ಕುದ್ರೋಳಿ ದೇವಾಲಯಕ್ಕೆ ಮತ್ತಿಬ್ಬರು ವಿಧವಾ ಅರ್ಚಕರು
ಮಂಗಳೂರು, ಸೆ. 29 : ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಇಬ್ಬರು ವಿಧವೆಯರನ್ನು ಅರ್ಚಕರಾಗಿ ನೇಮಕ ಮಾಡಿಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಲಾಗಿದೆ. ಸೋಮವಾರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅರ್ಚಕಿಯರು ಭಕ್ತಾದಿಗಳಿಗೆ ಪ್ರಸಾದ ವಿತರಣೆಯನ್ನು ಮಾಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಲಕ್ಷ್ಮೀ ಮತ್ತು ಚಂದ್ರಾವತಿ ಅವರನ್ನು ಅರ್ಚಕರಾಗಿ ನೇಮಕ ಮಾಡಿಕೊಳ್ಳಲಾಗಿದೆ. ಸೋಮವಾರ ಭವ್ಯ ಮೆರವಣಿಗೆಯಲ್ಲಿ ಮಹಿಳಾ ಅರ್ಚಕರನ್ನು ಕುದ್ರೋಳಿ ದೇವಾಲಯಕ್ಕೆ ಕರೆತರಲಾಯಿತು. ಕೇಂದ್ರದ ಮಾಜಿ ಸಚಿವ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅರ್ಚಕಿಯರನ್ನು ದೇವಾಲಯದ ಆವರಣದಲ್ಲಿ ಸ್ವಾಗತಿಸಿದರು. [ಕುದ್ರೋಳಿದೇವಾಲಯದ ಅರ್ಚಕರಾಗಿ ವಿಧವೆಯರು]

ಅರ್ಚಕಿಯರ ನೇಮಕದ ಬಗ್ಗೆ ಮಾತನಾಡಿದ ಜನಾರ್ದನ ಪೂಜಾರಿ ಅವರು, ನಾವು ಮಾತೃದೇವೋ ಭವಃ ಎಂದು ಹೇಳುತ್ತವೆ. ಅಂತೆಯೇ ನಾವು ವಿಧವೆಯರನ್ನು ಕೀಳಾಗಿ ನೋಡಬಾರದು ಅವರಿಗೆ ಗೌರವ ನೀಡಬೇಕು ಎಂದು ಹೇಳಿದರು. ದೇವಾಲಯ ಎಲ್ಲರನ್ನು ಮಾನವರಂತೆ ಕಾಣುತ್ತದೆ ಜಾತಿ, ಲಿಂಗ ಮುಂತಾದ ಯಾವುದೇ ತಾರತಮ್ಯ ಮಾಡುವುದಿಲ್ಲ. ಆದ್ದರಿಂದ ಅವರನ್ನು ಅರ್ಚಕಿಯರನ್ನಾಗಿ ನೇಮಕ ಮಾಡಲಾಗಿದೆ ಎಂದರು. [ಕುದ್ರೋಳಿ ದೇವಾಲಯದಲ್ಲಿ ದಸರಾ ಸಂಭ್ರಮ]
ಮಹಿಳಾ ಅರ್ಚಕಿಯರಿಗೆ ನಾವು ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿದ್ದೇವೆ. ದೇವಾಲಯದಲ್ಲಿ ನಿಯಮದಂತೆ ಪೂಜೆ ಸಲ್ಲಿಸಲು ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ಬ್ರಹ್ಮಶ್ರೀ ನಾರಾಯಣ ಗುರುವಿನ ತತ್ವವನ್ನು ಕುದ್ರೋಳಿ ದೇವಾಲಯದಲ್ಲಿ ಅನುಸರಿಸಲಾಗುತ್ತದೆ. ಗುರುಗಳ ಸಂದೇಶದ ಅನ್ವಯ ಮಹಿಳಾ ಅರ್ಚಕಿಯರನ್ನು ನೇಮಕ ಮಾಡಿಕೊಂಡಿದ್ದೇವೆ ಎಂದು ಜನಾರ್ದನ ಪೂಜಾರಿ ಸ್ಪಷ್ಟನೆ ನೀಡಿದರು.
ಕಳೆದ ವರ್ಷ ಸಹ ಇಬ್ಬರು ವಿಧವೆಯರನ್ನು ಅರ್ಚಕಿಯರನ್ನಾಗಿ ಕುದ್ರೋಳಿ ದೇವಾಲಯದಲ್ಲಿ ನೇಮಕ ಮಾಡಲಾಗಿತ್ತು. ಕಳೆದ ಒಂದು ವರ್ಷದಿಂದ ಅವರು ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಸದ್ಯ, ಪರಿಶಿಷ್ಟ ಜಾತಿ ಮತ್ತು ಪಂಗಡದ ಇಬ್ಬರನ್ನು ಅರ್ಚಕಿಯರನ್ನಾಗಿ ನೇಮಕ ಮಾಡಿಕೊಂಡಿರುವುದರಿಂದ ಇತಿಹಾಸ ನಿರ್ಮಿಸಿದಂತಾಗಿದೆ. [ಚಿತ್ರ : ಐಸಾಕ್ ರಿಚರ್ಡ್ ಮಂಗಳೂರು]
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications