ನ. 25ರಂದು ಹೊಸ ಕಡಬ ಮತ್ತು ಮೂಡುಬಿದಿರೆ ತಾಲೂಕು ಉದ್ಘಾಟನೆ: ಯು ಟಿ ಖಾದರ್
ಮಂಗಳೂರು, ನವೆಂಬರ್ 20: ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಕಡಬ ಮತ್ತು ಮೂಡುಬಿದಿರೆ ತಾಲೂಕುಗಳನ್ನು ನವೆಂಬರ್ 25 ಉದ್ಘಾಟನೆ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 25 ರಂದು ರಾಜ್ಯ ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅಧಿಕೃತವಾಗಿ ಎರಡು ಹೊಸ ತಾಲೂಕುಗಳಾದ ಕಡಬ ಹಾಗು ಮೂಡಬಿದಿರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಕಡಬ ಹಾಗೂ ಮೂಡಬಿದಿರೆ ತಾಲೂಕುಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ತಲಾ 10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ ಅವರು, ಇದೇ ಸಂದರ್ಭದಲ್ಲಿ ಬಂಟ್ವಾಳದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು, ಕಬ್ಬು ಬೆಲೆ ನಿಗದಿಪಡಿಸಿರುವುದು ಕೇಂದ್ರ ಸರಕಾರ, ಮುಖ್ಯಮಂತ್ರಿಯಲ್ಲ. ಕಬ್ಬು ಬೆಳೆಗಾರರ ಜೊತೆ ಸಮಾಲೋಚನೆ ನಡೆಸಿ ಕೇಂದ್ರ ಸರಕಾರ ಈ ಹಿಂದೆ ಬೆಲೆ ನಿಗದಿಪಡಿಸಿತ್ತು.
ಆದರೆ ಈಗ ರಾಜ್ಯದ ಮುಖ್ಯಮಂತ್ರಿಯ ಮೇಲೆ ಆರೋಪ ಮಾಡಲಾಗುತ್ತಿದೆ. ಇದೀಗ ಮತ್ತೆ ಬೆಲೆ ನಿಗದಿ ಮಾಡಬೇಕಾಗಿರುವುದು ಕೇಂದ್ರ ಸರಕಾರ ಹೊರತು ರಾಜ್ಯ ಸರಕಾರವಲ್ಲ ಎಂದರು.
ಅಡ್ಯಾರ್ ಹರೇಕಳದಲ್ಲಿ ನೇತ್ರಾವತಿ ನದಿಗೆ ಬ್ಯಾರೇಜ್, ಸೇತುವೆಯನ್ನು ನಿರ್ಮಿಸಲು 178 ಕೋಟಿ ರೂಪಾಯಿ ಯೋಜನೆ ಜಾರಿಯಾಗಲಿದೆ. ಸಮುದ್ರದ ನೀರು ಒಳನುಗ್ಗುವುದನ್ನು ತಡೆಯಲು ಮತ್ತು ಕುಡಿಯುವ ನೀರಿನ ಬಳಕೆಯ ದೃಷ್ಟಿಯಿಂದಲೂ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications