ಕಟೀಲು ದುರ್ಗಾ ಪರಮೇಶ್ವರಿ ಅವಹೇಳನ, ಫೇಸ್ ಬುಕ್ ನಲ್ಲಿ ಕಿಡಿ
Recommended Video

ಮಂಗಳೂರು, ನವೆಂಬರ್ 02 : ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಿಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಅವಹೇಳನ ಮಾಡಲಾಗಿದೆ.
ಜಬ್ಬಾರ್ ಮಂಗಳೂರು ಎನ್ನುವ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಶ್ರೀ ರಾಮ, ಸೀತೆ, ಕಟೀಲು ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜ ಸೇರಿದಂತೆ ಎಲ್ಲಾ ಹಿಂದೂ ದೇವಿ-ದೇವರುಗಳ ವಿರುದ್ಧ ಅತ್ಯಂತ ಕೀಳುಮಟ್ಟದ ಅಸಹ್ಯಕರ ಭಾಷೆ ಬಳಸಿ ಪೋಸ್ಟ್ ಗಳನ್ನು ಹಾಕಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಫೇಸ್ಬುಕ್ ಖಾತೆಯ ವಿರುದ್ಧ ಹಾಗು ಅದನ್ನು ನಿರ್ವಹಿಸುತ್ತಿರುವ ಜಬ್ಬಾರ್ ಮಂಗಳೂರು ಎಂಬ ವ್ಯಕ್ತಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹಿಂದೆ ಜಬ್ಬಾರ್ ಬಿ.ಸಿ ರೋಡ್ ಎನ್ನುವ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಅವಹೇಳನಕಾರಿ ಬರಹ ಪೋಸ್ಟ್ ಮಾಡಲಾಗುತ್ತು. ಇದರಿಂದ ಕೆರಳಿದ್ದ ಹಿಂದೂ ಸಂಘಟನೆಗಳು ರಸ್ತೆಗಿಳಿದು ಹೋರಾಟ ನಡೆಸಿದ್ದವು.
ಈ ಪ್ರಕರಣದ ವಿರುದ್ಧ ಪ್ರತಿಭಟನೆಗಳ ಕಾವು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ, ಜಬ್ಬಾರ್ ಬಿ.ಸಿ ರೋಡ್ ಫೇಸ್ಬುಕ್ ಖಾತೆಯ ವಿರುದ್ಧ ತನಿಖೆ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಿದೀನ್ ಹಾಗೂ ಶಫಿ ಎಂಬುವವರನ್ನು ಬಂಧಿಸಲಾಗುತ್ತು.

ಇದೀಗ ಮತ್ತೆ ಜಬ್ಬಾರ್ ಮಂಗಳೂರು ಎನ್ನುವಾತ ಫೇಸ್ಬುಕ್ ಖಾತೆಯಲ್ಲಿ ದೇವಿ ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜ, ಶ್ರೀರಾಮ ಹಾಗೂ ಸೀತಾ ದೇವಿಯನ್ನು ಅತ್ಯಂತ ಅಶ್ಲೀಲ ಪದಗಳ ಮೂಲಕ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ್ದಾನೆ.
ಈ ವ್ಯಕ್ತಿ ಇದೀಗ ತನ್ನ ಖಾತೆಯನ್ನು ಡಿಲೀಟ್ ಮಾಡಿದ್ದರೂ, ಈತನ ಕಮೆಂಟ್ ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ .












Click it and Unblock the Notifications