ಕುಡ್ಲದಲ್ಲಿ ನವದುರ್ಗೆಯರ ದರ್ಶನ ಪಡೆದ ಜಿ ಪರಮೇಶ್ವರ
ಮಂಗಳೂರು, ಸೆ. 29: ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯ ದಲ್ಲಿ ನಡೆಯುತ್ತಿರುವ ನವರಾತ್ರಿ ಸಂಭ್ರಮದಲ್ಲಿ ಕೆಪಿಸಿಸಿ ಅದ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಗುರುವಾರದಂದು ಭಾಗಿಯಾದರು.
ಮಂಗಳೂರಿಗೆ ಆಗಮಿಸಿದ ಡಾ. ಜಿ ಪರಮೇಶ್ವರ್ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಿದರು.

ದೇವಾಲಯದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಜಿ. ಪರಮೇಶ್ವರ್, ಶ್ರೀ ಗೋಕರ್ಣನಾಥ ಹಾಗೂ ನವದುರ್ಗೆಯರ ದರ್ಶನ ಪಡೆದರು.
ಒಂಭತ್ತು ದಿನಗಳ ಕಾಲ ಶಾರದಾ ಮಾತೆ ಸಹಿತ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ನವರಾತ್ರಿಯನ್ನು ಆಚರಿಸಲಾಗುವ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಉತ್ಸವಕ್ಕೆ ದೀಪ ಬೆಳಗುವ ಮೂಲಕ ಜಿ. ಪರಮೇಶ್ವರ್ ಚಾಲನೆ ನೀಡಿದರು.
ಸಂಜೆ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ ಪರಮೇಶ್ವರ್ ಅವರು ಸಾಯಿಬಾಬಾ, ಹನುಮಾನ್, ಗೋಕರ್ಣನಾಥ, ಗಣೇಶ, ಸುಬ್ರಹ್ಮಣ್ಯ, ಮಹಾಲಕ್ಷ್ಮೀ, ವೀರಭದ್ರ, ನಾರಾಯಣ ಗುರು ಸನ್ನಿಧಾನದಲ್ಲಿ ಪ್ರಾರ್ಥನೆ ಹಾಗೂ ವಿಶೇಷ ಸಲ್ಲಿಸಿದರು.
ಬಳಿಕ ಶಾರದಾ ಮಾತೆ ಸಹಿತ ನವದುರ್ಗೆಯರ ಸನ್ನಿಧಾನದಲ್ಲೂ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಚಿವ ಯು.ಟಿ. ಖಾದರ್, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ದಸರಾಕ್ಕೆ ಚಾಲನೆ ನೀಡುವುದು ನನ್ನ ಸೌಭಾಗ್ಯ. ಶ್ರೀ ಕ್ಷೇತ್ರ ಒಂದು ಸಿದ್ಧಾಂತದ ಮೇಲೆ ಸ್ಥಾಪನೆಯಾಗಿದೆ. ಸೌಹಾರ್ದತೆಯಲ್ಲಿ ಬಾಳಬೇಕೆಂಬುದು ನಾರಾಯಣ ಗುರುಗಳ ಸಂದೇಶ. ಈ ಸಂದೇಶವನ್ನು ಶ್ರೀ ಕ್ಷೇತ್ರ ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದರು,
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications