'ಚಿಲ್ಲರೆ' ಜಗಳದಲ್ಲಿ ನದಿಗೆ ಹಾರಿದ್ದ ಕಂಡಕ್ಟರ್ ಶವ ಪತ್ತೆ
ಸುಬ್ರಹ್ಮಣ್ಯ, ಸೆಪ್ಟೆಂಬರ್ 28: ಸುಬ್ರಹ್ಮಣ್ಯದ ಕುಮಾರಧಾರ ನದಿಗೆ ಹಾರಿ ಕೊಚ್ಚಿ ಹೋಗಿದ್ದ ಕೆಎಸ್ ಆರ್ ಟಿಸಿ ಕಂಡಕ್ಟರ್ ದೇಹ ಬುಧವಾರ ಪತ್ತೆಯಾಗಿದೆ. ಸತತ ಮೂರು ದಿನಗಳ ಶೋಧ ಕಾರ್ಯಾಚರಣೆ ನಂತರ ಶವ ದೊರೆತಿದೆ. ಕಳೆದ ಭಾನುವಾರ ಸಂಜೆ ವೇಳೆ ಚಲಿಸುತ್ತಿದ್ದ ಬಸ್ ನಿಂದ ಕುಮಾರಧಾರ ನದಿಗೆ ಹಾರಿದ್ದ ಕಂಡಕ್ಟರ್ ದೇವದಾಸ್ (47) ಕೊಚ್ಚಿ ಹೋಗಿದ್ದರು.
ಸೋಮವಾರ ಬೆಳಗಿನಿಂದಲೇ ಪುತ್ತೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಗುಂಡ್ಯದ 15 ನುರಿತ ಈಜುಗಾರರನ್ನು ಒಳಗೊಂಡ ಮುಳುಗು ತಜ್ಞರ ತಂಡ ಕುಮಾರಧಾರ ನದಿಯಲ್ಲಿ ಶೋಧ ಕಾರ್ಯ ನಡೆಸಿತು. ದೇವದಾಸ್ ಅವರ ಪತ್ನಿ ಅಂಗನವಾಡಿ ಶಿಕ್ಷಕಿ ಅಸೌಖ್ಯದಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಅವರಿಗೆ ಸತ್ಯಾಂಶ ತಿಳಿಸದೆ ನೆರೆಹೊರೆಯವರು ಜಾಗೃತಿ ವಹಿಸುತ್ತಿದ್ದಾರೆ.['ಚಿಲ್ಲರೆ' ವ್ಯಾಜ್ಯಕ್ಕೆ ನೊಂದು ನದಿಗೆ ಹಾರಿದ ಕಂಡಕ್ಟರ್]

ಈ ದಂಪತಿಯ ಇಬ್ಬರು ಮಕ್ಕಳಲ್ಲಿ ಹಿರಿಯವನು ಸಿ.ಎ ವ್ಯಾಸಂಗ ಮಾಡುತ್ತಿದ್ದು, ಮಗಳು ಪದವಿ ಓದುತ್ತಿದ್ದಾಳೆ. ಕರ್ತವ್ಯದಲ್ಲಿದ್ದ ಸರಕಾರಿ ಉದ್ಯೋಗಿಯನ್ನು ಠಾಣೆಗೆ ಕರೆದು, ಎಸೈ ಇಲ್ಲದ ಸಮಯದಲ್ಲಿ ಬಟ್ಟೆ ಕಳಚಿ ತಪಾಸಣೆ ಮಾಡಿರುವುದು ಖಂಡನೀಯ. ಚಿಲ್ಲರೆ ವಿಷಯದಲ್ಲಿ ಕಡಬ ಠಾಣೆಯಲ್ಲಿ ಹಲ್ಲೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಈ ಕುರಿತು ತನಿಖೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಿಟ್ಟಣ್ಣ ರೈ ಗುರುಪುರ ಮತ್ತು ತಾ.ಪಂ. ಉಪಾಧ್ಯಕ್ಷ ಉದಯ ಭಟ್ ಒತ್ತಾಯಿಸಿದ್ದಾರೆ. ದೇವದಾಸ್ ಗೆ ಅತ್ಯುತ್ತಮ ಬಸ್ ನಿರ್ವಾಹಕ ಎಂಬ ಪ್ರಶಸ್ತಿಯೂ ಬಂದಿದೆ. ಅವರು ಚಿಲ್ಲರೆ ವಿಷಯದಲ್ಲಿ ಈ ಕೃತ್ಯ ಮಾಡುವವರಲ್ಲ ಎಂದು ಮೃತರ ಪುತ್ರ ಪವನ್ ಹೇಳಿದರು.[ಮಂಗಳೂರು: 5 ಜನ ಅಂತಾರಾಜ್ಯ ಕಳ್ಳರ ಬಂಧನ]
ಸತತ ಮೂರು ದಿನಗಳ ಶೋಧ ಕಾರ್ಯ ನಡೆಸಿದ ನಂತರ ಬುಧವಾರ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದಿಂದ ಎರಡು ಕಿ.ಮೀ ದೂರದ ಭಟ್ಟಕಯ ಬಳಿ ಕಂಡೆಕ್ಟರ್ ಶವ ಪತ್ತೆಯಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications