ಕಾವ್ಯ ಸಾವಿನ ನ್ಯಾಯಕ್ಕಾಗಿ ಅರೆಬೆತ್ತಲೆ ಮೆರವಣಿಗೆ, ಹೋರಾಟಗಾರರ ಎಚ್ಚರಿಕೆ
Recommended Video

ಮಂಗಳೂರು, ಸೆಪ್ಟೆಂಬರ್ 13: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಕುರಿತು ಪೊಲೀಸರು ನಡೆಸಿದ ತನಿಖೆಯ ಪೂರ್ಣವರದಿಯ ಸತ್ಯಾಂಶವನ್ನು ಸಪ್ಟೆಂಬರ್ 20 ರ ಒಳಗೆ ಬಹಿರಂಗಗೊಳಿಸದಿದ್ದರೆ ಸಪ್ಟೆಂಬರ್ 23 ರಂದು ಮಂಗಳೂರಿನಲ್ಲಿ ಅರೆಬೆತ್ತಲೆ ಮೆರವಣೆಗೆ ನಡೆಸುವುದಾಗಿ 'ಜಸ್ಟಿಸ್ ಫಾರ್ ಕಾವ್ಯ' ಹೋರಾಟ ಸಮಿತಿ ಎಚ್ಚರಿಸಿದೆ.
ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ದಿನಕರ್ ಶಟ್ಟಿ, ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ಅವರ ಸಾವು ಸಂಭವಿಸಿ ಇಂದಿಗೆ 53ದಿನಗಳು ಕಳೆದಿದೆ. ಆದರೆ ಈವರೆಗೆ ಕಾವ್ಯ ಸಾವಿನ ಸತ್ಯಾಂಶ ಸ್ಪಷ್ಟಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸಿಪಿ ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಆರಂಭವಾಗಿದ್ದ ತನಿಖೆ ಪೂರ್ಣಗೊಂಡಿದೆ. ಆದರೆ ಪೊಲೀಸ್ ಇಲಾಖೆ ತನಿಖೆಯ ವರದಿಯನ್ನು ಬಹಿರಂಗಗೊಳಿಸಿಲ್ಲ ಎಂದು ಅವರು ಕಿಡಿಕಾರಿದರು.
ಕಾವ್ಯ ಸಾವಿನ ನ್ಯಾಯಕ್ಕಾಗಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಾದ್ಯಂತ ಹೋರಾಟಗಳು ನಡೆದಿವೆ. ಆದರೆ ಬಡ ವಿದ್ಯಾರ್ಥಿನಿಯೊಬ್ಬಳ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ನಿರ್ಲಕ್ಷ್ಯತೋರಿದೆ ಎಂದು ಅವರು ದೂರಿದರು.
ಕಾವ್ಯ ಸಾವಿನ ನ್ಯಾಯಕ್ಕಾಗಿ ಸೆಪ್ಟೆಂಬರ್ 16 ರಂದು ಹೋರಾಟ ಸಮಿತಿ ಜಿಲ್ಲಾ ಬಂದ್ ಗೆ ಕರೆ ನೀಡಲು ನಿರ್ಧರಿಸಿತ್ತು. ಆದರೆ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯಲ್ಲಿ ಅಶಾಂತಿಯ ವಾತಾವರಣವಿದ್ದು ಬಂದ್ ಕರೆ ನೀಡುವುದು ಬೇಡ ಎಂದು ಪೊಲೀಸ್ ಇಲಾಖೆ ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಬಂದ್ ಕರೆ ನೀಡುವ ನಿರ್ಧಾರ ಹಿಂಪಡೆಯಾಗಿತ್ತು ಎಂದು ಅವರು ತಿಳಿಸಿದರು.
ಆದರೆ, ಪೊಲೀಸ್ ಇಲಾಖೆ ಕಾವ್ಯ ಸಾವಿನ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಸೆಪ್ಟೆಂಬರ್ 20ರ ಒಳಗಾಗಿ ಪೊಲೀಸ್ ಇಲಾಖೆ ತನಿಖೆಯ ಪೂರ್ಣ ವರದಿಯನ್ನು ಬಹಿರಂಗಗೊಳಿಸದಿದ್ದರೆ ಸೆಪ್ಟೆಂಬರ್ 23 ರಂದು ಮಂಗಳೂರಿನಲ್ಲಿ ಕಾವ್ಯ ಸಾವಿನ ನ್ಯಾಯಕ್ಕಾಗಿ ಅರೆಬೆತ್ತಲೆ ಮೆರವಣಿಗೆ ನಡೆಸಲಾಗುವುದೆಂದು ಅವರು ಎಚ್ಚರಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications