'ಚಿಲ್ಲರೆ' ವ್ಯಾಜ್ಯಕ್ಕೆ ನೊಂದು ನದಿಗೆ ಹಾರಿದ ಕಂಡಕ್ಟರ್
ದಕ್ಷಿಣ ಕನ್ನಡ, ಸೆಪ್ಟೆಂಬರ್ 26: ಯುವತಿಯೊಬ್ಬಳು ಚಿಲ್ಲರೆ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆಸಿದ ಕಾರಣಕ್ಕೆ ಬೇಸರ ಮಾಡಿಕೊಂಡ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಚಲಿಸುತ್ತಿದ್ದ ಬಸ್ ನಿಂದಲೇ ಕುಮಾರಧಾರ ನದಿಗೆ ಜಿಗಿದು, ಕೊಚ್ಚಿಹೋದ ಘಟನೆ ಭಾನುವಾರ ಸಂಭವಿಸಿದೆ.
ಮಂಗಳೂರಿನ ಗುರುಪುರ ಕೈ ಕಂಬದ ನಲವತ್ತು ವರ್ಷ ವಯಸ್ಸಿನ ದೇವದಾಸ್ ನದಿಗೆ ಹಾರಿದ ಕಂಡಕ್ಟರ್. ಭಾನುವಾರ ಸಂಜೆವರೆಗೆ ಅವರಿಗಾಗಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಮಂಗಳೂರಿನ ಒಂದನೇ ಘಟಕದ ಬಸ್ ನಲ್ಲಿ ದೇವದಾಸ್ ಕಂಡಕ್ಟರ್ ಆಗಿದ್ದರು. ಬೆಳಗ್ಗೆ ಹೊರಟು ಉಪ್ಪಿನಂಗಡಿ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ಕಡೆ ಸಂಚರಿಸುತ್ತಿತ್ತು.[ಬೆಂಗಳೂರಿನ ಗಿರಿನಗರದ ಭರತ್ ನೇತ್ರಾವತಿ ಪಾಲು]

ಮಂಗಳೂರಿನಲ್ಲಿ ಬಸ್ ಹತ್ತಿದ ಯುವತಿ ಟಿಕೆಟ್ ಪಡೆಯುವ ಸಂದರ್ಭದಲ್ಲೇ ಗೊಂದಲ ಉಂಟಾಗಿತ್ತು. ಆ ಯುವತಿ ಟಿಕೆಟ್ ಖರೀದಿಗಾಗಿ 500 ರು. ನೀಡಿದ್ದಾಗಿ ಹೇಳಿದರೆ, ದೇವದಾಸ್ 100 ರುಪಾಯಿ ಕೊಟ್ಟಿದ್ದೀರಿ ಎಂದಿದ್ದಾರೆ. ಈ ವಿಚಾರವಾಗಿ ಯುವತಿ ಮತ್ತು ಕಂಡಕ್ಟರ್ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಈ ಘಟನೆಯನ್ನು ದೇವದಾಸ್ ಕಡಬ ಪೊಲೀಸ್ ಠಾಣೆಯಲ್ಲಿ ವಿವರಿಸಿದ್ದರು. ಯುವತಿ ಅಲ್ಲಿಯೇ ಬಸ್ ಇಳಿದು, ಹೋಗಿದ್ದರು. ಬಳಿಕ ಬಸ್ ಸುಬ್ರಹ್ಮಣ್ಯದತ್ತ ತೆರಳಿತ್ತು. ಕುಮಾರಧಾರ ನದಿ ಸೇತುವೆ ಮೇಲೆ ಬಸ್ ಹೋಗುತ್ತಿದ್ದಾಗ ಕಂಡಕ್ಟರ್ ಸೀಟಿ ಊದಿದ್ದಾರೆ. ಬಸ್ ನಿಧಾನವಾಗುತ್ತದಲೇ ನೇರವಾಗಿ ನೀರಿಗೆ ಧುಮುಕಿದ ದೇವದಾಸ್ ನೀರುಪಾಲಾದರು.[ಹತ್ಯೆ ರಹಸ್ಯ: ಇಸ್ಮಾಯಿಲ್ ರನ್ನು ಕೊಂದಿದ್ದು ಸುಪಾರಿ ಕಿಲ್ಲರ್ಸ್!]
ಡೆತ್ನೋಟ್: ಕಡಬದಿಂದ ಸುಬ್ರಹ್ಮಣ್ಯದತ್ತ ಬಸ್ ಚಲಿಸುತ್ತಿದ್ದಾಗಲೇ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಳ್ಳಲು ಯೊಚಿಸಿರಬೇಕು ಎಂದು ಶಂಕಿಸಲಾಗಿದೆ. ಟಿಕೆಟ್ ಎಂಟ್ರಿಯ ಲಾಗ್ಶೀಟ್ನಲ್ಲಿ ಡೆತ್ನೋಟ್ ಬರೆದಿಟ್ಟಿದ್ದಾರೆ. 'ಮರ್ಯಾದೆ ಹೋಗಿ ಬದುಕುವುದಕ್ಕಿಂತ ಸಾಯುವುದೇ ಲೇಸು, ನನ್ನ ಸಹಪಾಠಿಗಳಿಗೆ ಕೊನೆ ಸಮಸ್ಕಾರ' ಎಂದು ಅವರು ಬರೆದಿರುವ ಡೆತ್ ನೋಟ್ ಅನ್ನು ಸುಬ್ರಹ್ಮಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications