ಕಲ್ಲಡ್ಕ ಪ್ರಕರಣದಲ್ಲಿ ಹಿಂದೂ ಯುವಕರ ಮೇಲೆ ಸುಳ್ಳು ಕೇಸು - ಪ್ರಭಾಕರ ಭಟ್

ಮಂಗಳೂರು, ಮೇ 28: ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಘಟನೆಯನ್ನು ತಿರುಚಿ ಹಾಕಿ ಪೊಲೀಸರು ನಮ್ಮ ಹಿಂದೂ ಯುವಕರ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ. ಮಾತ್ರವಲ್ಲ ವೈಯಕ್ತಿಕ ಘಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ ಎಂದು ಆರೆಸ್ಸೆಸ್ ದಕ್ಷಿಣ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ ಇಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಶನಿವಾರ ಕಲ್ಲಡ್ಕದಲ್ಲಿ ಗುಂಪೊಂದು ಅಂಗಡಿಗಳನ್ನು ಬಲವಂತವಾಗಿ ಬಂದ್ ಮಾಡಿಸುತ್ತಿದ್ದರೂ, ಪೊಲೀಸರು ಮಾತ್ರ ಮೌನವಾಗಿ ಅದನ್ನು ನೋಡುತ್ತಾ ನಿಂತ್ತಿದ್ದರು ಎಂದು ಆರೋಪಿಸಿದ್ದಾರೆ.[ಮಂಗಳೂರು: ಅಮರಣಾಂತ ಉಪವಾಸ ಆರಂಭಿಸಿದ ಎಂಡೋಪೀಡಿತರು]

Kalladka incident not communal, police are turning the case – Prabhakar Bhat

ಘಟನೆಯ ಸ್ಥಳಕ್ಕೆ ನಾನು ಭೇಟಿ ನೀಡಲು ಹೋದಾಗ ಅಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ನನ್ನನ್ನು ಕಾರಿನಿಂದ ಕೆಳಗೆ ಇಳಿಯಲು ಬಿಟ್ಟಿಲ್ಲ. ಅಂಗಡಿ ಮಾಲಕರಿಗೆ, ರಿಕ್ಷಾ ಚಾಲಕರಿಗೆ ರಕ್ಷಣೆ ನೀಡಬೇಕಾದ ಪೊಲೀಸರು ಅದನ್ನು ಮಾಡದೆ ಕರ್ತವ್ಯ ಚ್ಯುತಿ ಎಸಗಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೆಲವರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದರು. ಪೊಲೀಸರು ಅವರನ್ನು ತಡೆಯವ ಪ್ರಯತ್ನವನ್ನೂ ಮಾಡಿಲ್ಲ. ಬದಲಾಗಿ ಸೆ. 144 ಹಾಕಿದ್ದಾರೆ ಎಂದರು.

ಇನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ದುರ್ಬಲರಾಗಿದ್ದು, ಅವರಿಗೆ ಕೇವಲ ಸೆಕ್ಷನ್ ಹೇರಲು ಮಾತ್ರ ಗೊತ್ತು. ಆದ್ದರಿಂದ ಅವರನ್ನು ಬದಲಾಯಿಸಿ, ಧೈರ್ಯವಂತ ಎಸ್ಪಿಯನ್ನು ಜಿಲ್ಲೆಗೆ ನಿಯುಕ್ತಿಗೊಳಿಸಬೇಕು ಎಂದು ಪ್ರಭಾಕರ ಭಟ್ ಅಭಿಪ್ರಾಯಪಟ್ಟರು.

ಶುಕ್ರವಾರ ಯತಿನ್ ಎಂಬ ಯುವಕ ಬೈಕ್‌ನಲ್ಲಿ ಬಂದು ಪಂಚವಟಿ ಕಟ್ಟಡದ ಎದುರು ಬೈಕ್ ನಿಲ್ಲಿಸಿ ಒಳ ದಾರಿಯ ಮೂಲಕ ಪುತ್ತೂರು ರಸ್ತೆಗೆ ಬಂದಾಗ 7-8 ಜನ ಯುವಕರು ಅವನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ. ಆದರೆ ರಾಜಕೀಯ ದುರುದ್ದೇಶದಿಂದ ಮಸೀದಿ ಬಿಟ್ಟು ಹೋಗುವಾಗ ಬೆಂಬತ್ತಿ ಚೂರಿ ಹಾಕಲಾಗಿದೆ ಎಂದು ಪೊಲೀಸರು ಪ್ರಕರಣ ತಿರುಚಿದ್ದಾರೆ ಎಂದು ಅವರು ಆಪಾದಿಸಿದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಭಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್, ಪುತ್ತೂರು ಭಜರಂಗದಳ ಸಹ ಸಂಚಾಲಕ ಭರತ್ ಕುಂಬ್ಳೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+