ಸೆ. 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರ
ಮಂಗಳೂರು, ಸೆಪ್ಟೆಂಬರ್ 14 : ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ಆರಂಭಿಸಲು ಕೇರಳ ರಸ್ತೆ ಸಾರಿಗೆ ನಿಗಮ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿದೆ.
ಕೇರಳ ಸೆಪ್ಟೆಂಬರ್ 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸೇವೆ ಆರಂಭಿಸಲಿದೆ. ಇದರಿಂದಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.
ಮಂಗಳೂರು ಗಲಭೆ; 21 ಮಂದಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು
ಕೆಎಸ್ಆರ್ಟಿಸಿ ಮಂಗಳೂರು-ಕಾಸರಗೋಡು ನಡುವೆ ಬಸ್ ಸೇವೆ ಆರಂಭಿಸುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಸೆ. 21ರಂದು ಬಸ್ ಸಂಚಾರ ಆರಂಭವಾದರೆ ಕೇವಲ 40 ಪ್ರಯಾಣಿಕರು ಮಾತ್ರ ಸಂಚಾರ ನಡೆಸಲು ಅವಕಾಶ ನೀಡಲಾಗುತ್ತದೆ.
ಬೆಂಗಳೂರು-ಮಂಗಳೂರು ರೈಲು ಸೇವೆ ಪುನರಾರಂಭ
ಮಾರ್ಗಗಳು : ಕೇರಳ ರಸ್ತೆ ಸಾರಿಗೆ ನಿಗಮ ಮೊದಲ ಹಂತದಲ್ಲಿ ಕಾಸರಗೋಡು-ಮಂಗಳೂರು, ಕಾಸರಗೋಡು-ಪಂಜಿಕಲ್ಲು ಮಾರ್ಗದಲ್ಲಿ ಮಾತ್ರ ಬಸ್ಗಳನ್ನು ಓಡಿಸಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ ಸಂಚಾರ ನಡೆಸಲಿವೆ.
ಕಾಸರಗೋಡು-ದಕ್ಷಿಣ ಕನ್ನಡ ಗಡಿ ತೆರವಿಗೆ ಹೈಕೋರ್ಟ್ ಆದೇಶ
ಅಂತರರಾಜ್ಯಗಳ ಸಂಚಾರಕ್ಕೆ ಕೇಂದ್ರ ಗೃಹ ಇಲಾಖೆಯೇ ಒಪ್ಪಿಗೆ ನೀಡಿದೆ. ಆದ್ದರಿಂದ, ಕರ್ನಾಟಕ ಸಹ ಮಂಗಳೂರು-ಕಾಸರಗೋಡು ನಡುವೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಆರಂಭಿಸುವ ಸಾಧ್ಯತೆ ಇದೆ.
ಕೋವಿಡ್ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದಾಗ ಕೇರಳ ಮತ್ತು ಕರ್ನಾಟಕ ಗಡಿಯನ್ನು ಮುಚ್ಚಲಾಗಿತ್ತು. ಈ ವಿವಾದ ಸುಪ್ರೀಂಕೋರ್ಟ್ ತನಕ ಹೋಗಿತ್ತು. ಅಂತಿಮವಾಗಿ ಅಂಬ್ಯುಲೆನ್ಸ್ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಭಾನುವಾರ ದಕ್ಷಿಣ ಕನ್ನಡದಲ್ಲಿ 404 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 17,363ಕ್ಕೆ ಏರಿಕೆಯಾಗಿದೆ.