Get Updates
Get notified of breaking news, exclusive insights, and must-see stories!

ಕಾವ್ಯ ಆತ್ಮಹತ್ಯೆ ಪ್ರಕರಣ: ಆ.9 ರಂದು ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು, ಆಗಸ್ಟ್ 4: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ಸಾವಿನ ಪಾರದರ್ಶಕ ತನಿಖೆಯ ಒತ್ತಾಯಿಸಿ 'ಜಸ್ಟೀಸ್ ಫಾರ್ ಕಾವ್ಯ' ಹೋರಾಟ ಸಮಿತಿ ಆಗಸ್ಟ್ 9 ರಂದು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದೆ.

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ 'ಜಸ್ಟಿಸ್ ಫಾರ್ ಕಾವ್ಯ' ಹೋರಾಟ ಸಮಿತಿಯ ದಿನಕರ್ ಶೆಟ್ಟಿ, "ಜುಲೈ 20 ರಂದು ಮೂಡಬಿದಿರೆಯ ಆಳ್ವಾಸ್ ಸಂಸ್ಥೆಯ ಹಾಸ್ಟೆಲ್ ನಲ್ಲಿ ನೇಣು ಬಿಗಿದ ರೀತಿಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಕಾವ್ಯ ಸಾವು ಸಂಭವಿಸಿತ್ತು. ಈ ಘಟನೆಯ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ," ಎಂದು ಹೇಳಿದರು.

 ‘Justice For Kavya’ forum to hold jatha on August 9 in Mangaluru

ಘಟನೆ ನಡೆದು ಹನ್ನೆರಡು ದಿನಗಳು ಕಳೆದಿದೆ. ಆದರೆ ಕಾವ್ಯ ಪೂಜಾರಿ ಸಾವಿನ ಕಾರಣದ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ ಎಂದು ಕಿಡಿಕಾರಿದರು.

"ಪ್ರಕರಣದ ಕುರಿತು ಪೊಲೀಸ್ ತಂಡ ತನಿಖೆ ನಡೆಸಿದೆ. ಆದರೆ ಈವರೆಗೆ ಪ್ರಕರಣದ ತನಿಖೆಯ ಮಾಹಿತಿಯನ್ನು ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಇಟ್ಟಿಲ್ಲ," ಎಂದು ದಿನಕರ್ ಶೆಟ್ಟಿ ವಿಷಾದ ವ್ಯಕ್ತಪಡಿಸಿದರು.

ಪೊಲೀಸ್ ಇಲಾಖೆಯ ಈ ನಡೆ ಅಚ್ಚರಿ ಮೂಡಿಸಿದೆ ಎಂದು ಹೇಳಿದ ಅವರು ಕಾವ್ಯಾಳ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟ ತೀವ್ರಗೊಳಿಸುವ ದೃಷ್ಟಿಯಿಂದ ಆಗಸ್ಟ್ ಒಂಬತ್ತುರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು .

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+