ವರ್ಗಾವಣೆ ಚಿಂತೆಯಲ್ಲಿ ಪೊಲೀಸರು ಮಲಬಾರಿ ಬಂಧನ ಅವಕಾಶ ಕೈ ಬಿಟ್ಟರಾ?
ಮಂಗಳೂರು, ಆಗಸ್ಟ್ 8: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಆಪ್ತ, ವಿದೇಶಕ್ಕೆ ಪರಾರಿಯಾಗಿದ್ದ ರಶೀದ್ ಮಲಬಾರಿ ಬಂಧನದ ಅವಕಾಶ ಕೈ ತಪ್ಪಿ ಹೋಗಿದೆ. ಆತನನ್ನು ಬಂಧಿಸಿ, ರಾಜ್ಯಕ್ಕೆ ಕರೆತರುವುದಕ್ಕೆ ರಾಜ್ಯ ಪೊಲೀಸರಿಗೆ ಇದ್ದ ಬಂಗಾರದಂಥ ಅವಕಾಶ ಕಣ್ಣೆದುರೇ ಕರಗಿಹೋಗಿದೆ.
ಕಳೆದ ಜೂನ್ 28ರಂದು ಅಬುಧಾಬಿ ಪೊಲೀಸರು ರಶೀದ್ ಮಲಬಾರಿಯನ್ನು ಬಂಧಿಸಿದ್ದರು. ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಈ ರಶೀದ್ ಮಲಬಾರಿಯನ್ನು ಬಂಧಿಸಿ, ಕರೆತರುವ ವಿಚಾರವಾಗಿ ರಾಜ್ಯ ಪೊಲೀಸ್ ಇಲಾಖೆಯು ಮೀನ-ಮೇಷ ಎಣಿಸುತ್ತಿತ್ತು. ಅಷ್ಟರಲ್ಲಿ ಮಲಬಾರಿಯನ್ನು ಅಬುಧಾಬಿ ಪೊಲೀಸರು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಆ ನಂತರ ಮತ್ತೆ ಭೂಗತನಾಗಿದ್ದಾನೆ. ಅಲ್ಲಿಗೆ ರಶೀದ್ ಮಲಬಾರಿಯ ಬಂಧನಕ್ಕೆ ಇದ್ದ ಅವಕಾಶವನ್ನು ರಾಜ್ಯ ಪೊಲೀಸ್ ಇಲಾಖೆ ಕೈ ಚೆಲ್ಲಿದೆ. ಇದೀಗ ಈ ವೈಫಲ್ಯಕ್ಕೆ ಯಾರು ಕಾರಣ ಎಂಬ ಪ್ರಶ್ನೆ ಕೇಳಲಾರಂಭಿಸಿದೆ. ಬಾಂಗ್ಲಾದೇಶದ ವೀಸಾದಡಿ ನಕಲಿ ಪಾಸ್ ಪೋರ್ಟ್ ನಲ್ಲಿ ಪ್ರಯಾಣಿಸಿದ ರಶೀದ್ ಮಲಬಾರಿಯನ್ನು ಅಬುಧಾಬಿ ಪೊಲೀಸರು ಬಂಧಿಸಿದ್ದರು.

ರಾಜ್ಯದಲ್ಲಿ ಆಧಿಕಾರಕ್ಕೆ ಬಂದಿರುವ ಮೈತ್ರಿ ಸರಕಾರದಲ್ಲಿ ವರ್ಗಾವಣೆ ಬಯಸಿ, ಅದಕ್ಕಾಗಿ ಓಡಾಡಿಕೊಂಡಿದ್ದ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅವಾಂತರ ನಡೆದಿದೆ ಎಂಬುದು ಸದ್ಯಕ್ಕೆ ಜೋರಾಗಿ ಕೇಳಿಬರುತ್ತಿರುವ ಮಾಹಿತಿ. ರಶೀದ್ ನನ್ನು ವಶಕ್ಕೆ ಪಡೆಯಲು ರಾಜ್ಯ ಪೊಲೀಸರಿಗೆ 30 ದಿನಗಳ ಕಾಲಾವಕಾಶ ಇತ್ತು.
ಕರ್ನಾಟಕ, ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ತಮಿಳುನಾಡಿನಲ್ಲಿ ಹತ್ತಾರು ಪ್ರಕರಣಗಳಲ್ಲಿ ರಶೀದ್ ಮೋಸ್ಟ ವಾಂಟೆಡ್. ರಾಜ್ಯದ ಮಂಗಳೂರು, ಉಡುಪಿ, ಬೆಳಗಾವಿ, ಬೆಂಗಳೂರಿನಲ್ಲಿ ಕೊಲೆ, ಕೊಲೆಬೆದರಿಕೆ, ಅಪಹರಣ, ಬೆದರಿಕೆ , ಹಫ್ತಾ ವಸೂಲಿ ಸೇರಿದಂತೆ ಒಟ್ಟು 16 ಪ್ರಕರಣಗಳು ಅವನ ವಿರುದ್ಧ ದಾಖಲಾಗಿವೆ.
ರಶೀದ್ ಮಲಬಾರಿ ವಿರುದ್ಧದ ಆರೋಪ ಹಾಗೂ ಆತನಿಗೆ ದಾವೂದ್ ಇಬ್ರಾಹಿಂ ಜತೆಗೆ ಇರುವ ನಂಟನ್ನು ಸಾಬೀತುಪಡಿಸುವ ದಾಖಲಾತಿಗಳು ಮಂಗಳೂರು ಪೊಲೀಸರ ಬಳಿ ಇತ್ತು. ರಶೀದ್ ವಿರುದ್ಧ ಇರುವ ಎಲ್ಲ ದಾಖಲಾತಿಗಳನ್ನು ಒಟ್ಟಾಗಿಸಿ, ಇಂಟರ್ ಪೋಲ್ ಪೊಲೀಸರ ಮೂಲಕ ಅಬುಧಾಬಿಗೆ ರವಾನಿಸಿ, ಹಸ್ತಾಂತರ ಬೇಡಿಕೆಯನ್ನು ಕ್ರಮ ಬದ್ಧವಾಗಿ ಮಾಡಿದ್ದರೆ ಸಾಕಿತ್ತು. ಆತ ಇಷ್ಟೊತ್ತಿಗಾಗಲೇ ರಾಜ್ಯದ ಜೈಲಿನಲ್ಲಿರುತ್ತಿದ್ದ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications