ಈ ದೇವರ ಮೀನುಗಳಿಗೆ ಆಹಾರ ಹಾಕಿದರೆ ಚರ್ಮ ರೋಗ ಮಾಯ!
ಮಂಗಳೂರು, ನವೆಂಬರ್ 07; ಈ ಪ್ರಕೃತಿ ಹಲವು ವಿಸ್ಮಯಗಳನ್ನು ಸೃಷ್ಠಿ ಮಾಡುತ್ತದೆ. ವೈದ್ಯ ಲೋಕಕ್ಕೂ ಅಚ್ಚರಿಯಾಗುವಂತಹ ವಿಚಾರಗಳು ಈ ಪ್ರಕೃತಿಯಲ್ಲಿ ಅಡಗಿದೆ. ಆಧುನಿಕ ಕಾಲದಲ್ಲಿ ಪವಾಡಗಳಿಗೆ ಮನ್ನಣೆಯಿಲ್ಲದಿದ್ದರೂ, ಜನರ ನಂಬಿಕೆಯಿಂದ ಮತ್ತು ಆಚರಣೆಯಿಂದ ಆ ವಿಸ್ಮಯಗಳು ಇಂದಿಗೂ ಅದೇ ಕುತೂಹಲತೆಯನ್ನು ಉಳಿಸಿಕೊಂಡಿದೆ.
ಇದೇ ರೀತಿ ದಕ್ಷಿಣ ಜಿಲ್ಲೆಯ ಸುಳ್ಯ ತಾಲೂಕಿನ ದೇವಾಲಯದಲ್ಲಿ ಇಂದಿಗೂ ಅಚ್ಚರಿ ಮೂಡಿಸುವಂತಹ ಘಟನೆಗಳು ನಡೆಯುತ್ತಿದೆ. ಸುಳ್ಯದ ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಹಳ್ಳದಲ್ಲಿರುವ ದೇವರ ಮೀನುಗಳಿಗೆ ಆಹಾರ ಹಾಕಿದರೆ ಸಾಕು ಮೈ ಮೇಲಿದ್ದ ಚರ್ಮ ರೋಗಗಳೆಲ್ಲಾ ಶಮನವಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಸುಳ್ಯದ ಪುರಾತನ ಕ್ಷೇತ್ರವಾದ ತೋಡಿಕಾನ ಮಲ್ಲಿಕಾರ್ಜುನ ಕ್ಷೇತ್ರದ ಪಕ್ಕದಲ್ಲೇ ಹರಿಯುವಂತಹ ಹಳ್ಳವೊಂದರಲ್ಲಿ ಸಾವಿರಾರು ಸಂಖ್ಯೆಯ ಮೀನುಗಳಿದ್ದು, ಈ ಮೀನುಗಳಿಗೆ ಅಕ್ಕಿ ಹಾಗೂ ಹೊದಲು ಹಾಕಿ ಪ್ರಾರ್ಥನೆ ಮಾಡಿಕೊಂಡಲ್ಲಿ ಎಲ್ಲಾ ರೀತಿಯ ಚರ್ಮರೋಗಗಳು ಮಾಯವಾಗುತ್ತದೆ ಎನ್ನುವ ನಂಬಿಕೆ ಇಲ್ಲಿನ ಭಕ್ತರದ್ದಾಗಿದೆ.

ಈ ನಂಬಿಕೆಯ ಹಿನ್ನಲೆಯಾಗಿ ಇಲ್ಲಿ ಪೌರಾಣಿಕ ಕಥೆಯೊಂದಿದೆ. ಕಣ್ವ ಮಹರ್ಷಿಯು ತೋಡಿಕಾನ ಕ್ಷೇತ್ರದಲ್ಲಿ ಶಿವಲಿಂಗವನ್ನು ಸ್ಥಾಪಿಸಿದರು ಎನ್ನುವ ಐತಿಹ್ಯವಿದೆ. ಕಣ್ವ ಮಹರ್ಷಿಗಳು ತೋಡಿಕಾನದ ಕಾನನದ ನಡುವೆಯೇ ತಮ್ಮ ತಪಸ್ಸನ್ನು ಮಾಡುತ್ತಿದ್ದ ಸಮಯದಲ್ಲಿ ಕ್ಷೇತ್ರದ ಪಕ್ಕದಲ್ಲೇ ಇರುವ ದೇವರಗುಂಡಿ ಎನ್ನುವ ಜಲಪಾತದಿಂದ ಶಿವಲಿಂಗವನ್ನು ತೋಡಿಕಾನ ಕ್ಷೇತ್ರಕ್ಕೆ ತರಲು ನಿರ್ಧರಿಸುತ್ತಾರೆ.
ಈ ಸಂದರ್ಭದಲ್ಲಿ ಕಣ್ವ ಮಹರ್ಷಿಗಳು ಶಿವನನ್ನು ಪ್ರಾರ್ಥಿಸಿದಾಗ ಶಿವ ಮಹರ್ಷಿಯ ಮುಂದೆ ಪ್ರತ್ಯಕ್ಷನಾಗುತ್ತಾನೆ. ಶಿವನ ಜೊತೆಗೆ ವಿಷ್ಣುವೂ ಮತ್ಸರೂಪದಲ್ಲಿ ಬಂದು ಮಹರ್ಷಿಯ ಇಚ್ಛೆಯಂತೆ ದೇವರಗುಂಡಿಯಲ್ಲಿ ಮುಳುಗಿ ಜಲಮಾರ್ಗವಾಗಿ ತೋಡಿಕಾನ ಕ್ಷೇತ್ರ ತಲುಪುತ್ತಾರೆ. ಶಿವನು ಮತ್ಸ್ಯ ವಾಹನನಾಗಿ ಕ್ಷೇತ್ರಕ್ಕೆ ಬಂದು ನೆಲೆ ನಿಲ್ಲುತ್ತಾನೆ.
ಕಣ್ವ ಮಹರ್ಷಿಗಳು ವಿಷ್ಣುವನ್ನು ಪ್ರಾರ್ಥಿಸಿ ಶಿವನ ಜೊತೆಗೆ ವಿಷ್ಣುವೂ ಕ್ಷೇತ್ರದಲ್ಲಿ ಸಾನಿಧ್ಯ ಪಡೆಯಬೇಕೆಂದು ಇಚ್ಚಿಸುತ್ತಾರೆ. ಈ ಕಾರಣಕ್ಕಾಗಿ ವಿಷ್ಣುವು ಮತ್ಸರೂಪದಲ್ಲಿ ಇಂದಿಗೂ ಈ ದೇವರಗುಂಡಿ ತೊರೆಯಲ್ಲಿ ನೆಲೆಸಿದ್ದಾನೆ ಎನ್ನುವುದು ಕ್ಷೇತ್ರ ಪುರಾಣವಾಗಿದೆ.

ಈ ಕಾರಣಕ್ಕಾಗಿಯೇ ಈ ತೊರೆಯಲ್ಲಿ ಲಕ್ಷಾಂತರ ಸಂಖ್ಯೆಯ ಮೀನುಗಳಿದ್ದು, ಈ ಎಲ್ಲಾ ಮೀನುಗಳು ತೋಡಿಕಾನ ಕ್ಷೇತ್ರದ ಪಕ್ಕದಲ್ಲೇ ನೆಲೆ ನಿಂತಿವೆ. ದೇಹಕ್ಕೆ ಕಾಡುವ ಚರ್ಮರೋಗಾಧಿಗಳ ನಿವಾರಣೆಗೆ ಇಲ್ಲಿಗೆ ಬಂದು ಪ್ರಾರ್ಥಿಸಿಕೊಂಡಲ್ಲಿ ಸಮಸ್ಯೆಗಳು ಬಗೆಹರಿಯುತ್ತವೆ ಎನ್ನುವುದು ಇಲ್ಲಿನ ನಂಬಿಕೆಯಾಗಿದೆ. ಮೀನುಗಳ ಬಳಿ ಬಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಲ್ಲಿ ಹಾಗೂ ಹರಕೆ ರೂಪದಲ್ಲಿ ಅಕ್ಕಿ ಹಾಗೂ ಹೊದಲು ಹಾಕುತ್ತೇನೆಂದು ಪ್ರಾರ್ಥಿಸಿಕೊಂಡಲ್ಲಿ ಚರ್ಮರೋಗ ನಿವಾರಣೆಯಾಗುತ್ತದೆ ಎನ್ನುವುದಕ್ಕೆ ಹಲವು ನಿದರ್ಶನಗಳೂ ಇಲ್ಲಿವೆ.
ಕೇವಲ ಹಿಂದೂ ಭಕ್ತಾಧಿಗಳಲ್ಲದೆ ಈ ಮೀನುಗಳಿಗೆ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರೂ ಬಂದು ಹರಕೆ ರೂಪದಲ್ಲಿ ಅಕ್ಕಿ ಹಾಗೂ ಹೊದಲು ಹಾಕುತ್ತಿದ್ದಾರೆ. ಅಲ್ಲದೆ ತೋಡಿಕಾನ ದೇವಸ್ಥಾನದಲ್ಲಿ ಬೆಳಗ್ಗಿನ ಪೂಜೆಯ ಬಳಿಕ ಅನ್ನ ಪ್ರಸಾದವನ್ನು ಮೊದಲು ಈ ಮೀನುಗಳಿಗೆ ಹಾಕುವ ಸಂಪ್ರದಾಯವನ್ನು ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ.
ಹರಕೆ ತೀರಿಸಿಕೊಳ್ಳಲು ದೇವರಗುಂಡಿ ತೊರೆಯ ಬಳಿ ಬರುವ ಭಕ್ತಾಧಿಗಳ ಕಾಲಿಗೆ ಕಚಗುಳಿಯಿಡುವ ಈ ಮೀನುಗಳು ಭಕ್ತರ ಮನಸ್ಸಿಗೆ ಮುದವನ್ನೂ ನೀಡುತ್ತದೆ. ದೇವರ ಮೀನುಗಳೆಂದೇ ಕರೆಯಲ್ಪಡುವ ಈ ಮೀನುಗಳನ್ನು ಹಿಡಿಯುವುದಾಗಲೀ, ಕೊಲ್ಲುವುದಾಗಲೀ ನಿಷಿದ್ಧವಾಗಿದೆ.
ಮೀನುಗಳಿಗೆ ಹರಕೆ ಹೊತ್ತರೆ ಚರ್ಮರೋಗ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ. ಈ ದೇವಾಲಯವು ಕರ್ನಾಟಕದ ಮುಜರಾಯಿ ಇಲಾಖೆಯ 'ಎ' ಶ್ರೇಣಿಯ ದೇವಾಲಯಗಳ ಪಟ್ಟಿಗೆ ಸೇರಿದೆ. ಸಾವಿರಾರು ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications