ದಕ್ಷಿಣ ಕನ್ನಡ ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ
ಮಂಗಳೂರು, ಮಾರ್ಚ್ 5: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಪ್ರತ್ಯೇಕ 'ಆನೆ ಕಾರ್ಯಪಡೆ' (Elephant Task Force) ರಚನೆಗೆ ಅನುಮೋದನೆ ನೀಡಿದೆ.
ಜಿಲ್ಲೆಯ ಸುಳ್ಯ, ಕಡಬ, ಬೆಳ್ತಂಗಡಿ ಮತ್ತು ಪುತ್ತೂರು ಭಾಗಗಳಲ್ಲಿ ಹೆಚ್ಚುತ್ತಿರುವ ಆನೆಗಳ ದಾಳಿಯನ್ನು ತಡೆಗಟ್ಟುವುದು, ಬೆಳೆ ಹಾನಿ ತಪ್ಪಿಸುವುದು ಮತ್ತು ಮಾನವ ಜೀವಹಾನಿಯನ್ನು ನಿಯಂತ್ರಿಸುವುದು ಇದರ ಪ್ರಮುಖ ಉದ್ಧೇಶವಾಗಿದೆ. ಈ ವಿಶೇಷ ತಂಡವು ಒಟ್ಟು 28 ಸಿಬ್ಬಂದಿಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಪಶುವೈದ್ಯಕೀಯ ಅಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು ಸೇರಿದಂತೆ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಗಳು ಇರುತ್ತಾರೆ.

ಪ್ರಕಟಣೆಯಲ್ಲಿರುವ ಪ್ರಮುಖ ಅಂಶಗಳು
ಈ ಪಡೆಯು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ಸುಳ್ಯ ಭಾಗದಲ್ಲಿ ಮುಖ್ಯ ಕಚೇರಿತಲಿದ ಇರಲಿದೆ. ಆನೆಗಳು ಹೆಚ್ಚಾಗಿ ಬರುವ ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳಲ್ಲಿ ನಿರಂತರ ಗಸ್ತು ತಿರುಗಲಾಗುವುದು. ಆನೆಗಳು ಕಾಡಿನಿಂದ ಹೊರಬಂದ ತಕ್ಷಣವೇ ಅವುಗಳನ್ನು ಮರಳಿ ಅರಣ್ಯಕ್ಕೆ ಓಡಿಸುವ ಕೆಲಸ ಮಾಡಬಹುದು ಮಾಡುವುದು ಎಂದು ತಿಳಿಸಿದೆ.
ಮುನ್ನೆಚ್ಚರಿಕೆ ಸಂದೇಶ ರವಾನೆ
ಆನೆಗಳ ಓಡಾಟದ ಬಗ್ಗೆ ನಿಯಂತ್ರಣ ಕೊಠಡಿಯ ಮೂಲಕ ಸ್ಥಳೀಯ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಸಂದೇಶಗಳನ್ನು ರವಾನಿಸಲಾಗುವುದು. ಆನೆಗಳ ಚಲನವಲನ ಪತ್ತೆಹಚ್ಚಲು ಡ್ರೋನ್ ಮತ್ತು ಆಧುನಿಕ ಉಪಕರಣಗಳ ಬಳಕೆ. ಈ ಮೊದಲು ಮಂಗಳೂರು ವಿಭಾಗವು ಆನೆಗಳನ್ನು ಓಡಿಸಲು ಮಡಿಕೇರಿ ಅಥವಾ ಹಾಸನ ವಿಭಾಗದ ಕಾರ್ಯಪಡೆಯ ಮೇಲೆ ಅವಲಂಬಿತವಾಗಿತ್ತು. ಇದೀಗ ಈ ಹೊಸ ಪಡೆಯಿಂದಾಗಿ ಸ್ಥಳೀಯವಾಗಿ ವೇಗವಾಗಿ ಸ್ಪಂದಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದೆ.
ಬೆಳೆ ಹಾಗೂ ಮಾನವ ಜೀವ ಹಾನಿ
ಇತ್ತೀಚಿನ ವರ್ಷಗಳಲ್ಲಿ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ಅರಣ್ಯ ವಲಯಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿರುವುದರಿಂದ ಬೆಳೆ ಹಾನಿ ಹಾಗೂ ಕೆಲವೊಮ್ಮೆ ಮಾನವ ಜೀವ ಹಾನಿಯ ಘಟನೆಗಳು ಹೆಚ್ಚಾಗಿವೆ. ಇದುವರೆಗೆ ಆನೆಗಳನ್ನು ಮತ್ತೆ ಅರಣ್ಯ ಪ್ರದೇಶಗಳಿಗೆ ಓಡಿಸಲು ಮಡಿಕೇರಿ ವಿಭಾಗದಿಂದ ತಂಡಗಳನ್ನು ನಿಯೋಜಿಸಲಾಗುತ್ತಿತ್ತು. ಆದರೆ ಈ ತಂಡಗಳು ದೂರದಿಂದ ಬರಬೇಕಾಗಿರುವುದರಿಂದ ಪ್ರತಿಕ್ರಿಯೆಯಲ್ಲಿ ವಿಳಂಬವಾಗುತ್ತಿದೆ.
ಮಂಗಳೂರು ವಿಭಾಗಕ್ಕಾಗಿ ಪ್ರತ್ಯೇಕ ಕಾರ್ಯಪಡೆ
ಈ ಗಮನದಲ್ಲಿಟ್ಟುಕೊಂಡು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮಂಗಳೂರು ವಿಭಾಗಕ್ಕಾಗಿ ಪ್ರತ್ಯೇಕ ಕಾರ್ಯಪಡೆ (ಟಾಸ್ಕ್ ಫೋರ್ಸ್) ರಚಿಸಲು ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ಟಾಸ್ಕ್ ಫೋರ್ಸ್ನ ಮುಖ್ಯ ಕಚೇರಿ ಸುಳ್ಯದಲ್ಲಿ ಇರಲಿದ್ದು, ಇದು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕಾರ್ಯನಿರ್ವಹಿಸಲಿದೆ. ಈ ಭಾಗಕ್ಕೆ ವಿಶೇಷ ಟಾಸ್ಕ್ ಫೋರ್ಸ್ ಮಂಜೂರು ಮಾಡುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ಹಿಂದೆ ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications