Kambala: ಜಲ್ಲಿಕಟ್ಟು, ಕಂಬಳಕ್ಕೆ ಅವಕಾಶ : ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಂಬಳ ಸಮಿತಿ
ದಕ್ಷಿಣ ಕನ್ನಡ, ಮೇ 19: ಕಂಬಳಕ್ಕೆ ಅವಕಾಶ ಕಲ್ಪಿಸಿ ಕರ್ನಾಟಕ ಮಾಡಿರುವ ತಿದ್ದುಪಡಿಯನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್ನ ತೀರ್ಪನ್ನು ಜಿಲ್ಲಾ ಕಂಬಳ ಸಮಿತಿ ಸ್ವಾಗತಿಸಿದೆ.
ಕರ್ನಾಟಕದ ಕರಾವಳಿ ಭಾಗದ ಕಂಬಳ, ಮಹಾರಾಷ್ಟ್ರದ ಚಕ್ಕಡಿ ಸ್ಪರ್ಧೆ ಮತ್ತು ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಗಳಿಗೆ ಸುಪ್ರೀಂ ಹಸಿರು ನಿಶಾನೆ ನೀಡಿದೆ. ಜಲ್ಲಿಕಟ್ಟು, ಎತ್ತಿನಗಾಡಿ ಓಟ ಮತ್ತು ಕಂಬಳಕ್ಕೆ ಅವಕಾಶ ಕಲ್ಪಿಸುವ 1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆ 1960ಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಶಾಸಕರು ಮಾಡಿದ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ನ ಐವರು ಸದಸ್ಯರ ಪೀಠವು ಗುರುವಾರ ಎತ್ತಿ ಹಿಡಿದಿದೆ.

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್ ಹೆಗಡೆ ಎರ್ಮಾಳ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಬೆಂಬಲ ನೀಡಿದಕ್ಕೆ ಕೃತಜ್ಞತೆ ಸಲ್ಲಿಸಿ, ಕಂಬಳ ಕೇವಲ ಕ್ರೀಡಾಕೂಟವಲ್ಲ ಬದಲಾಗಿ ದೈವಾರಾಧನೆಯ ಭಾಗವಾಗಿದೆ ಎಂದು ಹೇಳಿದ್ದಾರೆ.
"ನಾವು ಕಂಬಳವನ್ನು ನಮ್ಮ ಪೂಜೆಯ ಜೊತೆಗೆ ಬಂದಿರುವ ಸಂಪ್ರದಾಯದಂತೆ ಮುಂದುವರಿಸಿಕೊಂಡು ಬಂದಿದ್ದೇವೆ. ಈ ತೀರ್ಪನ್ನು ನಾವು ಪೂಜಿಸುವ ದೇವತೆಗಳ ಆಶೀರ್ವಾದ ಎಂದು ಪರಿಗಣಿಸುತ್ತೇನೆ. ಕರಾವಳಿ ಜಿಲ್ಲೆಗಳಲ್ಲಿ ಕಂಬಳ ನಡೆಸುವ ಮೂಲಕ ಸಂಪ್ರದಾಯ ಮುಂದುವರಿಸುತ್ತೇವೆ. ಕಾರ್ಯಕ್ರಮಗಳನ್ನು ನಡೆಸುವಾಗ ನಾವು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸುತ್ತೇವೆ. ನವೆಂಬರ್ನಲ್ಲಿ ಆರಂಭವಾಗಲಿರುವ ಕಂಬಳ ಸೀಸನ್ಗೂ ಮುನ್ನ ಕರಾವಳಿ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ" ಎಂದು ಯೆರ್ಮಾಳ್ ಹೇಳಿದರು.

ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, "ಕರಾವಳಿ ಕರ್ನಾಟಕದ ಸಂಸ್ಕೃತಿಯ ಭಾಗವಾಗಿರುವ ಕಂಬಳಕ್ಕೆ ಸಂಬಂಧಿಸಿದ ಎಲ್ಲ ಆತಂಕಗಳನ್ನು ಸುಪ್ರೀಂ ಕೋರ್ಟ್ ತೀರ್ಪು ದೂರವಾಗಿಸಿದೆ. ಕಂಬಳಕ್ಕಾಗಿ ಹೋರಾಟ ನಡೆಸುತ್ತಿರುವ ತುಳುನಾಡಿನ ಜನತೆಗೆ ನ್ಯಾಯ ಸಿಕ್ಕಿದೆ. ಸುಪ್ರೀಂಕೋರ್ಟ್ನ ತೀರ್ಪು ಕಂಬಳ ಸಂಘಟಕರಿಗೆ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ನಡೆಸಲು ಸಹಾಯ ಮಾಡುತ್ತದೆ," ಎಂದು ಹೇಳಿದರು.
ಇದು ಕರಾವಳಿ ಭಾಗದ ಕಂಬಳ ಅಭಿಮಾನಿಗಳ ಗೆಲುವಾಗಿದೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಹೇಳಿದ್ದಾರೆ. ಈ ತೀರ್ಪು ಕರಾವಳಿಯ ಕಂಬಳ ಅಭಿಮಾನಿಗಳಲ್ಲಿ ಸಂತಸ ತಂದಿದೆ ಎಂದರು.

ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಪೆಟಾ ಅಸಮಾಧಾನ
ಪೆಟಾ ಇಂಡಿಯಾದ ವಕೀಲರ ಯೋಜನೆಗಳ ಉಪ ನಿರ್ದೇಶಕ ಹರ್ಷಿಲ್ ಮಹೇಶ್ವರಿ ಪ್ರತಿಕ್ರಿಯೆ ನೀಡಿ, "ಪ್ರಾಣಿಗಳನ್ನು ಒಳಗೊಂಡ ಗ್ಲಾಡಿಯೇಟರ್ ಆಟಗಳು ಸುಮಾರು 7 ನೇ ಶತಮಾನದಯಲ್ಲಿ ಕೊನೆಗೊಂಡವು. ಪ್ರಪಂಚದಾದ್ಯಂತದ ದೇಶಗಳು ಪ್ರಾಣಿಗಳ ಸರ್ಕಸ್ ಮತ್ತು ಇತರ ಕ್ರೂರ ಘಟನೆಗಳನ್ನು ನಿಷೇಧಿಸುತ್ತಿವೆ. 2023 ರಲ್ಲಿ, ಜಲ್ಲಿಕಟ್ಟು ಮತ್ತು ಗೂಳಿ ಓಟದ ಸ್ಪರ್ಧೆಗಳಲ್ಲಿ ಪ್ರಾಣಿ ಹಿಂಸಿ, ಮೂಳೆ ಮುರಿತಗಳು ಮತ್ತು ರಕ್ತಸಿಕ್ತ ಗಾಯಗಳನ್ನು ಸಹಿಸಿಕೊಳ್ಳಲು ಸೂಕ್ಷ್ಮವಾದ ಗೂಳಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ, ಇದು ದೇಶವನ್ನು ಕತ್ತಲೆಯ ಯುಗಕ್ಕೆ ತಳ್ಳಿದೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
"ಎತ್ತುಗಳು ಮತ್ತು ಎಮ್ಮೆಗಳನ್ನು ಶೋಷಿಸುವ ಆಟಗಳಿಂದ ದೂರವಿರಲು ಪೆಟಾ ಇಂಡಿಯಾ ಎಲ್ಲರಿಗೂ ಕರೆ ನೀಡುತ್ತಿದೆ, ಪ್ರಾಣಿಗಳನ್ನು ರಕ್ಷಿಸಲು ನಾವು ಕಾನೂನು ಹೋರಾಟ ಮುಂದುವರೆಸುತ್ತೇವೆ" ಎಂದು ಮಹೇಶ್ವರಿ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications