ವಾಲಿಬಾಲ್: ಕೇರಳ ಚಾಂಪಿಯನ್, ಕರ್ನಾಟಕ ರನ್ನರ್ ಅಪ್
ಮಂಗಳೂರು, ಜನವರಿ. 13 : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಬಾಲಕಿಯರ 19ರ ವಯೋಮಾನದ ವಾಲಿಬಾಲ್ ಪಂದ್ಯಾಟದಲ್ಲಿ ಕೇರಳ ತಂಡ ಅತಿಥೇಯ ಕರ್ನಾಟಕ ತಂಡವನ್ನು ಮಣಿಸಿ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಕೇರಳ ಮತ್ತು ಕರ್ನಾಟಕ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಕೇರಳ ತಂಡ (25-18, 25-23, 25-21)ನೇರ ಸೆಟ್ಗಳಲ್ಲಿ ಗೆಲುವನ್ನು ತನ್ನದಾಗಿಸಿಕೊಂಡಿತು.
ಕೇರಳದ ಪರವಾಗಿ ನಾಯಕಿ ಅನ್ನಾ ಮ್ಯಾಥ್ಯೂ ಹಾಗೂ ವರ್ಣಾ ಉತ್ತಮ ಹೊಡೆತಗಳ ಮೂಲಕ ಗಮನ ಸೆಳೆದರೆ, ಗ್ಲಾಡಿಯಸ್ ಅವರು ನಿರ್ಮಿಸಿದ ತಡೆಗೋಡೆ ಸದಾ ಕರ್ನಾಟಕವನ್ನು ಕಾಡಿತ್ತು.

ಕರ್ನಾಟಕದ ಪರವಾಗಿ ಮೇಘನಾ ಉತ್ತಮ ಪ್ರದರ್ಶನ ನೀಡಿದರು. ನಾಯಕಿ ಯಶೋಧಾ ಶಾಲಿ ಹಾಗೂ ಇತರರು ಬೆಂಬಲ ನೀಡಿದರೂ ಕೇರಳ ತಂಡದ ಎದುರು ಇವರ ಆಟ ನಡೆಯಲಿಲ್ಲ.
ಮೂರು ಹಾಗೂ ನಾಲ್ಕನೆ ಸ್ಥಾನಕ್ಕಾಗಿ ನಡೆದ ಪಂದ್ಯಾಟದಲ್ಲಿ ಉತ್ತರಪ್ರದೇಶ ತಂಡ ಪಶ್ಚಿಮ ಬಂಗಾಳ ತಂಡವನ್ನು 3-1 ಅಂತರದಲ್ಲಿ (25-19, 18-25, 25-22, 25-15) ಗೆಲುವನ್ನು ತನ್ನದಾಗಿಸಿಕೊಂಡರು.
ಗುರುವಾರ ಬೆಳಗ್ಗೆ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕೇರಳ ತಂಡ ಉತ್ತರಪ್ರದೇಶ ತಂಡವನ್ನು (25-15,25-10,25-19) ಅಂಕಗಳೊಂದಿಗೆ ನೇರ ಸೆಟ್ಗಳಲ್ಲಿ ಮಣಿಸಿ ಅಂತಿಮ ಹಣಾಹಣಿಗೆ ಅರ್ಹತೆಯನ್ನು ಪಡೆದುಕೊಂಡಿತ್ತು.
ಬಲವಾದ ಹೊಡೆತಗಳೊಂದಿಗೆ ಉತ್ತಮ ಆಟ ಪ್ರದರ್ಶಿಸಿದ ಕೇರಳ ತಂಡದ ಎದುರು ಯಾವುದೇ ಪ್ರತಿರೋಧ ವ್ಯಕ್ತಪಡಿಸಲು ಉತ್ತರಪ್ರದೇಶ ತಂಡಕ್ಕೆ ಸಾಧ್ಯವಾಗಲಿಲ್ಲ.
ಎರಡನೆಯ ಸೆಮಿಫೈನಲ್ ಪಂದ್ಯದಲ್ಲಿ ಅತಿಥೇಯ ಕರ್ನಾಟಕ ತಂಡ ಪಶ್ಚಿಮ ಬಂಗಾಳ ತಂಡವನ್ನು ನೇರ ಸೆಟ್ಗಳಲ್ಲಿ ಸೋಲಿಸಿದೆ(25-12, 25-18, 25-23) ಸಹಸ್ರಾರು ಬೆಂಬಲಿಗರ ಚಪ್ಪಾಳೆಯ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ರಾಜ್ಯ ತಂಡ ಯಾವ ಹಂತದಲ್ಲಿಯೂ ಪಶ್ಚಿಮ ಬಂಗಾಳ ತಂಡಕ್ಕೆ ಅವಕಾಶವನ್ನೇ ನೀಡಲಿಲ್ಲ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications