ಭೂಮಿ, ಗೋವು, ನದಿ, ತಾಯಿಯ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ
ಮಂಗಳೂರು, ಮೇ 12: ಭೂಮಿ, ಗೋವು, ನದಿ ಮತ್ತು ಜನ್ಮ ಕೊಟ್ಟ ತಾಯಿಯ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ ಎಂದು ಕಾಶೀ ಮಠಾಧೀಶರಾದ ಸಂಯಂಮೀಂದ್ರರ ತೀರ್ಥ ಸ್ವಾಮೀಜಿಗಳು ಹೇಳಿದರು.
ಯೂತ್ ಆಫ್ ಜಿಎಸ್ ಬಿ ವತಿಯಿಂದ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಬೇಸಿಗೆ ಶಿಬಿರದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಶ್ರೀಗಳು, ಜನ್ಮ ಕೊಟ್ಟ ತಾಯಿ ಮಕ್ಕಳಿಂದ ಯಾವುದೇ ಅಪೇಕ್ಷೆ ಮಾಡುವುದಿಲ್ಲ. ಅದೇ ರೀತಿಯಲ್ಲಿ ನಮಗೆ ನೀರುಣಿಸುವ ನದಿ, ಫಲ ನೀಡುವ ಮರ ಹಾಗೂ ಹಾಲು ನೀಡುವ ಗೋವು ನಮ್ಮಿಂದ ಏನೂ ಫಲಾಪೇಕ್ಷೆ ಮಾಡದೇ ನಮ್ಮನ್ನು ಪೋಷಿಸುತ್ತವೆ.
ನದಿ ತನ್ನ ನೀರನ್ನು ತಾನು ಕುಡಿಯುವುದಿಲ್ಲ, ಮರಗಳು ತಾನು ಬೆಳೆದ ಫಲವನ್ನು ತಾನು ತಿನ್ನುವುದಿಲ್ಲ, ಗೋವು ಕೂಡ ಹಾಲನ್ನು ನೀಡುತ್ತದೆ ವಿನಃ ಅದಕ್ಕಾಗಿ ಏನನ್ನು ಇಟ್ಟುಕೊಳ್ಳುವುದಿಲ್ಲ. ಹಾಗೇ ತಾಯಿ ಕೂಡ ಮಕ್ಕಳಿಂದ ಏನನ್ನು ಬಯಸದೇ ಕೇವಲ ಮಕ್ಕಳ ಏಳಿಗೆಗಾಗಿ ದುಡಿಯುತ್ತಾಳ ಎಂದು ಶ್ರೀಗಳು ಈ ಸಂದರ್ಭದಲ್ಲಿ ಹೇಳಿದರು.

ಇವರುಗಳ ತ್ಯಾಗವನ್ನು ಇಂದಿನ ಮಕ್ಕಳು ಯಾವತ್ತೂ ಮರೆಯಬಾರದು ಎಂದು ಸಂಯಂಮೀಂದ್ರ ತೀರ್ಥ ಸ್ವಾಮೀಜಿಗಳು ಹೇಳಿದರು. ಮಕ್ಕಳು ಶಿಬಿರದಲ್ಲಿ ಕಲಿತ ಮಾಹಿತಿ, ಜ್ಞಾನವನ್ನು ಬದುಕಿನುದ್ದಕ್ಕೂ ಪಾಲಿಸಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಹೆಸರನ್ನು, ಮೌಲ್ಯವನ್ನು ಎತ್ತಿಹಿಡಿಯಲು ಶ್ರಮಿಸಬೇಕು ಎಂದು ಸ್ವಾಮೀಜಿಯವರು ಆರ್ಶೀವಚನ ನೀಡಿದರು.
ಉಚಿತ ಬೇಸಿಗೆ ಶಿಬಿರ ಮೇ 9 ರಿಂದ 12 ರ ತನಕ ನಾಲ್ಕು ದಿನಗಳ ಪರ್ಯಂತ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರ್ನಾಟಕ ವಿವಿಧ ಭಾಗಗಳಿಂದ ಮಾತ್ರವಲ್ಲ, ಮಹಾರಾಷ್ಟ್ರ, ಕೇರಳದ ಹಲವಾರು ಪ್ರದೇಶದಿಂದ ಮಕ್ಕಳು ಶಿಬಿರದಲ್ಲಿ ಭಾಗವಹಿಸಿದರು.
ಒಟ್ಟು 165 ಮಕ್ಕಳು ಶಿಬಿರದ ಪ್ರಯೋಜನ ಪಡೆದರು. ಶಿಬಿರದಲ್ಲಿ ಮಕ್ಕಳಿಗೆ ಯೋಗ, ವ್ಯಕ್ತಿತ್ವ ವಿಕಸನ, ವೇದ ಗಣಿತ, ಸಂಧ್ಯಾವಂದನೆ, ಮೌಲ್ಯ ಶಿಕ್ಷಣ, ಶ್ಲೋಕ ಪಠಣ, ಭಜನೆ, ಉದ್ಯೋಗ-ವ್ಯವಹಾರ ಜ್ಞಾನ, ನಾಯಕತ್ವ, ಸಂವಹನ, ವೃತ್ತಿ ಮಾರ್ಗದರ್ಶನ, ನಾಟಕ ಕಲೆ, ಪರೀಕ್ಷಾ ತಯಾರಿ ಸಹಿತ ಹಲವಾರು ಭೋದಕರಿಂದ, ಪರಿಣಿತರಿಂದ ಸಂವಹನ ಕಾರ್ಯಕ್ರಮ ನಡೆಯಿತು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರ ನೀಡಲಾಯಿತು.

ಚಾರ್ಟೆಡ್ ಅಕೌಂಟೆಂಟ್ ಜಗನ್ನಾಥ ಶೆಣೈ ಸ್ವಾಗತಿಸಿದರು. ಸುಧಾಕರ್ ಭಟ್ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಸಕ ವೇದವ್ಯಾಸ ಕಾಮತ್, ಆಯೋಜಕರಾದ ಯೋಗಿಶ್ ಕಾಮತ್, ಚೇತನ್ ಕಾಮತ್, ನರೇಶ್ ಪ್ರಭು, ಹನುಮಂತ ಕಾಮತ್, ಗೋಪಾಲಕೃಷ್ಣ ಭಟ್ ಸಹಿತ ಹಲವಾರು ಗಣ್ಯರು ಮತ್ತು ಮಕ್ಕಳ ಪೋಷಕರು ಭಾಗವಹಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications