ಸೆಪ್ಟೆಂಬರ್ 23 ರಂದು ಕೊಂಕಣ ರೈಲ್ವೆ ಸಂಚಾರದಲ್ಲಿ ವ್ಯತ್ಯಯ
ಮಂಗಳೂರು, ಸೆಪ್ಟೆಂಬರ್. 21: ಕರಾವಳಿಯ ರೈಲು ಪ್ರಯಾಣಿಕರಿಗೆ ಸೆಪ್ಟೆಂಬರ್ 23 ರಂದು ಭಾನುವಾರ ಸಮಸ್ಯೆ ಎದುರಾಗಲಿದೆ. ಯಾಕೆಂದರೆ ಅಂದು ಕೊಂಕಣ ರೈಲ್ವೆ ಮಾರ್ಗದಲ್ಲಿ ಕಾರವಾರ ಹಾಗೂ ತೋಕೂರು ನಡುವೆ ಕೆಲ ಇಂಜಿನಿಯರಿಂಗ್ ಹಾಗೂ ವಿದ್ಯುದ್ದೀಕರಣದ ಕಾಮಗಾರಿಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ಅಂದು ಈ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನ ಸಂಚಾರವನ್ನು ರದ್ದುಗೊಳಿಸಲಾಗಿದ್ದು ಇನ್ನಿತರ ಪ್ರಮುಖ ರೈಲುಗಳ ಸಂಚಾರ ಸಮಯದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.
ಕರಾವಳಿಯ ಪ್ರಯಾಣಿಕರು ಸಹಕರಿಸುವಂತೆ ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಮಂಗಳೂರು ಸೆಂಟ್ರಲ್-ಮಡಗಾಂವ್- ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ ರೈಲು ನಂ.22636-22635 ಇಂಟರ್ ಸಿಟಿ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಸೆ.23ರಂದು ರದ್ದುಪಡಿಸಲಾಗಿದೆ.

ರೈಲು ನಂ. 12620 ಮಂಗಳೂರು ಸೆಂಟ್ರಲ್-ಕುರ್ಲಾ ಟರ್ಮಿನಸ್ ಮತ್ಸಗಂಧ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ನಿಂದ 2ಗಂಟೆ 45 ನಿಮಿಷ ತಡವಾಗಿ ಅಂದರೆ ಅಪರಾಹ್ನ 3:15ಕ್ಕೆ ಹೊರಡಲಿದೆ. ಅದಲ್ಲದೇ ರೈಲು ನಂ.56641 ಮಡಗಾಂವ್- ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲು ಅಂಕೋಲ ರೈಲ್ವೆ ನಿಲ್ದಾಣದಲ್ಲಿ 1 ಗಂಟೆ ನಿಲ್ಲಲಿದೆ.
ರೈಲು ನಂ. 12617 ಎರ್ನಾಕುಲಂ-ನಿಜಾಮುದ್ದೀನ್ 'ಮಂಗಳಾ ಲಕ್ಷದ್ವೀಪ' ಎಕ್ಸ್ಪ್ರೆಸ್ ತೊಕೂರಿನಲ್ಲಿ 20 ನಿಮಿಷ ನಿಲ್ಲಲಿದೆ. ರೈಲು ನಂ.22634 ನಿಜಾಮುದ್ದೀನ್- ತ್ರಿವೆಂಡ್ರಂ ಎಕ್ಸ್ಪ್ರೆಸ್ ಕುಂದಾಪುರ ರೈಲು ನಿಲ್ದಾಣದಲ್ಲಿ 45 ನಿಮಿಷ ನಿಲ್ಲಲಿದೆ.
ರೈಲು ನಂ.02198 ಜಬಲ್ ಪುರ-ಕೊಯಮತ್ತೂರು ವಿಶೇಷ ರೈಲು ಅಂಕೋಲ ರೈಲು ನಿಲ್ದಾಣದಲ್ಲಿ 1 ಗಂಟೆ 10 ನಿಮಿಷ ನಿಲ್ಲಲಿದೆ ಎಂದು ಕೊಂಕಣ್ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications