ಜೂನ್ 14 ರಿಂದ ಕಟೀಲು ದುರ್ಗಾಪರಮೇಶ್ವರಿ ದರ್ಶನ ಆರಂಭ
ಮಂಗಳೂರು, ಜೂನ್ 12: ಜೂನ್ 8 ರಿಂದ ರಾಜ್ಯಾದ್ಯಂತ ಈಗಾಗಲೇ ಹಲವು ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ. ಅದರಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಜೂನ್ 14 ರ ಭಾನುವಾರದಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.
Recommended Video
ಆದರೆ ಭಕ್ತರು ದೇವಸ್ಥಾನದ ವೆಬ್ ಸೈಟ್ ನಿಂದ ಉಚಿತವಾಗಿ ಇ-ಟಿಕೆಟ್ ಮೂಲಕ ತಮ್ಮ ದರ್ಶನದ ಅವಕಾಶವನ್ನು ಕಾಯ್ದಿರಿಸಬೇಕಾಗುತ್ತದೆ. ದೇವಸ್ಥಾನವೊಂದು ದೇವರ ದರ್ಶನಕ್ಕೆ ಇ-ಟಿಕೆಟ್ ಮೂಲಕ ಕಾದಿರಿಸುವ ವ್ಯವಸ್ಥೆ ಮಾಡಿರುವುದು ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದೆ. ದೇವರ ದರ್ಶನಕ್ಕೆ ಸರ್ಕಾರ ಕೆಲವೊಂದು ನಿಯಮಗಳನ್ನು ರೂಪಿಸಿರುವುದರಿಂದ ಇದನ್ನು ಪಾಲಿಸಲು ಕಟೀಲು ದೇವಸ್ಥಾನದಲ್ಲಿ ಕೊಂಚ ಕಷ್ಟವಾಗಿತ್ತು.
ಭಕ್ತರು ದೇವಸ್ಥಾನ ಭೇಟಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಮಾಡಬೇಕಾಗಿರುವುದರಿಂದ ಭಕ್ತರ ಸರತಿ ಸಾಲಿನ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇತ್ಯಾದಿ ಸಮಸ್ಯೆಗಳಿಗೆ ಸಿದ್ಧತೆಯ ಅಗತ್ಯ ಇತ್ತು. ಹಾಗಾಗಿ ಕಳೆದ ಜೂನ್ 8 ರಂದು ಕಟೀಲು ದೇಗುಲ ಭಕ್ತರ ದರ್ಶನಕ್ಕೆ ತೆರೆದಿರಲಿಲ್ಲ.

ಇದೀಗ ಜೂನ್ 14ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಲು ದೇಗುಲದ ವಠಾರದ ಅಲ್ಲಲ್ಲಿ ಬಾಕ್ಸ್ ಹಾಕಲಾಗಿದೆ. ಇ-ಪಾಸ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗಿದ್ದು, ಪ್ರಾಯೋಗಿಕವಾಗಿಯೂ ನೋಡಲಾಗಿದೆ ಎಂದು ದೇವಸ್ಥಾನದ ಅಡಳಿತ ಮಂಡಳಿ ತಿಳಿಸಿದೆ.
ಭಕ್ತರು ವೆಬ್ ಸೈಟ್ ಮೂಲಕ ನೋಂದಾಯಿಸಿ ದೇಗುಲಕ್ಕೆ ಬರಬಹುದಾಗಿದೆ. ಪ್ರತಿ ಹದಿನೈದು ನಿಮಿಷಕ್ಕೆ ಅರವತ್ತು ಜನರನ್ನು ದೇವಾಲಯಕ್ಕೆ ಭೇಟಿ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 7.30 ರಿಂದ ಸಂಜೆ 7.30 ರ ತನಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಸ್ಥಳೀಯ ಭಕ್ತರಿಗೆ ಇ-ಪಾಸ್ ಇಲ್ಲದೆ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ ಗಂಟೆ 6 ರಿಂದ 7.30 ರ ವರೆಗಿನ ಒಂದೂವರೆ ಗಂಟೆ ಸಮಯ ನಿಗದಿಪಡಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ಮಾಡಿ ಭಕ್ತರನ್ನು ಒಳ ಬಿಡಲಾಗುತ್ತದೆ. ಆದರೆ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications