'ರಫೇಲ್ ಒಪ್ಪಂದದಲ್ಲಿ ಕೇಂದ್ರ ಪಾರದರ್ಶಕತೆ ತೋರುತ್ತಿಲ್ಲ'
ಮಂಗಳೂರು, ಡಿಸೆಂಬರ್ 18: ರಫೇಲ್ ಒಪ್ಪಂದದಲ್ಲಿ ಕೇಂದ್ರ ಪಾರದರ್ಶಕತೆ ತೋರುತ್ತಿಲ್ಲ. ರಫೇಲ್ ಡೀಲ್ ಹಗರಣದ ಬಗ್ಗೆ ಜಂಟಿ ಸದನ ಸಮಿತಿ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ಕೇಂದ್ರ ಮಾಜಿ ಸಚಿವ ಪಲ್ಲಂ ರಾಜು ಒತ್ತಾಯಿಸಿದ್ದಾರೆ .
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ರಫೇಲ್ ಡೀಲ್ ಬಗ್ಗೆ ಕೇಂದ್ರ ಸರ್ಕಾರದ ಸುಳ್ಳು ಅಫಿಡವಿಟನ್ನು ನಂಬಿ ಸುಪ್ರೀಂ ವಿಚಾರಣೆಗೆ ನಿರಾಕರಿಸಿದೆ. ರಫೇಲ್ ಒಪ್ಪಂದದ ಬಗ್ಗೆ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರಕಾರದಿಂದ ತಪ್ಪು ಮಾಹಿತಿ ರವಾನೆಯಾಗಿದೆ ಎಂದು ಆರೋಪಿಸಿದರು.
ರಫೇಲ್ ಒಪ್ಪಂದ ದೇಶದ ರಕ್ಷಣಾ ವಿಭಾಗಗಕ್ಕೆ ಸಂಬಂಧಿಸಿದ ಅತ್ಯಂತ ದೊಡ್ಡ ಹಗರಣ. ಎಚ್ಎಎಲ್ ದೇಶದ ರಕ್ಷಣಾ ವಿಭಾಗಕ್ಕೆ ವಿಮಾನ ತಯಾರಿಸಲು ಸಾಮರ್ಥ್ಯ ಹೊಂದಿರುವ 40ವರ್ಷಗಳ ಅನುಭವ ಹೊಂದಿರುವ ಏಕೈಕ ಸಂಸ್ಥೆ. ಇದನ್ನು ಹೊರತು ಪಡಿಸಿ ಇನ್ನೊಂದು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕಾರಣವೇನು ? ಎಂದು ಅವರು ಪ್ರಶ್ನಿಸಿದರು.

ವಿಮಾನ ಖರೀದಿಗೆ ಸಂಬಂಧಿಸಿದಂತೆ ಯುಪಿಎ ಸರಕಾರ ಇರುವಾಗ ಆಗಿರುವ ಒಪ್ಪಂದವನ್ನು ಬದಲಾಯಿಸಿ ರಫೇಲ್ ಮೂಲಕ ರಿಲಾಯೆನ್ಸ್ ಡಿಫೆನ್ಸ್ ಲಿಮಿಟೆಡ್ ಜೊತೆ ಒಡಂಬಡಿಕೆ ಮಾಡಿಕೊಳ್ಳಲು ಕಾರಣವೇನು ?ಖರೀದಿಸುವ ವಿಮಾನದ ಮೊತ್ತವನ್ನು ಮೂರು ಪಟ್ಟಿಗಿಂತಲೂ ಹೆಚ್ಚಿಸಿದ ಕಾರಣವೇನು ? ಇದರಿಂದ ದೇಶದ ಬೊಕ್ಕಸಕ್ಕೆ 41,205 ಕೋಟಿ ರೂಪಾಯಿ ನಷ್ಟವಾಗಲಿದೆ.
ಈ ಹಗರಣವನ್ನು ದೇಶದ ಜನರ ಮುಂದೆ ಬಹಿರಂಗ ಪಡಿಸಬೇಕಾದ ಹೊಣೆಗಾರಿಕೆ ದೇಶದ ಪ್ರಧಾನಿ ಅವರಿಗೆ ಇದೆ ಎಂದು ಪಲ್ಲಂ ರಾಜು ತಿಳಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications