುವತಿಯ ಕೈಯಲ್ಲಿ ಗಾಂಜಾ ತರಿಸಿ ಕೊಳ್ಳುತ್ತಿದ್ದ.

ಪೊಲೀಸರ ಮಾರುವೇಷದ ಕಾರ್ಯಾಚರಣೆ
ಈ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಸಿಸಿಬಿ ಪೊಪಲೀಸರು ಮಾರು ವೇಷದಲ್ಲಿ ಮಂಗಳೂರು ಕಾರಾಗೃದ ಎದುರು ಹೊಂಚುಹಾಕಿ ಕುಳಿತಿದ್ದರು. ಮುಸ್ತಫಾನ ಸ್ನೇಹಿತ ನೋರ್ವನಿಂದ ಗಾಂಜಾ ಪ್ಯಾಕೆಟ್ ಗಳನ್ನು ಪಡೆದ ಯುವತಿ ಜೈಲಿಗೆ ಬಂದೊಡನೆ ಪೊಲೀಸರ ಕೈಗೆ ಸಿಕ್ಕಿಬಿದ್ದಾಳೆ.

ಎರಡು ಕೊಲೆ ಪ್ರಕರಣದಲ್ಲಿ ಭಾಗಿ ಆಗಿರುವ ಮುಸ್ತಫಾ
2005 ರಲ್ಲಿ ಮೂಡಶೇಡ್ಡೆ ಯಲ್ಲಿ ನಡೆದ ಶರಣ್ ಎಂಬಾತನ ಕೊಲೆ ಸೇರಿದಂತೆ 2 ಹತ್ಯೆ ಪ್ರಕರಣದ ಆರೋಪಿ ಆಗಿರುವ ಮುಸ್ತಫಾ ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಹಲವು ಸಮಯಗಳ ಬಳಿಕ ನಿರೀಕ್ಷಣಾ ಜಾಮೀನು ಮೂಲಕ ಮುಸ್ತಫಾ ಹೊರಬಂದಿದ್ದ. ಹಲವು ಅಪರಾದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮುಸ್ತಫಾ ಮೂರು ತಿಂಗಳ ಹಿಂದೆ ವಾಮಂಜೂರಿನಲ್ಲಿ ಹಫ್ತಾ ವಸೂಲಿಗಾಗಿ ಖಾಲಿದ್ ಎಂಬಾತನ ಕೊಲೆಯತ್ನ ನಡೆಸಿ ಮತ್ತೆ ಮಂಗಳೂರು ಜಿಲ್ಲಾ ಕಾರಾಗೃಹ ಸೇರಿದ್ದ. ಈ ನಡುವೆ ಮುಸ್ತಾಫಗೆ ಜೈಲಿಗೆ ಗಾಂಜಾ ಸರಬರಾಜು ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ದೊರೆತಿತ್ತು. ಈ ಹಿಂದೆ ಮೂರು ಬಾರಿ ಯುವತಿ ಜೈಲಿಗೆ ಭೇಟಿ ನೀಡಿ ಮುಸ್ತಫಾ ಗೆ ಗಾಂಜಾ ಸರಬರಾಜು ಮಾಡಿರುವುದು ಈಗ ಬೆಳಕಿಗೆ ಬಂದಿದೆ.

ಲವ್ ಜಿಹಾದ್ ತಿರುವು ಸಾಧ್ಯತೆ
ಯುವತಿ ಜೈಲಿಗೆ ಗಾಂಜಾ ಸರಬರಾಜು ಮಾಡಲು ಏನು ಕಾರಣ? ಬ್ಯಾಕ್ ಮೇಲ್ ಏನಾದರೂ ನಡೆದಿದೆಯಾ? ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಈ ನಡುವೆ ಪ್ರಕರಣ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ದಿನಗಳಲ್ಲಿ ಈ ಪ್ರಕರಣ ಮತ್ತಷ್ಟು ಕಾವು ಪಡೆದು ಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ. ಗಾಂಜಾದೊಂದಿಗೆ ಸಿಕ್ಕಿಬಿದ್ದ ಯುವತಿಗೆ ಬುದ್ದಿ ಹೇಳಿ ಆಕೆಯನ್ನು ಬಿಟ್ಟು ಕಳಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications