ತಿರುಮಲಕ್ಕೆ ಆಗಮಿಸಿದ ಕಾಶೀ ಮಠಾಧೀಶರಿಗೆ ಟಿಟಿಡಿ ಭವ್ಯ ಸ್ವಾಗತ
ಮಂಗಳೂರು: ಅ 26: ಶ್ರೀಕಾಶೀಮಠ ಸಂಸ್ಥಾನದ ಮಠಾಧೀಶ ಹಾಗೂ 21ನೇ ಯತಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಶುಕ್ರವಾರ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು ಬಳಿಕ ಶ್ರೀ ದೇವರ ದರ್ಶನ ಪಡೆದರು.
ತಿರುಮಲ ತಿರುಪತಿ ದೇವಸ್ವಂ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶ್ರೀನಿವಾಸ ರಾಜು, ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಚಿನ್ನಂಗಾರಿ ರಮಣ, ಬೊಕ್ಕಸದ ಗುಮಾಸ್ತ ಗುರುಜಾ ರಾವ್, ಪೇಷ್ಕರ್ ಅವರು ಸ್ವಾಮೀಜಿ ಅವರನ್ನು ಸ್ವಾಗತಿಸಿ ತಿರುಮಲ ದೇವಳದ ವತಿಯಿಂದ ಶ್ರೀಗಳವರಿಗೆ ಸಕಲ ಗೌರವ , ಆದರಾತಿಥ್ಯ ದೊಂದಿಗೆ ದೇವಳಕ್ಕೆ ಬರಮಾಡಿಕೊಳ್ಳಲಾಯಿತು.
ತಿರುಮಲ ದೇವಸ್ಥಾನ ಸಂದರ್ಶಿಸಿದ ಸಂಯಮೀಂದ್ರ ತೀರ್ಥ ಸ್ವಾಮೀಜಿ ಲೋಕ ಕಲ್ಯಾಣಕ್ಕಾಗಿ ಮತ್ತು ಮನುಕುಲದ ಕ್ಷೇಮಾಭಿವೃದ್ಧಿಗಾಗಿ ಶ್ರೀ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀಗಳವರ ಜೊತೆಯಲ್ಲಿ ಮುಂಬೈಯ ಜಿ. ಜಿ. ಪ್ರಭು , ಮಂಗಳೂರು ಶ್ರೀ ವೆಂಕಟರಮಣ ದೇವಳದ ಮೊಕ್ತೇಸರರಾದ ಸಿ . ಎಲ್ .ಶೆಣೈ , ತಿರುಮಲ ಕಾಶಿ ಮಠದ ಕಾರ್ಯದರ್ಶಿ ಕಾಪು ನಾರಾಯಣ ಶೆಣೈ , ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರ ಜಗನ್ನಾಥ್ ಶೆಣೈ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ ಕಾಮತ್ , ಮಂಜೇಶ್ವರ ದೇವಳದ ಮೊಕ್ತೇಸರರಾದ ದಿನೇಶ್ ಕಾಮತ್ ಕೋಟೇಶ್ವರ ಇದ್ದರು.
ಇದರ ಜೊತೆಗೆ, ಮುಂಬೈ ಜಿಎಸ್ಬಿ ಸೇವಾ ಮಂಡಳದ ಯಶವಂತ್ ಕಾಮತ್, ಅಮಿತ್ ಪೈ, ಕಾಸರಗೋಡು ಶ್ರೀ ವೆಂಕಟರಮಣ ದೇವಳದ ನಾಗೇಶ್ ಕಾಮತ್, ಕನ್ನಂಗಾಡ್ ವೆಂಕಟರಮಣ ದೇವಳದ ನಾಗರಾಜ್ ನಾಯಕ್ , ದಹಿಸರ್ ಕಾಶಿ ಮಠದ ಮನೋಹರ್ ಕಾಮತ್ , ಕೊಚ್ಚಿ ವಿಶ್ವನಾಥ್ ಭಟ್ ಹಾಗೂ ಸಾವಿರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications