ಬ್ರಹ್ಮಶ್ರೀ ನಡೆ ನಮಗೆಲ್ಲಾ ಮಾದರಿ : ಸಿದ್ದರಾಮಯ್ಯ
ಮಂಗಳೂರು, ಜನವರಿ, 19 :'ನಾರಾಯಣ ಗುರು ಜಾತಿ ವ್ಯವಸ್ಥೆಯ ಕರಾಳತೆಯನ್ನ ನೋಡಿದವರು. ಜಾತಿ, ವರ್ಣಭೇದವನ್ನ ತೊಡೆದು ಹಾಕಲು ಅಹಿಂಸಾ ಮಾರ್ಗವನ್ನು ಅನುಸರಿಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುರುವಾರ ಮಂಗಳೂರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಹಾಗೂ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು,
'ಬ್ರಹ್ಮಶ್ರೀ ನಾರಾಯಣ ಗುರು ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯನ್ನು ತರಲು ಶ್ರಮಿಸಿದವರು. ಇವರ ಸಂದೇಶವನ್ನ ಸಾರುವ ಹೊಣೆಗಾರಿಕೆ ನಮ್ಮ ಮೇಲಿದೆ' ಎಂದರು.

ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೊಸದಾಗಿ ಆಯೋಜಿಸಿರುವ ಅಂತಾರಾಷ್ಟ್ರೀಯ ಮಟ್ಟದ ಮಾಡ್ಯುಲರ್ ಪ್ರಯೋಗಾಲಯಗಳನ್ನು ಉದ್ಘಾಟಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ,
' ಪಟ್ಟಭದ್ರ ಹಿತಾಸಕ್ತಿಗಳು ವರ್ಣಭೇದ, ಜಾತಿ ವ್ಯವಸ್ಥೆ ಮೂಲಕ ದೇಶವನ್ನ ಒಡೆಯುವ ಪ್ರಯತ್ನ ಮಾಡಿದರು. ಆ ಸಮಯದಲ್ಲಿ ನಾರಾಯಣ ಗುರು ಸಾಮರಸ್ಯವನ್ನ ಕಾಪಾಡಿ ಮನುಷ್ಯತ್ವವನ್ನ ಎತ್ತಿಹಿಡಿದರು' ಎಂದರು.

ಈ ವೇಳೆ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ರಜತ ಮಹೋತ್ಸವದ ಅಂಗವಾಗಿ ಪ್ರಸಾರಾಂಗದ 19 ವಿಭಿನ್ನ ಪುಸ್ತಕಗಳ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ , 'ಪುಸ್ತಕಗಳಿಗೆ ಸಾವಿಲ್ಲ.
ಪುಸ್ತಕಗಳು ಮಾತನಾಡುತ್ತವೆ. ಸುಖ - ದುಃಖಗಳ ಕುರಿತು ಪುಸ್ತಕಗಳು ಮಾತನಾಡುತ್ತವೆ' ಎಂದ ಅವರು ' ಬಡ್ಡಿ ಪೀಠ' ಗಳನ್ನ ' ಅಸಲಿ ಪೀಠ' ಮಾಡಬೇಕೆಂದು ಅವರು ಸಿಎಂ ಬಳಿ ಆಗ್ರಹಿಸಿದರು.

ಅರಣ್ಯ ಸಚಿವ ಬಿ.ರಮಾನಾಥ ರೈ 2016-17ನೆ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ದಾಖಲೆ ನಿರ್ಮಿಸಿರುವ ಮಂಗಳೂರು ವಿಶ್ವವಿದ್ಯಾ ನಿಲಯದ ಕ್ರೀಡಾಪಟುಗಳನ್ನು ಸನ್ಮಾನಿಸಿದರು.
ಶಾಸಕ ವಿನಯಕುಮಾರ್ ಸೊರಕೆ ಅಧ್ಯಯನ ಪೀಠದ ಬ್ರಹ್ಮಶ್ರೀ ನಾರಾಯಣಗುರು ಕುರಿತ ಪುಸ್ತಕವನ್ನು ಬಿಡುಗಡೆ ಮಾಡಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications