ಕದ್ರಿ ದೇವಸ್ಥಾನ: ಆಡಳಿತ ಮಂಡಳಿಯಿಂದ ಭಜರಂಗದಳ ಅಳವಡಿಸಿದ್ದ ಬ್ಯಾನರ್ ತೆರವು
ಮಂಗಳೂರು, ಜನವರಿ 19: ಇತ್ತೀಚೆಗೆ ನಡೆದ ಕಾವೂರು ಜಾತ್ರಾಮಹೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್ ಅಳವಡಿಕೆಯಾಗಿತ್ತು. ಇದೀಗ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲೂ ಇದೇ ರೀತಿಯ ಬ್ಯಾನರ್ ಹಾಕಲಾಗಿದೆ. ಆದರೆ ಬ್ಯಾನರ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಬ್ಯಾನರ್ನ್ನು ತೆರವುಗೊಳಿಸಿದೆ.
ಕದ್ರಿ ದೇವಸ್ಥಾನದಲ್ಲಿ ಜನವರಿ 15ರಿಂದ ಜನವರಿ25ರವರೆಗೆ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ವಿಶ್ವ ಹಿಂದೂ ಪರಿಷತ್ ಭಜರಂಗದಳ ಹಾಗೂ ಶಿವಶಕ್ತ ಶಾಖೆ ಹೆಸರಿನಲ್ಲಿ ಬ್ಯಾನರ್ ಅಳವಡಿಕೆ ಆಗಿತ್ತು. 'ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ಕುಕ್ಕರ್ ಬಾಂಬ್ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ' ಎಂದು ಬ್ಯಾನರ್ನಲ್ಲಿ ಬರೆಯಲಾಗಿತ್ತು.
ಅನ್ಯಧರ್ಮೀಯರಿಗೆ ವ್ಯಾಪಾರ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಆಗಿರುವುದು ಗಮನಕ್ಕೆ ಬರುತ್ತಿದ್ದಂತೆ ಕ್ಷೇತ್ರದ ಆಡಳಿತ ಮಂಡಳಿ ಬ್ಯಾನರರ್ನ್ನು ತೆರವುಗೊಳಿಸಿದೆ. ಕದ್ರಿ ಪೊಲೀಸರಿಗೆ ಸೂಚನೆ ನೀಡಿ ಆಡಳಿತ ಮಂಡಳಿ ಬ್ಯಾನರ್ ತೆರವು ಮಾಡಿದ್ದಾರೆ.

ಬ್ಯಾನರ್ ತೆರವು ಮಾಡಿದ ಬಗ್ಗೆ ವಿಎಚ್ ಪಿ ಪ್ರಮುಖರು ದೇವಸ್ಥಾನದ ಆಡಳಿತ ಮಂಡಳಿ ಬಳಿ ಸ್ಪಷ್ಟನೆ ಕೇಳಿದಾಗ, 'ಈಗಾಗಲೇ ಅನ್ಯ ಮತೀಯ ವ್ಯಾಪಾರಿಗಳು ಜಾಗ ತೆರವು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಬ್ಯಾನರ್ ತೆರವು ಮಾಡಿರುವುದಾಗಿ' ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದೂ ಪರಿಷತ್ ಮಾಧ್ಯಮ ಪ್ರಮುಖ್ ಪ್ರದೀಪ್ ಸರಿಪಳ್ಳ," ವಿಗ್ರಹ ಆರಾಧನೆಯನ್ನು ಹರಾಮ್ ಅಂದವರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ. ಕುಕ್ಕರ್ ಬಾಂಬ್ ಸ್ಫೋಟ ಮಾಡಿದ ಉಗ್ರ ಶಾರೀಕ್ ಕೂಡಾ ಕದ್ರಿ ದೇವಸ್ಥಾನವನ್ನು ಸ್ಫೋಟಿಸುವ ಸಂಚು ರೂಪಿಸಿದ್ದ. ಈಗ ಅನ್ಯ ಮತೀಯರಿಗೆ ಕದ್ರಿ ದೇವಸ್ಥಾನದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದರೆ ಕ್ಷೇತ್ರಕ್ಕೆ ತೊಂದರೆಯಾಗೋದಿಲ್ಲ ಎಂದು ಏನು ಗ್ಯಾರಂಟಿ" ಎಂದು ಪ್ರಶ್ನಿಸಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications