ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ, ಸೆಹ್ವಾಗ್ ಸಂಭ್ರಮ
ಬೆಂಗಳೂರು, ಫೆಬ್ರವರಿ 20: ಕರ್ನಾಟಕ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಈಗ ಕಾನೂನಿನ ಮಾನ್ಯತೆ ಸಿಕ್ಕಿದೆ, ಗ್ರಾಮೀಣ ಕ್ರೀಡೆ ಬೆಂಬಲಿಸಿ ಎಂದು ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಅವರು ಟ್ವೀಟ್ ಮಾಡಿದ್ದಾರೆ. ಸೆಹ್ವಾಗ್ ಅವರ ಟ್ವೀಟ್ ನಿಂದ ಕಂಬಳ ಪ್ರಿಯರು ಥ್ರಿಲ್ ಆಗಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಕಂಬಳದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಸ್ವಯಂ ಸೇವಾ ಸಂಘಟನೆ ಪೆಟಾ ಇಂಡಿಯಾ, ಕಂಬಳ ಕ್ರೀಡೆಯಲ್ಲಿ ಭಾಗವಹಿಸುವ ಕೋಣಗಳನ್ನು ಹಿಂಸಿಸಲಾಗುತ್ತದೆ ಎಂದು ವಾದಿಸಿತ್ತು.
ಕರ್ನಾಟಕ ವಿಧಾನಸಭೆಯಲ್ಲಿ ಕಳೆದ ನವೆಂಬರ್ 17ರಂದು ಪ್ರಾಣಿ ಹಿಂಸೆ ತಡೆ (ತಿದ್ದುಪಡಿ) ಮಸೂದೆ- 2017ಯನ್ನು ಅಂಗೀಕರಿಸಲಾಗಿತ್ತು. ಇದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಫೆಬ್ರವರಿ 10ರಂದು ಅಂಕಿತ ಹಾಕಿದ್ದಾರೆ ಎಂದು ಕೇಂದ್ರದ ಗೃಹ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
Thank You @virendersehwag sir for tweeting on Kambala... Indians are made to look life fools, uncultured and slammed for rural sports like this... I appreciate that u noticed this and tweeted... https://t.co/U8OXIXzlNG
— Sandeep N (@SandeepN28) February 20, 2018
ತಮಿಳುನಾಡಿನ ಜಲ್ಲಿ ಕಟ್ಟು, ಕರ್ನಾಟಕದ ಕಂಬಳ, ಆಂಧ್ರಪ್ರದೇಶ ಎತ್ತಿನ ಓಟ ಸೇರಿದಂತೆ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದು ಸೆಹ್ವಾಗ್ ಹೇಳಿದ್ದಾರೆ. ಸೆಹ್ವಾಗ್ ಟ್ವೀಟ್ ಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ.

ಸೆಹ್ವಾಗ್ ಹಾಗೂ ಮೊಹಮ್ಮದ್ ಕೈಫ್ ರಿಂದ ಬೆಂಬಲ
ಕರ್ನಾಟಕ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಈಗ ಕಾನೂನಿನ ಮಾನ್ಯತೆ ಸಿಕ್ಕಿದೆ, ಗ್ರಾಮೀಣ ಕ್ರೀಡೆ ಬೆಂಬಲಿಸಿ ಎಂದು ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಅವರು ಟ್ವೀಟ್ ಮಾಡಿದ್ದಾರೆ. ಸೆಹ್ವಾಗ್ ಹಾಗೂ ಮೊಹಮ್ಮದ್ ಕೈಫ್ ಅವರು ಟ್ವೀಟ್ ಮಾಡಿರುವುದನ್ನು ಕಂಡು ಕಂಬಳ ಪ್ರಿಯರು ಥ್ರಿಲ್ ಆಗಿದ್ದಾರೆ.
|
ಕಂಬಳದ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಥ್ಯಾಂಕ್ಸ್
ಭಾರತೀಯರನ್ನು ದಡ್ಡರನ್ನಾಗಿಸಲು ಕೆಲವು ಸಂಸ್ಥೆಗಳು ಯತ್ನಿಸುತ್ತವೆ. ನೀವು ಕಂಬಳದ ಬಗ್ಗೆ ಟ್ವೀಟ್ ಮಾದಿದ್ದಕ್ಕೆ ಧನ್ಯವಾದಗಳು, ಗ್ರಾಮೀಣ ಕ್ರೀಡೆಗಳ ಬಗ್ಗೆ ನೀವು ತೋರಿರುವ ಕಾಳಜಿಗೆ ಥ್ಯಾಂಕ್ಸ್ ಎಂದು ಟ್ವೀಟ್ ಮಾಡಿದ್ದಾರೆ.
|
ಇದು ನಮ್ಮ ಕ್ರೀಡೆ, ನಮ್ಮ ಸಂಸ್ಕೃತಿ
ಇದು ನಮ್ಮ ಕ್ರೀಡೆ, ನಮ್ಮ ಸಂಸ್ಕೃತಿ, ಕಂಬಳಕ್ಕೆ ಬೆಂಬಲ ನೀಡಿದ್ದಕ್ಕೆ ನಾವು ಧನ್ಯವಾದ ಅರ್ಪಿಸುತ್ತೇವೆ ಎಂದಿದ್ದಾರೆ.
|
ಮೊಹಮ್ಮದ್ ಕೈಫ್ ರಿಂದ ಟ್ವೀಟ್
ಮಾಜಿ ಕ್ರಿಕೆಟರ್ ಮೊಹಮ್ಮದ್ ಕೈಫ್ ಅವರು ಟ್ವೀಟ್ ಮಾಡಿ, ಕರ್ನಾಟಕದ ಜನತೆಗೆ ಅಭಿನಂದನೆಗಳು, ಸಾಂಪ್ರದಾಯಿಕ ಕ್ರೀಡೆಗೆ ಕಾನೂನಿನ ಮಾನ್ಯತೆ ಸಿಕ್ಕಿದೆ, ಸಂಭ್ರಮಿಸಲು ಇದು ಸಕಾಲ ಎಂದಿದ್ದಾರೆ.
|
ಜಾಗತಿಕಮಟ್ಟದ ವ್ಯಕ್ತಿಯಿಂದ ಗೌರವ
ಸೆಹ್ವಾಗ್ ರಂಥ ಜಾಗತಿಕ ಮಟ್ಟದ ಸೆಲೆಬ್ರಿಟಿಯಿಂದ ನಮ್ಮ ಕಂಬಳಕ್ಕೆ ಬೆಂಬಲ ಸಿಕ್ಕಿರುವುದು ಸಂತಸದ ವಿಷಯ ಎಂದು ತುಳುನಾಡಿನ ಜನರು ಟ್ವೀಟ್ ಮಾಡಿದ್ದಾರೆ.
|
ಕಂಬಳ ನೋಡಲು ಸಂಸಾರ ಸಮೇತ ಬನ್ನಿ
ಕಂಬಳ ನೋಡಲು ಕರ್ನಾಟಕದ ಕರಾವಳಿಗೆ ಸಂಸಾರ ಸಮೇತ ಬನ್ನಿ ಎಂದು ಆಹ್ವಾನಿಸಲಾಗಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications