ದೀಪಕ್ ರಾವ್ ಕೊಂದವರಿಗೆ ಹಿಡಿಶಾಪ ಹಾಕಿದ ಮಜೀದ್
ಕಾಟಿಪಳ್ಳ(ಮಂಗಳೂರು), ಜನವರಿ 04: 'ದೀಪಕ್ ರಾವ್ ತುಂಬಾ ಪ್ರಮಾಣಿಕ ಕೆಲಸಗಾರ, ಅವನ ಸಾವಿನ ದುಃಖ ಸಹಿಸಲು ಸಾಧ್ಯವಾಗುತ್ತಿಲ್ಲ. ದೀಪಕ್ ಕೊಂದವರು ನಾಶವಾಗಿ ಹೋಗಲಿ, ಅವರಿಗೆ ಗಲ್ಲು ಶಿಕ್ಷೆಯಾಗಲಿ' ಎಂದು ದೀಪಕ್ ಅವರು ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕ ಮಜೀದ್ ಕಣ್ಣೀರಿಟ್ಟಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಮಜೀದ್, ದೀಪಕ್ ನನ್ನ ಜತೆ 7 ವರ್ಷ ಕೆಲಸ ಮಾಡಿದ್ದ. ಸಿಮ್ ವಿತರಕನಾಗಿ ಕೆಲಸ ನಿರ್ವಹಿಸುತ್ತಿದ್ದ, ಒಳ್ಳೆಯ ಹುಡುಗ, ಎಲ್ಲರ ಜತೆ ಸ್ನೇಹ ಮನೋಭಾವ ಹೊಂದಿದ್ದ. ಆತನ ಹತ್ಯೆಗೆ ಕಾರಣ ಏನೆಂಬುದು ನನಗೆ ಗೊತ್ತಿಲ್ಲ. ಬಹುಶಃ ಈದ್ ಮಿಲಾದ್ ಬಂಟಿಂಗ್ಸ್ ಕಟ್ಟುವ ವಿಷಯದಲ್ಲಿ ಆದ ಸಣ್ಣ ಜಗಳ ಇದಕ್ಕೆ ಕಾರಣ ಇರಬಹುದು. ಮಿಕ್ಕಂತೆ ಅವನು ನಮ್ಮವರ ಅಂಗಡಿಗೆ ಹೋದಾಗಲೆಲ್ಲ ನಮ್ಮ ಭಾಷೆ(ಬ್ಯಾರಿ)ಯಲ್ಲೇ ಮಾತನಾಡುತ್ತಿದ್ದ. ಎಲ್ಲರ ಜತೆ ಚೆನ್ನಾಗಿ ಇರುತ್ತಿದ್ದ ಎಂದಿದ್ದಾರೆ.

ಅವನು ಮೊದಲು ಐಡಿಯಾ ಸಿಮ್ ವಿತರಣೆ ಮಾಡುತ್ತಿದ್ದ ನಂತರ ನನ್ನ ಜತೆ ಸೇರಿ ಏರ್ ಟೆಲ್ ಸಿಮ್ ವಿತರಣೆ, ನಂಬರ್ ಪೋರ್ಟಿಂಗ್ ಕೆಲಸ ಮಾಡುತ್ತಿದ್ದ. ಏಳು ವರ್ಷದಲ್ಲಿ ಒಮ್ಮೆ ಕೂಡಾ ಇಬ್ಬರಿಗೂ ಜಗಳವಾಗಿದ್ದಿಲ್ಲ. ಎಂದರು.
ಘಟನೆ ದಿನ ಬೆಳಗ್ಗೆ 9.30ಗೆ ಬಂದು 10 ಗಂಟೆ ಮೇಲೆ ಡಿಸ್ಟ್ರಿಬ್ಯೂಷನ್ ಗೆ ಹೋಗುತ್ತಿದ್ದ. ಅಂಗಡಿಗೆ ಬರುವ ಮುಂಚೆ ಕರೆ ಮಾಡಿದ್ದ. ನಾನು ಹೊರಗಡೆ ಬಂದು ನೋಡಿದಾಗ ಕಾರಿನಿಂದ ಬಂದಿದ್ದ ನಾಲ್ವರು ದುಷ್ಕರ್ಮಿಗಳು ದೀಪಕ್ ಕೊಚ್ಚಿಹಾಕಿದ್ದರು. ನಂತರ, ಫ್ರೆಂಡ್ ಒಬ್ಬರು ಸತೀಶ್ ಆಚಾರ್ಯ ಅವರನ್ನು ಕರೆದೆ ಇಬ್ಬರು ಸೇರಿ ಪೊಲೀಸರಿಗೆ ವಿಷಯ ತಿಳಿಸಿದೆವು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications