ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆ; ನೆಲ ಕಚ್ಚಿದ 7 ಮನೆಗಳು

ಮಂಗಳೂರು, ಆಗಸ್ಟ್ 9: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆ ಪರಿಣಾಮ ನೇತ್ರಾವತಿ, ಕುಮಾರಧಾರಾ, ಸ್ವರ್ಣಾ, ಸೀತಾ ಸಹಿತ ಪ್ರಮುಖ ನದಿಗಳು ಉಕ್ಕಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ಸ್ನಾನಘಟ್ಟ ಮುಳುಗಿದ್ದು, ನದಿಯ ನೀರಿನಿಂದ ಅಂಗಡಿಗಳು ಮುಳುಗಿವೆ. ಉಪನದಿ ದರ್ಪಣತೀರ್ಥ ಉಕ್ಕೇರಿದ್ದು, ರಾಜ್ಯ ಹೆದ್ದಾರಿ ಜಲಾವೃತಗೊಂಡಿದೆ. ಕುಲ್ಕುಂದ, ನೂಚಿಲ ಪ್ರದೇಶಗಳಲ್ಲಿ ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ.

ನೇತ್ರಾವತಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಬಂಟ್ವಾಳ- ಪಾಣೆಮಂಗಳೂರು ಭಾಗದಲ್ಲೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇಲ್ಲಿಯ 10ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ. ಜಿಲ್ಲೆಯಲ್ಲಿ ಗಾಳಿಗೆ ಮರ ಬಿದ್ದು, ಹಲವು ಮನೆಗಳು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

Karnataka Flood: Heavy Rain Continued In Dakshina Kannada District

ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ತಲಾ 13 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಎನ್‌ಡಿಆರ್ ಎಫ್ ನಿಯೋಜಿಸಲಾಗಿದೆ. ಸುಳ್ಯದ ಕಂದಡ್ಕ, ಮಿತ್ತೂರು, ಪಂಜ, ಅರಂಬೂರು, ಪೆರೋಡಿ, ಕಡಬದ ಉಚ್ಚಿಲ, ಕುಲ್ಕುಂದ ಮತ್ತು ಅಲಂಕಾರ್ ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

In Pics: ಕರ್ನಾಟಕದಲ್ಲಿ ಮಹಾ ಮಳೆ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುಕ್ಕಾವು ಸೇತುವೆ ಕೊಚ್ಚಿ ಹೋಗಿದೆ. ಪರಿಣಾಮವಾಗಿ ಸೋಮಂತಡ್ಕ- ಕಾಜೂರು ಸಂಪರ್ಕ ರಸ್ತೆ ಕಡಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 7 ಮನೆಗಳು ಕುಸಿದಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು- ಕೊಲ್ಲಿ, ಮಲವಂತಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಪಾಯದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+