ಕದ್ರಿ ದೇವಸ್ಥಾನ: ಆಡಳಿತ ಮಂಡಳಿಯಿಂದ ಭಜರಂಗದಳ ಅಳವಡಿಸಿದ್ದ ಬ್ಯಾನರ್ ತೆರವು
ಮಂಗಳೂರು, ಜನವರಿ 19: ಇತ್ತೀಚೆಗೆ ನಡೆದ ಕಾವೂರು ಜಾತ್ರಾಮಹೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್ ಅಳವಡಿಕೆಯಾಗಿತ್ತು. ಇದೀಗ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲೂ ಇದೇ ರೀತಿಯ ಬ್ಯಾನರ್ ಹಾಕಲಾಗಿದೆ. ಆದರೆ ಬ್ಯಾನರ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಬ್ಯಾನರ್ನ್ನು ತೆರವುಗೊಳಿಸಿದೆ.
ಕದ್ರಿ ದೇವಸ್ಥಾನದಲ್ಲಿ ಜನವರಿ 15ರಿಂದ ಜನವರಿ25ರವರೆಗೆ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ವಿಶ್ವ ಹಿಂದೂ ಪರಿಷತ್ ಭಜರಂಗದಳ ಹಾಗೂ ಶಿವಶಕ್ತ ಶಾಖೆ ಹೆಸರಿನಲ್ಲಿ ಬ್ಯಾನರ್ ಅಳವಡಿಕೆ ಆಗಿತ್ತು. 'ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ಕುಕ್ಕರ್ ಬಾಂಬ್ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ' ಎಂದು ಬ್ಯಾನರ್ನಲ್ಲಿ ಬರೆಯಲಾಗಿತ್ತು.
ಅನ್ಯಧರ್ಮೀಯರಿಗೆ ವ್ಯಾಪಾರ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಆಗಿರುವುದು ಗಮನಕ್ಕೆ ಬರುತ್ತಿದ್ದಂತೆ ಕ್ಷೇತ್ರದ ಆಡಳಿತ ಮಂಡಳಿ ಬ್ಯಾನರರ್ನ್ನು ತೆರವುಗೊಳಿಸಿದೆ. ಕದ್ರಿ ಪೊಲೀಸರಿಗೆ ಸೂಚನೆ ನೀಡಿ ಆಡಳಿತ ಮಂಡಳಿ ಬ್ಯಾನರ್ ತೆರವು ಮಾಡಿದ್ದಾರೆ.

ಬ್ಯಾನರ್ ತೆರವು ಮಾಡಿದ ಬಗ್ಗೆ ವಿಎಚ್ ಪಿ ಪ್ರಮುಖರು ದೇವಸ್ಥಾನದ ಆಡಳಿತ ಮಂಡಳಿ ಬಳಿ ಸ್ಪಷ್ಟನೆ ಕೇಳಿದಾಗ, 'ಈಗಾಗಲೇ ಅನ್ಯ ಮತೀಯ ವ್ಯಾಪಾರಿಗಳು ಜಾಗ ತೆರವು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಬ್ಯಾನರ್ ತೆರವು ಮಾಡಿರುವುದಾಗಿ' ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದೂ ಪರಿಷತ್ ಮಾಧ್ಯಮ ಪ್ರಮುಖ್ ಪ್ರದೀಪ್ ಸರಿಪಳ್ಳ," ವಿಗ್ರಹ ಆರಾಧನೆಯನ್ನು ಹರಾಮ್ ಅಂದವರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ. ಕುಕ್ಕರ್ ಬಾಂಬ್ ಸ್ಫೋಟ ಮಾಡಿದ ಉಗ್ರ ಶಾರೀಕ್ ಕೂಡಾ ಕದ್ರಿ ದೇವಸ್ಥಾನವನ್ನು ಸ್ಫೋಟಿಸುವ ಸಂಚು ರೂಪಿಸಿದ್ದ. ಈಗ ಅನ್ಯ ಮತೀಯರಿಗೆ ಕದ್ರಿ ದೇವಸ್ಥಾನದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದರೆ ಕ್ಷೇತ್ರಕ್ಕೆ ತೊಂದರೆಯಾಗೋದಿಲ್ಲ ಎಂದು ಏನು ಗ್ಯಾರಂಟಿ" ಎಂದು ಪ್ರಶ್ನಿಸಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications