ಮಲಯಾಳಂ ಭಾಷೆ ಕಡ್ಡಾಯದ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟನೆ
ಮಂಗಳೂರು, ಜೂನ್ 8: ಕೇರಳ ಸರಕಾರದ ಮಲಯಾಳಂ ಭಾಷೆ ಕಡ್ಡಾಯ ಸುಗ್ರೀವಾಜ್ಞೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹಾಗೂ ವಾಟಾಳ್ ನಾಗರಾಜ್ ತಂಡದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಕಾಸರಗೋಡು ಚಲೋ" ಹೆಸರಿನಲ್ಲಿ ಕರ್ನಾಟಕ-ಕೇರಳದ ಗಡಿಯನ್ನು ಬಲವಂತವಾಗಿ ಮುಚ್ಚಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ತಲಪಾಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಿದರು.ಈ ವೇಳೆ ಪೊಲೀಸರು ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾ ರಾ ಗೋವಿಂದ್, ಪ್ರವೀಣ್ ಶೆಟ್ಟಿ ಮತ್ತು ಇತರರನ್ನು ಬಂಧಿಸಿದ್ದಾರೆ.

ಇದಕ್ಕೂ ಮೊದಲು 'ಕಾಸರಗೋಡು ಚಲೋ' ಕಾರ್ಯಕ್ರಮಕ್ಕೆ ಉಡುಪಿಯಲ್ಲಿ ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಯ ಕ್ಲಾಕ್ ಟವರ್ ಎದುರು ಚಾಲನೆ ನೀಡಿದರು.

"ಕನ್ನಡ ಶಾಲೆಗಳು ಹೆಚ್ಚಾಗಿರುವ ಕಾಸರಗೋಡಿನಲ್ಲಿ ಮಲಯಾಳಂ ಭಾಷೆ ಕಡ್ಡಾಯದಿಂದ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಮೇಲೆ ಹೊಡೆತ ಬೀಳಲಿದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಂ ಕಡ್ಡಾಯ ಗೊಳಿಸಿರುವುದರಿಂದ ಕನ್ನಡ ಭಾಷೆ ನಶಿಸಿ ಹೋಗುತ್ತದೆ. ಆ ರೀತಿ ಆಗದಂತೆ ರಾಜ್ಯ ನಾಯಕರು ಎಚ್ಚರ ವಹಿಸಬೇಕಾಗಿದೆ. ಗಡಿನಾಡಿನಲ್ಲಿ ಕನ್ನಡಗರಿಗೆ ಆಗುತ್ತಿರುವ ತೊಂದರೆಗಳನ್ನು ಸರಕಾರ ಕೂಡಲೇ ಸರಿಪಡಿಸಬೇಕು. ರಾಜ್ಯ ರಾಜ್ಯಗಳ ಮಧ್ಯೆ ಉತ್ತಮ ಸಂಬಂಧ ಮೂಡಿ ಗಡಿ ಪ್ರದೇಶಗಳ ಅಭಿವೃದ್ಧಿ ಆಗಬೇಕು," ಎಂದು ಸ್ವಾಮೀಜಿ ತಿಳಿಸಿದರು.

"ಕಾಸರಗೋಡಿನಲ್ಲಿ ಕನ್ನಡಿಗರ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ನಮ್ಮನ್ನು ಆಳುವ ಸಂಸದರು, ಶಾಸಕರು ನಿದ್ದೆ ಮಾಡದೆ ಎಚ್ಚೆತ್ತುಕೊಳ್ಳಬೇಕಾಗಿದೆ. ಕಾಸರಗೋಡು ಕರ್ನಾಟಕ್ಕೆ ಸೇರಿಸಬೇಕೆಂಬ ಮಹಾಜನ್ ಆಯೋಗದ ವರದಿಯನ್ನು ಯಥಾವತ್ ಜಾರಿಗೊಳಿಸಬೇಕು. ಮುಂದೆ ಜೂ.12ರಂದು ರಾಜ್ಯ ಬಂದ್ಗೆ ಕರೆ ನೀಡಲಾಗಿದೆ," ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ತಿಳಿಸಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications