ಸೆ. 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರ
ಮಂಗಳೂರು, ಸೆಪ್ಟೆಂಬರ್ 14 : ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ಆರಂಭಿಸಲು ಕೇರಳ ರಸ್ತೆ ಸಾರಿಗೆ ನಿಗಮ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿದೆ.
ಕೇರಳ ಸೆಪ್ಟೆಂಬರ್ 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸೇವೆ ಆರಂಭಿಸಲಿದೆ. ಇದರಿಂದಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.
ಕೆಎಸ್ಆರ್ಟಿಸಿ ಮಂಗಳೂರು-ಕಾಸರಗೋಡು ನಡುವೆ ಬಸ್ ಸೇವೆ ಆರಂಭಿಸುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಸೆ. 21ರಂದು ಬಸ್ ಸಂಚಾರ ಆರಂಭವಾದರೆ ಕೇವಲ 40 ಪ್ರಯಾಣಿಕರು ಮಾತ್ರ ಸಂಚಾರ ನಡೆಸಲು ಅವಕಾಶ ನೀಡಲಾಗುತ್ತದೆ.

ಮಾರ್ಗಗಳು : ಕೇರಳ ರಸ್ತೆ ಸಾರಿಗೆ ನಿಗಮ ಮೊದಲ ಹಂತದಲ್ಲಿ ಕಾಸರಗೋಡು-ಮಂಗಳೂರು, ಕಾಸರಗೋಡು-ಪಂಜಿಕಲ್ಲು ಮಾರ್ಗದಲ್ಲಿ ಮಾತ್ರ ಬಸ್ಗಳನ್ನು ಓಡಿಸಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ ಸಂಚಾರ ನಡೆಸಲಿವೆ.
ಅಂತರರಾಜ್ಯಗಳ ಸಂಚಾರಕ್ಕೆ ಕೇಂದ್ರ ಗೃಹ ಇಲಾಖೆಯೇ ಒಪ್ಪಿಗೆ ನೀಡಿದೆ. ಆದ್ದರಿಂದ, ಕರ್ನಾಟಕ ಸಹ ಮಂಗಳೂರು-ಕಾಸರಗೋಡು ನಡುವೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಆರಂಭಿಸುವ ಸಾಧ್ಯತೆ ಇದೆ.
ಕೋವಿಡ್ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದಾಗ ಕೇರಳ ಮತ್ತು ಕರ್ನಾಟಕ ಗಡಿಯನ್ನು ಮುಚ್ಚಲಾಗಿತ್ತು. ಈ ವಿವಾದ ಸುಪ್ರೀಂಕೋರ್ಟ್ ತನಕ ಹೋಗಿತ್ತು. ಅಂತಿಮವಾಗಿ ಅಂಬ್ಯುಲೆನ್ಸ್ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಭಾನುವಾರ ದಕ್ಷಿಣ ಕನ್ನಡದಲ್ಲಿ 404 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 17,363ಕ್ಕೆ ಏರಿಕೆಯಾಗಿದೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications