ಕಡಬ ತಾಲೂಕು ಉದ್ಘಾಟನೆ 5 ನೇ ಬಾರಿಗೆ ಮುಂದೂಡಿಕೆ
ಮಂಗಳೂರು, ನವೆಂಬರ್. 27 : ದಕ್ಷಿಣ ಕನ್ನಡ ಜಿಲ್ಲೆಯ ದಶಕಗಳ ಬೇಡಿಕೆಯಾದ ನೂತನ ಕಡಬ ಹಾಗೂ ಮೂಡಬಿದ್ರೆ ತಾಲೂಕುಗಳ ಉದ್ಘಾಟನೆ ಮತ್ತೆ ಮುಂದೂಡಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ, ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ನಡೆಯುತ್ತಿರುವುದರಿಂದ ಭಾನುವಾರದಂದು ನಡೆಯಬೇಕಾಗಿದ್ದ ಕಡಬ ತಾಲೂಕು ಸಮಾರಂಭ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಯಿತು.
ಕಡಬ ತಾಲೂಕು ಉದ್ಘಾಟನಾ ಸಮಾರಂಭವನ್ನು ವಿವಿಧ ಕಾರಣಗಳಿಗಾಗಿ ಈ ಹಿಂದೆ ನಾಲ್ಕು ಬಾರಿ ಮುಂದೂಡಲಾಗಿತ್ತು. ಈ ಬಾರಿಯಾದರೂ ಕಡಬ ತಾಲೂಕಾಗಿ ಯಾವುದೇ ತೊಡಕುಗಳಿಲ್ಲದೇ ಉದ್ಘಾಟನೆಗೊಳ್ಳಲಿದೆ ಎಂದು ಜನರು ಭಾವಿಸಿದ್ದರು. ನವೆಂಬರ್ 25 ರಂದು ಉದ್ಘಾಟನೆಯ ದಿನಾಂಕ ನಿಗದಿಯಾಗಿತ್ತು. ಕಂದಾಯ ಸಚಿವ ಆರ್ ವಿ ದೇಶಪಾಂಡೆ ಕೂಡ ನಿನ್ನೆ (ನ.26) ಮಂಗಳೂರು ತಲುಪಿದ್ದರು.

ಆದರೆ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆಯಾದ ಪರಿಣಾಮ ಉದ್ಘಾಟನಾ ಕಾರ್ಯಕ್ರಮ ಮುಂದೂಡಲಾಯಿತು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ನಾಲ್ಕು ಬಾರಿ ಸ್ಥಳೀಯ ಮುಖಂಡರು, ಉಸ್ತುವಾರಿ, ರಾಜ್ಯಮಟ್ಟದ ಸಚಿವರಿಂದ ಉದ್ಘಾಟಿಸಲು ದಿನ ನಿಗದಿಯಾಗಿತ್ತು. ಸಚಿವರ ಡೇಟ್ ಸಿಗದೆ ರದ್ದಾಗಿತ್ತು. ಈ ಬಾರಿಯಾದರೂ ಕಡಬ ತಾಲೂಕು ಉದ್ಘಾಟನೆ ಗೊಳ್ಳಲಿದೆ ಎಂದು ಜನರು ಆಶಾಭಾವ ಹೊಂದಿದ್ದರು.
ಆದರೆ ಉದ್ಘಾಟನಾ ಕಾರ್ಯಕ್ರಮ ಮೂಂದೂಡಲಾದ ಕಾರಣ ಜನರಲ್ಲಿ ಬೇಸರ ತರಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications