ಕುದ್ರೋಳಿ ದೇವಾಲಯಕ್ಕೆ ಮತ್ತಿಬ್ಬರು ವಿಧವಾ ಅರ್ಚಕರು
ಮಂಗಳೂರು, ಸೆ. 29 : ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಇಬ್ಬರು ವಿಧವೆಯರನ್ನು ಅರ್ಚಕರಾಗಿ ನೇಮಕ ಮಾಡಿಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಲಾಗಿದೆ. ಸೋಮವಾರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅರ್ಚಕಿಯರು ಭಕ್ತಾದಿಗಳಿಗೆ ಪ್ರಸಾದ ವಿತರಣೆಯನ್ನು ಮಾಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಲಕ್ಷ್ಮೀ ಮತ್ತು ಚಂದ್ರಾವತಿ ಅವರನ್ನು ಅರ್ಚಕರಾಗಿ ನೇಮಕ ಮಾಡಿಕೊಳ್ಳಲಾಗಿದೆ. ಸೋಮವಾರ ಭವ್ಯ ಮೆರವಣಿಗೆಯಲ್ಲಿ ಮಹಿಳಾ ಅರ್ಚಕರನ್ನು ಕುದ್ರೋಳಿ ದೇವಾಲಯಕ್ಕೆ ಕರೆತರಲಾಯಿತು. ಕೇಂದ್ರದ ಮಾಜಿ ಸಚಿವ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅರ್ಚಕಿಯರನ್ನು ದೇವಾಲಯದ ಆವರಣದಲ್ಲಿ ಸ್ವಾಗತಿಸಿದರು. [ಕುದ್ರೋಳಿದೇವಾಲಯದ ಅರ್ಚಕರಾಗಿ ವಿಧವೆಯರು]

ಅರ್ಚಕಿಯರ ನೇಮಕದ ಬಗ್ಗೆ ಮಾತನಾಡಿದ ಜನಾರ್ದನ ಪೂಜಾರಿ ಅವರು, ನಾವು ಮಾತೃದೇವೋ ಭವಃ ಎಂದು ಹೇಳುತ್ತವೆ. ಅಂತೆಯೇ ನಾವು ವಿಧವೆಯರನ್ನು ಕೀಳಾಗಿ ನೋಡಬಾರದು ಅವರಿಗೆ ಗೌರವ ನೀಡಬೇಕು ಎಂದು ಹೇಳಿದರು. ದೇವಾಲಯ ಎಲ್ಲರನ್ನು ಮಾನವರಂತೆ ಕಾಣುತ್ತದೆ ಜಾತಿ, ಲಿಂಗ ಮುಂತಾದ ಯಾವುದೇ ತಾರತಮ್ಯ ಮಾಡುವುದಿಲ್ಲ. ಆದ್ದರಿಂದ ಅವರನ್ನು ಅರ್ಚಕಿಯರನ್ನಾಗಿ ನೇಮಕ ಮಾಡಲಾಗಿದೆ ಎಂದರು. [ಕುದ್ರೋಳಿ ದೇವಾಲಯದಲ್ಲಿ ದಸರಾ ಸಂಭ್ರಮ]
ಮಹಿಳಾ ಅರ್ಚಕಿಯರಿಗೆ ನಾವು ಎಲ್ಲಾ ರೀತಿಯ ಸ್ವಾತಂತ್ರ್ಯ ನೀಡಿದ್ದೇವೆ. ದೇವಾಲಯದಲ್ಲಿ ನಿಯಮದಂತೆ ಪೂಜೆ ಸಲ್ಲಿಸಲು ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ಬ್ರಹ್ಮಶ್ರೀ ನಾರಾಯಣ ಗುರುವಿನ ತತ್ವವನ್ನು ಕುದ್ರೋಳಿ ದೇವಾಲಯದಲ್ಲಿ ಅನುಸರಿಸಲಾಗುತ್ತದೆ. ಗುರುಗಳ ಸಂದೇಶದ ಅನ್ವಯ ಮಹಿಳಾ ಅರ್ಚಕಿಯರನ್ನು ನೇಮಕ ಮಾಡಿಕೊಂಡಿದ್ದೇವೆ ಎಂದು ಜನಾರ್ದನ ಪೂಜಾರಿ ಸ್ಪಷ್ಟನೆ ನೀಡಿದರು.
ಕಳೆದ ವರ್ಷ ಸಹ ಇಬ್ಬರು ವಿಧವೆಯರನ್ನು ಅರ್ಚಕಿಯರನ್ನಾಗಿ ಕುದ್ರೋಳಿ ದೇವಾಲಯದಲ್ಲಿ ನೇಮಕ ಮಾಡಲಾಗಿತ್ತು. ಕಳೆದ ಒಂದು ವರ್ಷದಿಂದ ಅವರು ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಸದ್ಯ, ಪರಿಶಿಷ್ಟ ಜಾತಿ ಮತ್ತು ಪಂಗಡದ ಇಬ್ಬರನ್ನು ಅರ್ಚಕಿಯರನ್ನಾಗಿ ನೇಮಕ ಮಾಡಿಕೊಂಡಿರುವುದರಿಂದ ಇತಿಹಾಸ ನಿರ್ಮಿಸಿದಂತಾಗಿದೆ. [ಚಿತ್ರ : ಐಸಾಕ್ ರಿಚರ್ಡ್ ಮಂಗಳೂರು]
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications