ಮಂಜೇಶ್ವರ : ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ
ಕಾಸರಗೋಡು, ಆ.4: ಮಹಿಳೆ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆಗೈದಿರುವ ಘಟನೆ ಮಂಜೇಶ್ವರದ ಬಾಯರ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೇವಕಿ(55), ಸದಾಶಿವ (54), ವಿಟ್ಲ(52) ಹಾಗೂ ಬಾಬು (50) ಎಂದು ಗುರುತಿಸಲಾಗಿದೆ. ಈ ಘಟನೆ ಸಂಬಂಧಿಸಿದಂತೆ ಈ ನಾಲ್ವರ ಸಂಬಂಧಿ ಉದಯ್ ಎಂಬಾಂತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸೋಮವಾರ ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಮನೆಯಲ್ಲಿ ಉದಯ್ ಅವರ ತಾಯಿ ಲಕ್ಷ್ಮಿ ಸೇರಿದಂತೆ ಮೃತಪಟ್ಟ ನಾಲ್ವರು ಟಿವಿ ನೋಡುತ್ತಾ ಕುಳಿತ್ತಿದ್ದರು. ಮಚ್ಚು ಹಿಡಿದುಕೊಂಡು ಮನೆಗೆ ಬಂದ ಉದಯ್ ಎಲ್ಲರನ್ನು ಕೊಚ್ಚಿ ಹಾಕಿದ್ದಾನೆ. ಲಕ್ಷ್ಮಿ ತಪ್ಪಿಸಿಕೊಂಡಿದ್ದಾರೆ.

ಉದಯ್ ಈ ರೀತಿ ಎಲ್ಲರನ್ನು ಕೊಲ್ಲಲು ಆಸ್ತಿ ಪಾಲು ವಿವಾದವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾನಸಿಕವಾಗಿ ಅಸ್ವಸ್ಥನಾಗಿದ್ದ ಉದಯ್, ಇತ್ತೀಚೆಗೆ ಸಾಮಾನ್ಯರಂತೆ ವರ್ತಿಸುತ್ತಿದ್ದ. ಘಟನೆ ನಂತರ ಮಚ್ಚಿನೊಂದಿಗೆ ಹೊರಗೆ ಹೋಗುತ್ತಿದ್ದ ಉದಯ್ ನನ್ನು ಗುರುತಿಸಿದ ಸ್ಥಳೀಯರು ಬಂಧಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications