Padma Shri: ಕಾಸರಗೋಡು ಭತ್ತದ ತಳಿಗಳ ಸಂರಕ್ಷಕನಿಗೆ ಒಲಿದ ಪದ್ಮಶ್ರೀ ಗೌರವ
ಮಂಗಳೂರು, ಜನವರಿ 27: ಗ್ರೋ ಬ್ಯಾಗ್ನಲ್ಲಿ ಭತ್ತದ ತಳಿಗಳನ್ನು ಪೋಷಿಸಿ ಸಂರಕ್ಷಿಸುತ್ತಿರುವ ಕೃಷಿಕನಿಗೆ ಈ ಬಾರಿಯ ಅತ್ಯುನ್ನತ ಪದ್ಮಶ್ರೀ ಪ್ರಸಸ್ತಿ ಒಲಿದು ಬಂದಿದೆ. ಕೇರಳದ ಕಾಸರಗೋಡು ಜಿಲ್ಲೆಯ ಬೊಳ್ಳೂರು ಗ್ರಾಮ ಪಂಚಯತ್ನ ಬೆಳೆರಿ ನಿವಾಸಿ ಸತ್ಯನಾರಾಯಣ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕೃಷಿಕರಾಗಿದ್ದಾರೆ.
ಸುಮಾರು 650ಕ್ಕೂ ಮಿಕ್ಕಿದ ವಿವಿಧ ತಳಿಗಳನ್ನು ಸಾಕಿ ಸಂರಕ್ಷಿಸುತ್ತಿರುವ ಸತ್ಯನಾರಾಯಣರ ಕೃಷಿಯನ್ನು ಗುರುತಿಸಿ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪೂರ್ವಜರಿಂದ ಬಳುವಳಿಯಾಗಿ ಬಂದ ಸುಮಾರು 4 ಎಕರೆ ಜಮೀನಿನಲ್ಲಿ ಕೃಷಿ ನಡೆಸಿಕೊಂಡು ಬರುತ್ತಿರುವ ಸತ್ಯನಾರಾಯಣ್ ತೋಟದಲ್ಲಿ ನೀರಿನ ಸಮಸ್ಯೆ ಇರುವ ಕಾರಣ ಹೆಚ್ಚಾಗಿ ರಬ್ಬರ್ ಬೆಳೆಯನ್ನೇ ಬೆಳೆಸಲಾಗಿದೆ.

ಜೊತೆಗೆ ಸ್ವಲ್ಪ ಅಡಿಕೆ, ತೆಂಗು ಹಾಗು ಇತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಮೊದಲು ಗ್ರೋ ಬ್ಯಾಗ್ ನಲ್ಲಿ ಭತ್ತದ ತಳಿಗಳನ್ನು ಬೆಳೆಸಲು ಆರಂಭಿಸಿದ ಸತ್ಯನಾರಾಯಣ್ ಗೆ ಚೆರ್ಕಾಡಿ ರಾಮಚಂದ್ರ, ಬೆಳ್ತಂಗಡಿಯ ಬಿ.ಕೆ. ದೇವರಾಯರು ನೂರಕ್ಕೂ ಮಿಕ್ಕಿದ ಭತ್ತದ ವಿವಿಧ ತಳಿಗಳನ್ನು ನೀಡಿದ್ದರು. ಅದರ ಜೊತೆಗೆ ಹಲವು ಕಡೆಗಳಿಂದ ಭತ್ತದ ತಳಿಗಳ ಸಂಗ್ರಹಿಸಿರುವ ಇವರ ಸಂಗ್ರಹದಲ್ಲಿ 650ಕ್ಕೂ ಮಿಕ್ಕಿದ ವಿವಿಧ ಭತ್ತದ ತಳಿಗಳಿವೆ.
ಭತ್ತದ ತಳಿಗಳ ಬೀಜಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನಲೆಯಲ್ಲಿ ನೀರಿನ ಸಮಸ್ಯೆ ಇದ್ದರೂ, ಭತ್ತದ ಕೃಷಿಗೆ ಸಮರ್ಪಕವಲ್ಲದ ಸುಮಾರು 25 ಸೆಂಟ್ಸ್ ಜಾಗದಲ್ಲಿ ಭತ್ತ ಬೆಳೆಯಲು ಆರಂಭಿಸಿದ್ದಾರೆ.
ತಳಿಗಳನ್ನು ಕೃಷಿ ವಿಶ್ವವಿದ್ಯಾನಿಲಯಗಳಿಗೆ, ಅಧ್ಯಯನಶೀಲ ವಿದ್ಯಾರ್ಥಿಗಳಿಗೆ, ಆಸಕ್ತ ಕೃಷಿಕರಿಗೆ ಉಚಿತವಾಗಿ ನೀಡುತ್ತಿರುವ ಸತ್ಯನಾರಾಯಣ್ ಮೂಲ ತಳಿಯನ್ನು ಸಂರಕ್ಷಿಸುವ ಕೆಲಸ ಅತ್ಯಂತ ಕಷ್ಟಕರ ಎನ್ನುತ್ತಾರೆ. ಅತ್ಯಂತ ಅಪರೂಪದ ಗಂಧಸಾಲೆ, ಜೀರಿಗೆಸಾಲೆ,ಕಳಮೆ, ರಕ್ತಸಾಲಿ, ಉಪ್ಪು ನೀರಿನಲ್ಲಿ ಬೆಳೆಯುವ ಕಗ್ಗ, ಜಪಾನ್ ತಳಿಯಾದ ವೈಲೆಟ್, ಶ್ರೀಲಂಕಾ ಮತ್ತು ಫಿಲಿಫೈನ್ಸ್ ನ ಹಲವು ತಳಿಗಳೂ ಇವರ ಸಂಗ್ರಹದಲ್ಲಿದೆ. ಒಂದು ಮೀಟರ್ ವ್ಯಾಪ್ತಿಯಲ್ಲಿ 7 ರಿಂದ 8 ತಳಿಗಳನ್ನು ಬೆಳೆಸುತ್ತಿದ್ದಾರೆ.
ಪ್ರಶಸ್ತಿ ದೊರತಿರುವುದಕ್ಕೆ ಅತ್ಯಂತ ಸಂತಸ ವ್ಯಕ್ತಪಡಿಸಿರುವ ಸತ್ಯನಾರಾಯಣ ಪ್ರಶಸ್ತಿಗೆ ಆಯ್ಕೆಯಾಗುವ ಯಾವ ನಿರೀಕ್ಷೆಯೂ ಇರಲಿಲ್ಲ ಎನ್ನುತ್ತಾರೆ. ಪ್ರಶಸ್ತಿಗೆ ನನ್ನಕ್ಕಿಂತ ಊರಿನ ಜನ ಹೆಚ್ಚು ಸಂತಸಪಡುತ್ತಿದ್ದಾರೆ. ಕೇಂದ್ರ ಸರಕಾರದಿಂದ ಈ ಹಿಂದೆಯೂ ಪ್ರಶಸ್ತಿ ದೊರೆತಿತ್ತು. ಆದರೆ ಪದ್ಮಶ್ರೀ ಯಂತಹ ಅತ್ಯುನ್ನತ ಪ್ರಶಸ್ತಿ ದೊರೆತಿರುವುದಕ್ಕೆ ಖುಷಿಯಾಗಿದೆ. ಇಂತಹ ಪ್ರಶಸ್ತಿಗಳು ಸಾಧನೆ ಮಾಡುವವರಿಗೆ ಪ್ರೇರಣೆಯಾಗುತ್ತದೆ. ಈ ರೀತಿಯ ಗುರುತಿಸುವಿಕೆ ಸಮಾಜಕ್ಕೆ ದೊಡ್ಡ ಆಸ್ತಿಯಾಗುತ್ತದೆ ಎನ್ನುತ್ತಾರೆ ಸತ್ಯ ನಾರಾಯಣ್. ಪತ್ನಿ ಜಯಶ್ರೀ ಮತ್ತು ಮೂರು ಮಕ್ಕಳಾದ ನವ್ಯಶ್ರೀ, ಗ್ರೀಶ್ಮಾ ಮತ್ತು ಅಭಿನವ್ ಎನ್ನುವ ಮೂವರು ಮಕ್ಕಳ ಸುಖೀ ಕುಟುಂಬ ಸತ್ಯನಾರಾಯಣರದ್ದಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications