ವಿನಯ್ ಕುಮಾರ್ ಸೊರಕೆಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಗೆ ಮುಸ್ಲಿಂ ಸಂಘಟನೆಗಳ ಎಚ್ಚರಿಕೆ
ಮಂಗಳೂರು, ಫೆಬ್ರವರಿ 21: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸೊರಕೆ ಅವರ ಕನಸಿಗೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ತಣ್ಣೀರು ಎರಚಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಅಲ್ಪಸಂಖ್ಯಾತರ ವಿರೋಧಿಯಾಗಿರುವ ವಿನಯ ಕುಮಾರ್ ಸೊರಕೆಯವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಬಗ್ಗೆ ಮುಸ್ಲಿಮರು ಪುನರ್ ವಿಮರ್ಶಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಎಚ್ಚರಿಸಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ ಆಶ್ರಫ್, ಮುಸ್ಲಿಮರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಇತರರು ಮತ ಹಾಕುವುದಿಲ್ಲ ಮತ್ತು ಮುಸ್ಲಿಂ ಅಭ್ಯರ್ಥಿಗಳು ಜಯಗಳಿಸುವುದಿಲ್ಲ ಎಂದು ವಿನಯ್ ಕುಮಾರ್ ಸೊರಕೆ ಇತ್ತೀಚೆಗೆ ಬಾಲಿಶವಾದ ಹೇಳಿಕೆ ನೀಡಿದ್ದಾರೆ. ಇದು ಅವರ ಮುರ್ಖತನದ ಯೋಚನೆ.

ಆದರೆ ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ವಿನಯ ಕುಮಾರ್ ಸೊರಕೆ ಕಾಪು ಮತ್ತು ಉಡುಪಿ ಕ್ಷೇತ್ರದಲ್ಲಿ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರ ಮತಗಳ ಬೆಂಬಲದಿಂದ ಜಯಗಳಿಸಿದ್ದರು ಎಂದು ಆಶ್ರಫ್ ತಿಳಿಸಿದರು.
ಉಡುಪಿ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ನಗರಸಭೆ ಚುನಾವಣೆಗಳಲ್ಲಿ ಮುಸ್ಲಿಮರು ಮತ್ತು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನಿರಾಕರಿಸಿದ್ದರು ಎಂದ ಆಶ್ರಫ್ ಈ ಮೂಲಕ ನಿರಂತರ ರಾಜಕೀಯ ಪ್ರಾತಿನಿಧ್ಯದಿಂದ ಅಲ್ಪಸಂಖ್ಯಾತರನ್ನು ದೂರವಿರಿಸಲು ಸೊರಕೆ ಯತ್ನಿಸಿದ್ದರೆಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಪ ಸಂಖ್ಯಾತ ಸಮುದಾಯದವರನ್ನು ರಾಜಕೀಯ ಅಸ್ತಿತ್ವದಿಂದ ದೂರ ಇರಿಸುವುದು ಸೊರಕೆ ಅವರ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದಿಂದ ವಿನಯ ಕುಮಾರ್ ಸೊರಕೆಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಒಂದು ವೇಳೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಸ್ಲಿಮರು ಕಾಂಗ್ರೆಸ್ ಗೆ ಮತ ನೀಡುವ ಬಗ್ಗೆ ಪುನರ್ ವಿಮರ್ಶಿಲನೆ ಮಾಡಲಿದ್ದಾರೆ ಎಂದು ಆಶ್ರಫ್ ಎಚ್ಚರಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications