ವಿಚಾರಣೆಗಾಗಿ ಡಾನ್ ಬನ್ನಂಜೆ ರಾಜಾ ಕರ್ನಾಟಕಕ್ಕೆ?
ಬೆಂಗಳೂರು, ಫೆ.13: ಅವಿಭಜಿತ ಉಡುಪಿ ಜಿಲ್ಲೆಯ ಬನ್ನಂಜೆ ಗ್ರಾಮದ ಪುಡಿ ರೌಡಿಯಾಗಿದ್ದ ರಾಜೇಂದ್ರ ಅಲಿಯಾಸ್ ರಾಜ ಈಗ ಮೊರೆಕ್ಕೋದಲ್ಲಿ ಬಂಧಿತನಾಗಿರುವ ಕುಖ್ಯಾತ ಭೂಗತ ಪಾತಕಿ. ಭಾರತದಲ್ಲಿ ಅನೇಕ ಪ್ರಕರಣಗಳಲ್ಲಿ ನಂ.1 ಆರೋಪಿಯಾಗಿರುವ ಈತನನ್ನು ಕರೆತಂದು ವಿಚಾರಣೆ ನಡೆಸಲು ಕರ್ನಾಟಕ ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಹೇಳಿದ್ದಾರೆ.
ಬನ್ನಂಜೆ ರಾಜಾಗೆ ಸಂಬಂಧಿಸಿದ ಪ್ರಕರಣಗಳ ವಿವರಗಳನ್ನು ಮಂಗಳೂರು ಪೊಲೀಸರು ಸರಕಾರಕ್ಕೆ ಗುರುವಾರ ಸಲ್ಲಿಸಿದ್ದಾರೆ.ಎಡಿಜಿಪಿ(ಕ್ರೈಂ ಹಾಗೂ ತಾಂತ್ರಿಕ ವಿಭಾಗ) ಎನ್ ಎಸ್ ಮೆಘರಿಖ್ ಅವರು ನೀಡಿರುವ ಮಾಹಿತಿ ಪ್ರಕಾರ ಮಂಗಳೂರು ಸಿಟಿ ಪೊಲೀಸ್ ಆಯುಕ್ತ ಎಸ್ ಮುರುಗನ್ ಅವರು ಈ ಕೇಸಿನ ಬೆಳವಣಿಗೆಗಳನ್ನು ಪರಿಶೀಲಿಸುತ್ತಿದ್ದಾರೆ.ಈ ವಿವರಗಳನ್ನು ಭಾರತ ಸರಕಾರ ಮೂಲಕ ಮೊರೆಕ್ಕೋಗೆ ಕಳುಹಿಸಬೇಕಾಗಿದೆ.[ರಾಜೇಂದ್ರ ಅಲಿಯಾಸ್ ಬನ್ನಂಜೆ ರಾಜಾ ಬಂಧನ]
ಮೊದಲು ಬಂಧಿತ ವ್ಯಕ್ತಿ ಬನ್ನಂಜೆ ರಾಜ ಎಂಬುದನ್ನು ಖಚಿತಪಡಿಸಿಕೊಳ್ಳಲು ಆತನ ಫೋಟೋ ಮತ್ತು ವಿವರಗಳನ್ನು ಸಲ್ಲಿಸಲಾಗಿದೆ. ಬಂಧಿತ ಬನ್ನಂಜೆ ರಾಜನೇ ಎಂದು ಖಚಿತವಾದ ಬಳಿಕ ಮುಂದಿನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಂಗಳೂರು ಪೊಲೀಸ್ ಮೂಲಗಳು ತಿಳಿಸಿವೆ.

ಶೀಘ್ರದಲ್ಲಿ ರಾಜಾನನ್ನು ಭಾರತಕ್ಕೆ ಹಸ್ತಾಂತರವಾದರೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ನಿಟ್ಟಿನಲ್ಲಿ ಮಂಗಳೂರು ಕಮಿಷನರ್ ವಿಭಾಗ ಸಿದ್ಧತೆ ನಡೆಸಿದೆ. ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಗುರುವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿದೆ.
ಜೊತೆಗೆ ನಗರ ಪೊಲೀಸರಿಗಿಂತ ಈ ಪ್ರಕರಣದ ಬಗ್ಗೆ ಕರ್ನಾಟಕ ಗೃಹ ಇಲಾಖೆ ಪರೀಶಿಲನೆ ಮುಖ್ಯವಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಮೊರಾಕ್ಕೋದಿಂದ ಉತ್ತರ ಬಂದ ಮೇಲೆ ತಿಳಿಸಲಾಗುವುದು ಎಂದು ಎಂಎನ್ ರೆಡ್ಡಿ ಹೇಳಿದ್ದಾರೆ.
ಬೆಂಗಳೂರು, ಉಡುಪಿ, ಮಂಗಳೂರು ಸೇರಿದಂತೆ 31ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೊಲೆ, ಪ್ರಾಣಬೆದರಿಕೆ, ಹಫ್ತಾವಸೂಲಿ, ಬ್ಲಾಕ್ಮೇಲ್ ಸೇರಿದಂತೆ ನಾನಾ ರೀತಿಯ ಗಂಭೀರ ಆರೋಪಗಳಿವೆ. ಉಡುಪಿ, ಮಂಗಳೂರು, ಬೆಂಗಳೂರಿನಲ್ಲಷ್ಟೇ ಅಲ್ಲದೆ ಮುಂಬೈ, ನವದೆಹಲಿಯಲ್ಲೂ ಉದ್ಯಮಿಗಳು, ಬಿಲ್ಡರ್ಗಳು ಹಾಗೂ ಚಿತ್ರರಂಗದವರನ್ನು ಬೆದರಿಸಿ ಹಣ ವಸೂಲಿ ಮಾಡಿರುವ ಆರೋಪ ಬನ್ನಂಜೆ ರಾಜಾನ ಮೇಲೆ ಇದೆ.
ರೆಡ್ ಕಾರ್ನರ್ ನೋಟಿಸ್ ಪಡೆದುಕೊಂಡು ತಲೆ ಮರೆಸಿಕೊಂಡಿದ್ದ ಉಡುಪಿ ಮೂಲದ ಭೂಗತ ಪಾತಕಿ ಬನ್ನಂಜೆ ರಾಜಾನನ್ನು ಉತ್ತರ ಆಫ್ರಿಕಾ ದೇಶದ ಮೊರಾಕ್ಕೊದಲ್ಲಿ ಫೆ.11ರಂದು ಬಂಧನಕ್ಕೊಳಗಾದ ಸುದ್ದಿ ಇದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications