ಪೊಲೀಸರು ಕರ್ತವ್ಯ ನಿಷ್ಠೆ, ಕಾನೂನು ಮರೆಯಬಾರದು: ಸಕ್ಸೇನಾ
ಮಂಗಳೂರು, ಜೂನ್ 19 : ಕೆಲವೊಮ್ಮೆ ಎಲ್ಲಾ ಸಮಸ್ಯೆಗಳನ್ನು ಭಾವನಾತ್ಮಕವಾಗಿ ಮಾನವೀಯ ನೆಲೆಯಲ್ಲಿ ಪೊಲೀಸರಿಗೆ ಪರಿಹರಿಸಲು ಸಾಧ್ಯವಾಗದಿದ್ದರೂ ಕರ್ತವ್ಯ ನಿಷ್ಠೆ ಹಾಗೂ ಕಾನೂನನ್ನು ಯಾವತ್ತೂ ಮರೆಯಬಾರದು ಎಂದು ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮಿರಾ ಸಕ್ಸೇನಾ ಅವರು ಪೊಲೀಸರಿಗೆ ಸಲಹೆ ನೀಡಿದರು.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು (ಸೋಮವಾರ) ರಾಜ್ಯ ಮಾನವ ಹಕ್ಕುಗಳ ಆಯೋಗ, ಪೊಲೀಸ್ ಇಲಾಖೆ, ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾ, ಅಕಾಡೆಮಿ ಆಫ್ ಗಾಂಧಿಯನ್ ಸ್ಟಡೀಸ್ ಆಶ್ರಯದಲ್ಲಿ ಮಾನವ ಹಕ್ಕು, ಲಿಂಗತ್ವ ಸಮಾನತೆ ಮತ್ತು ಮಾನವ ಕಳ್ಳ ಸಾಗಾಣಿಕೆ ಕುರಿತು ಪೊಲೀಸ್ ಸಿಬ್ಬಂದಿಗೆ ಆಯೋಜಿಸಲಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿ, ಪೊಲೀಸರು ತಮ್ಮ ಜತೆ ಅನುಚಿತವಾಗಿ ವರ್ತಿಸಿದ್ದಾರೆ, ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂಬುದಾಗಿ ದೂರು ನೀಡುವವರು ಆಯೋಗಕ್ಕೆ ದೂರುತ್ತಾರೆ. ಇದು ನಿಜಕ್ಕೂ ಬೇಸರದ ಸಂಗತಿ ಎಂದು ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮಿರಾ ಸಕ್ಸೇನಾ ಬೇಸರ ವ್ಯಕ್ತಪಡಿಸಿದರು.
ಕೆಲ ದೂರುಗಳು ಸುಳ್ಳೂ ಆಗಿರಬಹುದು. ಆದರೆ, ತಮ್ಮನ್ನು ರಕ್ಷಿಸಬೇಕಾದವರಿಂದಲೇ ತಮಗೆ ರಕ್ಷಣೆ ದೊರೆಯದಂತಹ ಪರಿಸ್ಥಿತಿ ಸಾರ್ವಜನಿಕರಿಗೆ ಎದುರಾಗಬಾರದು. ರಾತ್ರಿ ಹೊತ್ತು ಮನೆಗಳಿಗೆ ನುಗ್ಗಿ ನೋಟಿಸ್ ನೀಡದೆ ಬಂಧಿಸುವುದು.
ಕೆಲ ಪ್ರಕರಣಗಳಿಗೆ ಸಂಬಂಧಿಸಿ ಬಂಧಿತರ ವಿಚಾರಣೆ ವೇಳೆ ಸತ್ಯವನ್ನು ಹೊರತರಲೆಂದು ಅಮಾನುಷವಾಗಿ ಹೊಡೆಯುವುದು. ಹೊಡೆತ ತಿಂದವ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಇದು ವ್ಯತಿರಿಕ್ತ ಪರಿಣಾಮ ಬೀಳುತ್ತದೆ. ಇದು ಮಾನವ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications