ರಾಜಭವನ ತಲುಪಿದ ಕಬೀರ್ ಶೂಟೌಟ್ ಪ್ರಕರಣ
ಮಂಗಳೂರು, ಏ. 30 : ಶೃಂಗೇರಿಯಲ್ಲಿ ಎಎನ್ಎಫ್ ಗುಂಡಿಗೆ ಬಲಿಯಾದ ಕಬೀರ್ ಪ್ರಕರಣ ಸದ್ಯ ರಾಜಭವನದ ಅಂಗಳ ತಲುಪಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕಬೀರ್ ಪ್ರಕರಣದ ಮೂಲಕ ವಿವಿಧ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಘಟಕ ರಾಜ್ಯಪಾಲರಿಗೆ ದೂರು ನೀಡಿದೆ.
ಮಂಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಪ್ರತಾಪ್ ಸಿಂಹ ನಾಯಕ್ ರಾಜ್ಯಪಾಲರಿಗೆ ಕಬೀರ್ ಪ್ರಕರಣದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಸಚಿವರ ಒತ್ತಡಕ್ಕೆ ಮಣಿದು ಸರ್ಕಾರ ಕಬೀರ್ ಮೇಲೆ ಗುಂಡು ಹಾರಿಸಿದ ಎಎನ್ಎಫ್ ಸಿಬ್ಬಂದಿ ನವೀನ್ ನಾಯಕ್ ಮೇಲೆ ಎಫ್ಐಆರ್ ದಾಖಲಿಸಿದೆ ಎಂದು ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. [ಕಬೀರ್ ಶೂಟೌಟ್ ತನಿಖಾ ವರದಿ ಬಹಿರಂಗ]

ಸರ್ಕಾರ ಮೃತ ಕಬೀರ್ ಕುಟುಂಬಕ್ಕೆ ನೀಡಿರುವ ಪರಿಹಾರದ ಕುರಿತು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಗುಲ್ಬರ್ಗದಲ್ಲಿ ರೌಡಿಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರಿಗೆ ಸರ್ಕಾರ 5 ಲಕ್ಷ ಪರಿಹಾರ ನೀಡಿದೆ. [ಎಎನ್ಎಫ್ ಮೇಲಿನ ಎಫ್ಐಆರ್ ಹಿಂಪಡೆಯಿರಿ]
ಆದರೆ, ದನಗಳ ಸಾಗಣೆ ಮಾಡುತ್ತಾ ಸಿಕ್ಕಿಬಿದ್ದು ಮೃತಪಟ್ಟ ಕಬೀರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದೆ. ಇದಕ್ಕೆ ಕಾರಣವೇನು? ಎಂದು ಎಂದು ರಾಜ್ಯಾಪಾಲರಿಗೆ ಬಿಜೆಪಿ ನೀಡಿರುವ ದೂರಿನಲ್ಲಿ ಪ್ರಶ್ನಿಸಿದೆ. ಕಬೀರ್ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರು ಹೇಳಿಕೆ ನೀಡುತ್ತಿರುವುದು ನೋಡಿದರೆ, ದನಗಳ ಸಾಗಣೆಯಲ್ಲಿ ಸಚಿವರ ಪಾತ್ರವಿರಬಹುದೆಂಬ ಅನುಮಾನ ಮೂಡುತ್ತಿದೆ ಎಂದು ಬಿಜೆಪಿ ಹೇಳಿದೆ.
ಸಚಿವ ರಮಾನಾಥ ರೈ ಅವರು ಕಬೀರ್ ಶೂಟೌಟ್ ಪ್ರಕರಣದಲ್ಲಿ ಸಂಘ ಪರಿವಾರದ ಹೆಸರನ್ನು ತರಲು ಯತ್ನಿಸುತ್ತಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯಿದ್ದೀನ್ ಭಾವಾ ಮುಂತಾದವರ ಒತ್ತಡದಿಂದಾಗಿ ಸರ್ಕಾರ, ಎಎನ್ಎಫ್ ಸಿಬ್ಬಂದಿ ನವೀನ್ ನಾಯಕ್ ಮೇಲೆ ಎಫ್ಐಆರ್ ದಾಖಲಿಸಿದೆ. ಇದರಿಂದ ಅವರ ನೈತಿಕ ಸ್ಥೈರ್ಯ ಕುಸಿಯುತ್ತದೆ ಎಂದು ಬಿಜೆಪಿ ದೂರಿನಲ್ಲಿ ರಾಜ್ಯಪಾಲರಿಗೆ ವಿವರಿಸಿದೆ. [Isaac Richard , Mangalore]
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications