ಜನರ ಮೆಚ್ಚುಗೆ ಗಳಿಸಿದ ಕುಡ್ಲದ ಪಿಲಿ ಪರ್ಬ 2023: ವಿಜೇತರ ವಿವರ ಇಲ್ಲಿದೆ
ಮಂಗಳೂರು, ಅಕ್ಟೋಬರ್ 23: ಕರಾವಳಿಯಲ್ಲಿ ಹುಲಿ ವೇಷವೆಂದರೆ ಎಲ್ಲರಿಗೂ ಕ್ರೇಝ್. ಮನೆಮನೆ, ಅಂಗಡಿ ಬೀದಿಗಳನ್ನು ಸುತ್ತಿ ಬ್ಯಾಂಡ್, ತಾಸೆಗಳ ಶಬ್ಧಗಳಗಳಿಗೆ ಸ್ಟೆಪ್ ಹಾಕುತ್ತಿದ್ದ ಹುಲಿವೇಷಕ್ಕೆ ಇತ್ತೀಚೆಗೆ ಭರ್ಜರಿ ವೇದಿಕೆಗಳು ಸೃಷ್ಟಿಯಾಗಿದೆ. ಈ ಮೂಲಕ ಹುಲಿವೇಷಗಳ ನಡುವೆ ಪಂಥ ನಡೆದು ಲಕ್ಷಾಂತರ ಮೊತ್ತದ ಬಹುಮಾನ ಇರುತ್ತದೆ.
ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಪಿಲಿಪರ್ಬದ ಪಂಥದಲ್ಲೂ ಕುಡ್ಲದ ಹುಲಿಗಳು ಭರ್ಜರಿ ನೃತ್ಯ ಪ್ರದರ್ಶಿಸಿ ಅಬ್ಬರಿಸಿತು. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಆಯೋಜನೆಗೊಂಡ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2023" ದಲ್ಲಿ ಹುಲಿವೇಷ ಸ್ಪರ್ಧಾಕೂಟ ನಡೆಯಿತು.

ದ.ಕ.ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ, ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪಿಲಿಪರ್ಬ ನಡೆಯಿತು. ಕರಾವಳಿಯ ಜನಪ್ರಿಯ 15 ಹುಲಿವೇಷ ತಂಡಗಳು ಈ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ವಿವಿಧ ಕಸರತ್ತು ಪ್ರದರ್ಶಿಸಿತು. ಜಿಲ್ಲೆಯ ಅತ್ಯಂತ ಪರಿಣಿತ ಆರು ಮಂದಿ ತೀರ್ಪುಗಾರರ ಸಮ್ಮುಖದಲ್ಲಿ, ಇಡೀ ದಿನ ಕಡಲನಗರಿ ಹುಲಿವೇಷಧಾರಿಗಳ ಭರ್ಜರಿ ಘರ್ಜನೆಗೆ ಸಾಕ್ಷಿಯಾಯಿತು.
ಪ್ರತೀ ಹುಲಿವೇಷ ತಂಡಗಳು ಮೆರವಣಿಗೆಯ ಮೂಲಕ ವೇದಿಕೆ ಪ್ರವೇಶಿಸಿ, 20 ನಿಮಿಷಗಳ ಕಾಲ ಪ್ರದರ್ಶನ ನೀಡಿತು. ಪ್ರತಿ ತಂಡವೂ 38 ಕೆ.ಜಿ. ಭಾರದ ಅಕ್ಕಿಮುಡಿ ಹಾರಿಸಿತು. ಕರಿಹುಲಿ, ಮರಿಹುಲಿ, ತಾಯಿ ಹುಲಿ, ಪಟ್ಟೆಹುಲಿ, ಚಿಟ್ಟೆ ಹುಲಿ ಹೀಗೆ ವೈವಿಧ್ಯಮಯ ಹುಲಿವೇಷಗಳು, ಭರ್ಜರಿ ತಾಸೆ - ಬ್ಯಾಂಡಿನ ಹಿಮ್ಮೇಳಕ್ಕೆ ಸಖತ್ ಸ್ಟೆಪ್ ಹಾಕಿತು.

ಸ್ಪರ್ಧಾಕೂಟ ನಡೆಯುವ ಮೈದಾನದಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಲು ಸುಸಜ್ಜಿತ ಪ್ರೇಕ್ಷಕ ಗ್ಯಾಲರಿ ನಿರ್ಮಿಸಲಾಗಿತ್ತು. ಸ್ಕ್ರೀನ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸ್ಪರ್ಧಾಳುಗಳಿಗೆ ಲಕ್ಷಾಂತರ ರೂ. ಮೊತ್ತದ ಬಹುಮಾನವೂ ಇತ್ತು. ಮಧ್ಯರಾತ್ರಿ ತನಕ ನಡೆದ ಪಿಲಿಪರ್ಬವನ್ನು ಜನ ಮಿಸುಕಾಡದೇ ತದೇಕಚಿತ್ತದಿಂದ ನೋಡಿದ್ದು ತುಳುನಾಡಿಗರಿಗೆ ಹುಲಿವೇಷದ ಮೇಲಿನ ಕ್ರೇಜ್ನ್ನು ನಿರೂಪಿಸಿತು.
ಪಿಲಿ ಪರ್ಬ 2023ರ ಚಾಂಪಿಯನ್ ಪ್ರಶಸ್ತಿಯನ್ನು ಜಗದಾಂಬಿಕಾ ಟೈಗರ್ಸ್ ಮುಳಿಹಿತ್ಲು, ದ್ವಿತೀಯ ಬಹುಮಾನವನ್ನು ನಂದಿಗುಡ್ಡೆ ಫ್ರೆಂಡ್ಸ್ ಬಾಬುಗುಡ್ಡೆ ತಂಡ ಪಡೆಯಿತು. ವೈಯುಕ್ತಿಕ ಪ್ರದರ್ಶನ, ಕಪ್ಪು ಹುಲಿ, ಉತ್ತಮ ಬಣ್ಣಗಾರಿಕೆ, ಉತ್ತಮ ತಾಸೆ ಸೇರಿದಂತೆ ಹಲವು ವೈಯಕ್ತಿಕ ಪ್ರಶಸ್ತಿಗಳನ್ನೂ ನೀಡಲಾಗಿದೆ.
15 ತಂಡಗಳ ತೀವ್ರ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ, "ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ" ತಂಡವು ಪಿಲಿಪರ್ಬ- 2023 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ಪುರಲ್ದಪ್ಪೆನ ಮೋಕೆದ ಬೊಲ್ಲಿಲು ಪೊಳಲಿ ಟೈಗರ್ಸ್ ತಂಡವು ತೃತೀಯ ಸ್ಥಾನವನ್ನು ಅಲಂಕರಿಸಿತು.
ಇನ್ನು ಪಿಲಿಪರ್ಬದ ವಿಶೇಷ ಬಹುಮಾನಗಳಾದ "ಕಪ್ಪು ಪಿಲಿ" ಪ್ರಶಸ್ತಿಯನ್ನು ಎಸ್.ಎಫ್.ಸಿ ಸೋಮೇಶ್ವರ ತಂಡ ಪಡೆದುಕೊಂಡರೆ, ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡವು "ಮರಿ ಹುಲಿ" ಪ್ರಶಸ್ತಿಯನ್ನು, ಬಹು ನಿರೀಕ್ಷಿತ ಪ್ರಶಸ್ತಿಯಾದ "ಪರ್ಬದ ಪಿಲಿ"ಯನ್ನು ಮಂಗಳೂರ್ ಫ್ರೆಂಡ್ಸ್ ಟೈಗರ್ಸ್ ಮುಳುಹಿತ್ಲು ಪಡೆದುಕೊಂಡಿತು.
ಶಿಸ್ತಿನ ತಂಡವಾಗಿ ಶಿವಶಕ್ತಿ ಟೈಗರ್ ಕುಂಜತ್ತೂರು ಮಂಜೇಶ್ವರ ಹೊರ ಹೊಮ್ಮಿದರೆ, ಬಣ್ಣಗಾರಿಕೆಯಲ್ಲಿ ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಹೆಚ್ಚುಗಾರಿಕೆ ಪಡೆಯಿತು. ಮುಡಿ ವಿಭಾಗದಲ್ಲಿ ವಿ.ಸಿ.ಎಸ್, ಮೂಡುಶೆಡ್ಡೆ (ವಿಷ್ಣು ಪಿಲಿಕುಲು) ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ತಾಸೆ ವಿಭಾಗದಲ್ಲಿ ಯಂಗ್ ಬಾಯ್ಸ್ ಮುಳುಹಿತ್ಲು ಮಂಗಳಾದೇವಿ ಹುಲಿ ತಂಡ ಎರಡೂ ಪ್ರಶಸ್ತಿಗಳನ್ನು ಬಾಚಿಕೊಂಡಿತು.
ಕಾರ್ಯಕ್ರಮಕ್ಕೆ ವಿಶೇಷ ತಾರಾ ಮೆರುಗು ನೀಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ, "ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ತುಳುನಾಡಿನ ಮಣ್ಣಿನ ಸೊಗಡನ್ನು ಇಡೀ ನಾಡಿಗೆ ಪಸರಿಸುವ ಅದ್ಭುತ ಕಾರ್ಯವನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ಕಾರ್ಯ ಗಮನಾರ್ಹವಾದುದು. ಅವರ ಶ್ರಮ ಹಾಗೂ ಉತ್ಸಾಹದಿಂದಲೇ ಈ ಕಾರ್ಯಕ್ರಮ ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ" ಎಂದು ಹೇಳಿದರು.
ಇದೇ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಡಿಸಿಪಿ ಅಂಶು ಕುಮಾರ್, ನಟರಾದ ವಸಿಷ್ಟ ಸಿಂಹ, ಅರ್ಜುನ್ ಕಾಪಿಕಾಡ್, ಸೇರಿದಂತೆ ಹಲವು ಗಣ್ಯರು ಹುಲಿಗಳ ಕುಣಿತವನ್ನು ವೀಕ್ಷಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications