Get Updates
Get notified of breaking news, exclusive insights, and must-see stories!

ತಿರುಮಲಕ್ಕೆ ಆಗಮಿಸಿದ ಕಾಶೀ ಮಠಾಧೀಶರಿಗೆ ಟಿಟಿಡಿ ಭವ್ಯ ಸ್ವಾಗತ

ಮಂಗಳೂರು: ಅ 26: ಶ್ರೀಕಾಶೀಮಠ ಸಂಸ್ಥಾನದ ಮಠಾಧೀಶ ಹಾಗೂ 21ನೇ ಯತಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಶುಕ್ರವಾರ ತಿರುಮಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು ಬಳಿಕ ಶ್ರೀ ದೇವರ ದರ್ಶನ ಪಡೆದರು.

ತಿರುಮಲ ತಿರುಪತಿ ದೇವಸ್ವಂ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶ್ರೀನಿವಾಸ ರಾಜು, ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಚಿನ್ನಂಗಾರಿ ರಮಣ, ಬೊಕ್ಕಸದ ಗುಮಾಸ್ತ ಗುರುಜಾ ರಾವ್, ಪೇಷ್ಕರ್ ಅವರು ಸ್ವಾಮೀಜಿ ಅವರನ್ನು ಸ್ವಾಗತಿಸಿ ತಿರುಮಲ ದೇವಳದ ವತಿಯಿಂದ ಶ್ರೀಗಳವರಿಗೆ ಸಕಲ ಗೌರವ , ಆದರಾತಿಥ್ಯ ದೊಂದಿಗೆ ದೇವಳಕ್ಕೆ ಬರಮಾಡಿಕೊಳ್ಳಲಾಯಿತು.

ತಿರುಮಲ ದೇವಸ್ಥಾನ ಸಂದರ್ಶಿಸಿದ ಸಂಯಮೀಂದ್ರ ತೀರ್ಥ ಸ್ವಾಮೀಜಿ ಲೋಕ ಕಲ್ಯಾಣಕ್ಕಾಗಿ ಮತ್ತು ಮನುಕುಲದ ಕ್ಷೇಮಾಭಿವೃದ್ಧಿಗಾಗಿ ಶ್ರೀ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Kashi Mutt Seer grandly welcomed by TTD officials at Thirumala

ಈ ಸಂದರ್ಭದಲ್ಲಿ ಶ್ರೀಗಳವರ ಜೊತೆಯಲ್ಲಿ ಮುಂಬೈಯ ಜಿ. ಜಿ. ಪ್ರಭು , ಮಂಗಳೂರು ಶ್ರೀ ವೆಂಕಟರಮಣ ದೇವಳದ ಮೊಕ್ತೇಸರರಾದ ಸಿ . ಎಲ್ .ಶೆಣೈ , ತಿರುಮಲ ಕಾಶಿ ಮಠದ ಕಾರ್ಯದರ್ಶಿ ಕಾಪು ನಾರಾಯಣ ಶೆಣೈ , ಕೊಚ್ಚಿನ್ ತಿರುಮಲ ದೇವಳದ ಮೊಕ್ತೇಸರ ಜಗನ್ನಾಥ್ ಶೆಣೈ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ ಕಾಮತ್ , ಮಂಜೇಶ್ವರ ದೇವಳದ ಮೊಕ್ತೇಸರರಾದ ದಿನೇಶ್ ಕಾಮತ್ ಕೋಟೇಶ್ವರ ಇದ್ದರು.

ಇದರ ಜೊತೆಗೆ, ಮುಂಬೈ ಜಿಎಸ್ಬಿ ಸೇವಾ ಮಂಡಳದ ಯಶವಂತ್ ಕಾಮತ್, ಅಮಿತ್ ಪೈ, ಕಾಸರಗೋಡು ಶ್ರೀ ವೆಂಕಟರಮಣ ದೇವಳದ ನಾಗೇಶ್ ಕಾಮತ್, ಕನ್ನಂಗಾಡ್ ವೆಂಕಟರಮಣ ದೇವಳದ ನಾಗರಾಜ್ ನಾಯಕ್ , ದಹಿಸರ್ ಕಾಶಿ ಮಠದ ಮನೋಹರ್ ಕಾಮತ್ , ಕೊಚ್ಚಿ ವಿಶ್ವನಾಥ್ ಭಟ್ ಹಾಗೂ ಸಾವಿರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+