ಡಿ.1 ರಂದು ಮೂಡಬಿದರೆಯ ಪ್ರಸಿದ್ಧ ಕೋಟಿ ಚೆನ್ನಯ್ಯ ಕಂಬಳಕ್ಕೆ ಚಾಲನೆ
ಮಂಗಳೂರು, ನವೆಂಬರ್ 30: ಮೂಡಬಿದರೆಯ ಕಡಲಕೆರೆಯಲ್ಲಿ ನಡೆಯುವ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನಾಳೆ (ಡಿಸೆಂಬರ್.1) ಚಾಲನೆ ದೊರೆಯಲಿದೆ.
16ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ಜಿಲ್ಲೆಯಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಕಾನೂನಿನ ಚೌಕಟ್ಟಿನೊಳಗೆ ಅಹಿಂಸಾತ್ಮಕವಾಗಿ 24 ಗಂಟೆಯೊಳಗೆ ನಡೆಸಲಾಗುವುದು ಎಂದು ಕಂಬಳ ಸಮಿತಿ ತಿಳಿಸಿದೆ.
ಈ ಜೋಡು ಕೆರೆ ಕಂಬಳದಲ್ಲಿ ಈ ಬಾರಿ ಸುಮಾರು 150ಕ್ಕೂ ಅಧಿಕ ಜತೆ ಕೋಣಗಳು ಭಾಗವಹಿಸಲಿವೆ. ಕಂಬಳದಲ್ಲಿ ಬೆತ್ತವನ್ನು ಬಳಸಲಾಗುವುದಿಲ್ಲ. ಆದರೆ ಅತಿಥಿಗಳಿಗೆ ಬೆತ್ತವನ್ನು ಸ್ಮರಣಿಕೆಯಾಗಿ ನೀಡಲಾಗುವುದು ಎಂದು ಸಮಿತಿ ತಿಳಿಸಿದೆ.

ಈ ಬಾರಿ ಸ್ಪರ್ಧೆಯ ನಿಖರ ಫಲಿತಾಂಶಕ್ಕಾಗಿ ಲೇಸರ್ ಟೈಮಿಂಗ್ ಅಳವಡಿಸಲಾಗುವುದು ವಿಶೇಷವಾಗಿದೆ. ಕಂಬಳ ಅಭಿಮಾನಿಗಳಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ನಾಳೆ ಸಂಜೆ 6 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ.
ಕಂಬಳದ ಕ್ಷೇತ್ರದಲ್ಲಿ ಅಪಾರವಾಗಿ ಶ್ರಮಿಸಿರುವ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ, ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ನಾರಾವಿ ಯುವರಾಜ್ ಜೈನ್, ಕಂಬಳಕ್ಕಾಗಿ ಪ್ರೋತ್ಸಾಹ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಕಂಬಳದ ಪರ ಕೇಂದ್ರ ಸರಕಾರದಲ್ಲಿ ಸುಗ್ರೀವಾಜ್ಞೆ ತರಲು ಪ್ರಯತ್ನಿಸಿದ ಡಿ.ವಿ ಸದಾನಂದ ಗೌಡ ಅವರನ್ನು ಸನ್ಮಾನಿಸಲು ಕಂಬಳ ಸಮಿತಿ ತೀರ್ಮಾನಿಸಿದೆ.

ಕಂಬಳದ ಯಶಸ್ಸಿಗಾಗಿ 13 ಉಪಸಮಿತಿಗಳನ್ನು ರಚಿಸಿದ್ದು ಎಲ್ಲಾ ಪೂರ್ವ ಸಿದ್ಧತೆಗಳನ್ನು ನಡೆಸಲಾಗಿದೆ. ಸ್ಥಳೀಯರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೆಫ್ರಿಗಳಾಗಿ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications