ಕಾಸರಗೋಡು: 'ಮೆಸೇಜ್ ಟು ಕೇರಳ' ಗ್ರೂಪಲ್ಲಿ ಐಎಸ್ ಪರ ಸಂದೇಶ
ಕಾಸರಗೋಡು/ಮಂಗಳೂರು, ಮೇ 08 : ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ನ (ಐಎಸ್) ಸಿದ್ಧಾಂತಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚುರ ಪಡಿಸಲು ಯತ್ನಿಸುತ್ತಿದ್ದ ಶಂಕಿತ ಪ್ರಕರಣ ಕಾಸರಗೋಡಿನಲ್ಲಿ ಬೆಳಕಿಗೆ ಬಂದಿದೆ.
ಉಗ್ರಗಾಮಿ ಸಂಘಟನೆ ಐಸಿಸ್ ಪರ ಕಾಸರಗೋಡಿನ 'ಮೆಸೇಜ್ ಟು ಕೇರಳ' ಎಂಬ ಗ್ರೂಪ್ನಲ್ಲಿ ಅನುಮತಿ ಇಲ್ಲದೆ ಸೇರ್ಪಡೆಗೊಳ್ಳಲ್ಪಟ್ಟ ಅಣಂಗೂರು ನಿವಾಸಿ ಹಾರಿಸ್ ಮಸ್ತಾನ್ ಅವರಿಗೆ ವಾಟ್ಸಪ್ ಮೂಲಕ ಮಲಯಾಳಂ ಭಾಷೆಯಲ್ಲಿ ಸಂದೇಶವೊಂದು ಲಭಿಸಿದೆ. ಇದರಿಂದ ಆತಂಕಗೊಂಡ ಮಸ್ತಾನ್ ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದ ಕುರಿತು ಪೊಲೀಸರು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ ಐಎ) ಮಾಹಿತಿ ನೀಡಿದ್ದಾರೆ. 'ಮೆಸೇಜ್ ಟು ಕೇರಳ' ಎಂಬ ವಾಟ್ಸಪ್ ಗುಂಪಿಗೆ ಹ್ಯಾರಿಸ್ ಅವರನ್ನು ಯಾರೋ ಸೇರ್ಪಡೆಗೊಳಿಸಿದ್ದರು. ಈ ಗುಂಪಿನಲ್ಲಿ ಜಿಹಾದ್ ಅನ್ನು ಹೊಗಳಿ ಸಂದೇಶಗಳು ಬರುತ್ತಿದ್ದವು.
ಗುಂಪಿನ ಅಡ್ಮಿನ್ ಬಳಿ ಗುಂಪಿನ ಬಗ್ಗೆ ವಿವರಗಳನ್ನು ಕೇಳಿದಾಗ, ಮಲಯಾಳದಲ್ಲಿ ಧ್ವನಿ ಸಂದೇಶಗಳನ್ನು ಕಳುಹಿಸಿದ ಎಂದು ದೂರಿನಲ್ಲಿ ಹ್ಯಾರಿಸ್ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಆರಂಭ ಮಾಡಿದ್ದು, ಸಂದೇಶವು ಅಫ್ಘಾನಿಸ್ತಾನದ ನಂಬರೊಂದರಿಂದ ಬಂದದ್ದಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಹಾರಿಸ್ ಗೆ ಲಭಿಸಿದ ವಾಯ್ಸ್ ಮೆಸೇಜನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹಾಗೂ ರಾಜ್ಯ ಸ್ಪೆಷಲ್ ಬ್ರಾಂಚ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ನಂತರ ಇದನ್ನು ಪರಿಶೀಲಿಸಿದ ಎನ್ ಐಎ ತಂಡ ಕಾಸರಗೋಡಿಗೆ ಆಗಮಿಸಿ ಆ ಬಗ್ಗೆ ಸೂಕ್ತ ತನಿಖೆ ಆರಂಭಿಸಿದೆ ಎಂದು ತಿಳಿದು ಬಂದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications