ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿಯಲ್ಲಿ ಈ ಋತುವಿನ ಕಂಬಳಕ್ಕೆ ಯಶಸ್ವಿ ತೆರೆ

|
Google Oneindia Kannada News

ಮಂಗಳೂರು, ಮಾರ್ಚ್ 18:ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೆರ್ಮುಡದ ಸೂರ್ಯಚಂದ್ರ ಜೋಡುಕರೆ ಕಂಬಳದ ಮುಕ್ತಾಯದೊಂದಿಗೆ ಕಂಬಳದ ಋತು ಯಶಸ್ವಿಯಾಗಿ ಕೊನೆಯಾಗಿದೆ.

ಪ್ರತಿ ವರ್ಷ ಕಂಬಳ ಕ್ರೀಡೆಯ ಋತು ನವೆಂಬರ್‌ನಲ್ಲಿ ಆರಂಭಗೊಳ್ಳುತ್ತದೆ. ನವೆಂಬರ್ ನಿಂದ ಆರಂಭಗೊಳ್ಳುವ ಈ ಕಂಬಳದ ಋತುವಿನಲ್ಲಿ ಈ ಬಾರಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳು ಸೇರಿ ಒಟ್ಟು 18 ಕಂಬಳಗಳು ಆಯೋಜನೆಗೊಂಡಿದ್ದವು.

ಕಂಬಳದ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತಕಂಬಳದ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತ

ಕಂಬಳದಲ್ಲಿ ಪ್ರಾಣಿಹಿಂಸೆ ಮಾಡಲಾಗುತ್ತಿದೆ ಎಂಬ ಪೆಟಾ ಸಂಸ್ಥೆಯ ಆರೋಪಗಳ ಹಿನ್ನೆಲೆಯಲ್ಲಿ ಬೆತ್ತ ಹಿಡಿಯದೆ ಕೋಣಗಳನ್ನು ಓಡಿಸುವ ಪ್ರಯೋಗವನ್ನು ಈ ಬಾರಿ ಕಂಬಳದಲ್ಲಿ ಮಾಡಲಾ ಗಿದೆ. ಮೂಡುಬಿದಿರೆ, ಕಕ್ಕೆಪದವು ಹಾಗೂ ಪೈವಳಿಕೆ ಕಂಬಳಗಳಲ್ಲಿ ಕೋಣಗಳನ್ನು ಓಡಿಸುವಾಗ ಬೆತ್ತ ಬಳಕೆ ಮಾಡಲಾಗಿಲ್ಲ.+

Kambala season ends in coastal districts successfully

ಕಂಬಳಕ್ಕೆ ತಡೆ ಕೋರಿ ಪೆಟಾ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ಸಂವಿಧಾನ ಪೀಠದಲ್ಲಿ ವಿಚಾರಣೆಗೆ ಬಾಕಿ ಇದೆ. ತುಳುನಾಡಿನ ಜಾನಪದ ಕ್ರೀಡೆ ಕಂಬಳವು ಕಳೆದ 2 ವರ್ಷಗಳಿಂದ ಸುಗಮವಾಗಿ ಸಾಗುತ್ತಿದೆ.

 ಕಂಬಳಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ ಕಂಬಳಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಈ ಬಾರಿ ಕಂಬಳ ಕ್ರೀಡೆ ನಿರ್ವಿಘ್ನವಾಗಿ ಮುಕ್ತಾಯಗೊಂಡಿದರುವುದು ಕಂಬಳ ಪ್ರಿಯರಲ್ಲಿ ಸಮಾಧಾನ ಮೂಡಿಸಿದೆ. ಎಂಟು ತಿಂಗಳ ಬಳಿಕ ಮತ್ತೆ ನವೆಂಬರ್‌ನಲ್ಲಿ ಮುಂದಿನ ಕಂಬಳ ಋತು ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಮುಂದಿನ ಕಂಬಳ ಋತುವಿಗಾಗಿ ಕಂಬಳ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

English summary
This year's Kambala season ends in coastal districts successfully.This season of kambala started in the month of november.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X