ತೊಗರಿ ಬೇಳೆ ದಾಸ್ತಾನಿಗೆ ಸರ್ಕಾರದ ಕಡಿವಾಣ
ಮಂಗಳೂರು, ಜುಲೈ 07 : ತೊಗರಿ ಬೇಳೆ ಬೆಲೆ ಏರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಕರ್ನಾಟಕ ಸರ್ಕಾರ ಬೇಳೆ ದಾಸ್ತಾನಿಗೆ ನಿಯಮಾವಳಿ ರೂಪಿಸಿದೆ. ಸರ್ಕಾರದ ನಿಯಮ ಮೀರಿ ಹೆಚ್ಚು ದಾಸ್ತಾನು ಮಾಡಿದರೆ, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
ಆಹಾರ ಮತ್ತು ನಾಗರಿಕಾ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಅವರು ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದರು. ಬುಧವಾರ ಸಂಜೆ ಮಂಗಳೂರಿನಲ್ಲಿ ಮಾತನಾಡಿದ ಅವರು, 'ಅಗತ್ಯವಿರುವ ಆಹಾರ ಧಾನ್ಯಗಳ ಬೆಲೆ ಹೆಚ್ಚಳವಾಗಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ' ಎಂದರು. [ಎಪಿಎಂಸಿಯಲ್ಲಿ 130 ರೂ.ಗಳಿಗೆ ತೊಗರಿ ಬೇಳೆ ಲಭ್ಯ]

'ರಾಜ್ಯದ ಎಲ್ಲಾ ಚಿಲ್ಲರೆ ಅಂಗಡಿಗಳಲ್ಲಿ 50, ಗ್ರಾಮೀಣ ಭಾಗದ ಸಗಟು ವ್ಯಾಪಾರಿಗಳು 1000 ಮತ್ತು ನಗರ ಪ್ರದೇಶದ ಸಗಟು ವ್ಯಾಪಾರಿಗಳು 2000 ಕ್ವಿಂಟಾಲ್ ತೊಗರಿ ಬೇಳೆ ದಾಸ್ತಾನು ಮಾಡಬಹುದು. ಇದಕ್ಕಿಂತ ಹೆಚ್ಚು ಸಂಗ್ರಹ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಸಚಿವರು ಎಚ್ಚರಿಸಿದರು. [ಅಬ್ಬಾ...ದ್ವಿಶತಕದ ಗಡಿಬಿಟ್ಟು ಕೆಳಗಿಳಿದ ಬೇಳೆ ಕಾಳು]
'ದೇಶದಲ್ಲಿ ತೊಗರಿಬೇಳೆ, ಸಕ್ಕರೆ ಹಾಗೂ ಅಡುಗೆ ಎಣ್ಣೆ ಬೆಲೆ ಏರಿಕೆಯ ಹಿನ್ನಲೆಯಲ್ಲಿ ನಿಯಮಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಸಂಗ್ರಹಿಸಿರುವವರ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಪ್ರೋಟೀನ್ ಯುಕ್ತ ತೊಗರಿ ಬೇಳೆಯನ್ನು ಕೆಜಿಗೆ 130 ರೂ. ದರದಲ್ಲಿ ಮಾರಾಟ ಮಾಡುವಂತೆ ಎಪಿಎಂಸಿಗಳಿಗೆ ಆದೇಶ ನೀಡಲಾಗಿದೆ' ಎಂದು ಸಚಿವರು ಹೇಳಿದರು. [ಬೇಳೆಕಾಳು ಖರೀದಿಗೆ ಟೆಂಡರ್ ಆಹ್ವಾನಿಸಿದ ರಾಜ್ಯ ಸರ್ಕಾರ]
'ಸರ್ಕಾರ ನಿಗದಿಪಡಿಸಿದ ಬೆಲೆಗೆ ಸ್ವಲ್ಪ ಲಾಭಾಂಶ ಇಟ್ಟುಕೊಂಡು ತೊಗರಿ ಬೇಳೆ ಮಾರಾಟ ಮಾಡಬಹುದು. ಆದರೆ, ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ' ಎಂದು ಸ್ಪಷ್ಟಪಡಿಸಿದರು. 130 ರೂ. ದರದಲ್ಲಿ ಮೂರು ತಿಂಗಳ ಅವಧಿಗೆ ಮಾತ್ರ ತೊಗರಿ ಬೇಳೆ ದೊರೆಯಲಿದೆ. ಈ ಬಳಿಕ ಹೊಸ ತೊಗರಿ ಮಾರುಕಟ್ಟೆಗೆ ಬರುವುದರಿಂದ ಬೆಲೆ ಕಡಿಮೆಯಾಗಲಿದೆ' ಎಂದರು.
ಅಂದಹಾಗೆ ರಾಜ್ಯದ 144 ಎಪಿಎಂಸಿಗಳಲ್ಲಿ ಗ್ರೇಡ್ - 1 ಬೇಳೆ ಪ್ರತಿ ಕೆಜಿಗೆ ರೂ. 145 ಮತ್ತು ಗ್ರೇಡ್ -2 ಬೇಳೆ ಪ್ರತಿ ಕೆಜಿಗೆ ರೂ. 130 ದರದಲ್ಲಿ ಮಾರಾಟ ಮಾಡಲಾಗುತ್ತದೆ. ಜುಲೈ 8ರಿಂದ ಎಂಪಿಎಂಸಿಗಳಲ್ಲಿ ಈ ದರದಲ್ಲಿ ಬೇಳೆ ಲಭ್ಯವಾಗುತ್ತದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಶಾಸಕರ ಪ್ರಶ್ನೆಗೆ ಉತ್ತರ ಕೊಡಲು ಸಚಿವರ ನಿರಾಸಕ್ತಿ: ಸಭಾಧ್ಯಕ್ಷರಿಂದಲೇ ಸಭಾತ್ಯಾಗ | Karnataka Assembly Speaker -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications